AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುಲ್ಕ ಹೆಚ್ಚಳ: ಬೀದಿಗಿಳಿದ ವಿದ್ಯಾರ್ಥಿಗಳು, ಫಲ ಕೊಡುತ್ತಾ ಕೇಂದ್ರದ ಮಾತುಕತೆ ತಂತ್ರ

ದೆಹಲಿ: ಬೀದಿಗಳಲ್ಲಿ ಜೆಎನ್​ಯು ವಿದ್ಯಾರ್ಥಿಗಳು ರಣಕಹಳೆ ಮೊಳಗಿಸಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿರುವ ಜೆಎನ್​ಯು ಸ್ಟೂಡೆಂಟ್ಸ್ ತಮ್ಮ ಪ್ರೊಟೆಸ್ಟ್ ಮುಂದುವರಿಸಿದ್ದಾರೆ. ಈ ಮಧ್ಯೆ ಮುಂದಿನ ಪರಿಣಾಮಗಳ ಕುರಿತು ಎಚ್ಚೆತ್ತಿರುವ ಕೇಂದ್ರ ಈ ವಿಚಾರದಲ್ಲಿ ಮೃದು ಧೋರಣೆ ತಳೆದು ಮಾತುಕತೆಗೆ ಮುಂದಾಗಿದೆ. ದೆಹಲಿಯಲ್ಲಿ ವಿದ್ಯಾರ್ಥಿ ಸಮೂಹ ಕೇಂದ್ರದ ವಿರುದ್ಧ ಪ್ರತಿಭಟನೆ ಮುಂದುವರಿಸಿದೆ. ನಿಯಂತ್ರಣಕ್ಕೆ ಪೊಲೀಸ್ ಪಡೆಯ ಹರಸಾಹಸ ಪಡುತ್ತಿದ್ದಾರೆ. ಈ ಹೋರಾಟದ ಕಿಚ್ಚು ಹಬ್ಬಲು ಕಾರಣವೇ, ಹಾಸ್ಟೆಲ್‌ ಶುಲ್ಕ ಹಾಗೂ ಅಡ್ಮಿಷನ್ ಫೀಸ್ ಹೆಚ್ಚಳ ಮಾಡಿರೋದು. […]

ಶುಲ್ಕ ಹೆಚ್ಚಳ: ಬೀದಿಗಿಳಿದ ವಿದ್ಯಾರ್ಥಿಗಳು, ಫಲ ಕೊಡುತ್ತಾ ಕೇಂದ್ರದ ಮಾತುಕತೆ ತಂತ್ರ
ಸಾಧು ಶ್ರೀನಾಥ್​
|

Updated on:Dec 10, 2019 | 11:31 AM

Share

ದೆಹಲಿ: ಬೀದಿಗಳಲ್ಲಿ ಜೆಎನ್​ಯು ವಿದ್ಯಾರ್ಥಿಗಳು ರಣಕಹಳೆ ಮೊಳಗಿಸಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿರುವ ಜೆಎನ್​ಯು ಸ್ಟೂಡೆಂಟ್ಸ್ ತಮ್ಮ ಪ್ರೊಟೆಸ್ಟ್ ಮುಂದುವರಿಸಿದ್ದಾರೆ. ಈ ಮಧ್ಯೆ ಮುಂದಿನ ಪರಿಣಾಮಗಳ ಕುರಿತು ಎಚ್ಚೆತ್ತಿರುವ ಕೇಂದ್ರ ಈ ವಿಚಾರದಲ್ಲಿ ಮೃದು ಧೋರಣೆ ತಳೆದು ಮಾತುಕತೆಗೆ ಮುಂದಾಗಿದೆ.

ದೆಹಲಿಯಲ್ಲಿ ವಿದ್ಯಾರ್ಥಿ ಸಮೂಹ ಕೇಂದ್ರದ ವಿರುದ್ಧ ಪ್ರತಿಭಟನೆ ಮುಂದುವರಿಸಿದೆ. ನಿಯಂತ್ರಣಕ್ಕೆ ಪೊಲೀಸ್ ಪಡೆಯ ಹರಸಾಹಸ ಪಡುತ್ತಿದ್ದಾರೆ. ಈ ಹೋರಾಟದ ಕಿಚ್ಚು ಹಬ್ಬಲು ಕಾರಣವೇ, ಹಾಸ್ಟೆಲ್‌ ಶುಲ್ಕ ಹಾಗೂ ಅಡ್ಮಿಷನ್ ಫೀಸ್ ಹೆಚ್ಚಳ ಮಾಡಿರೋದು.

ಇದರ ವಿರುದ್ಧ ಜೆಎನ್​ಯು ವಿದ್ಯಾರ್ಥಿಗಳು ಸಿಡಿದೆದ್ದಿದ್ದಾರೆ. ಕೇಂದ್ರದ ನಿರ್ಧಾರ ವಿರೋಧಿಸಿ ಸುಮಾರು 1 ತಿಂಗಳಿಂದಲೂ ಪ್ರೊಟೆಸ್ಟ್ ಮಾಡ್ತಿದ್ದಾರೆ. ಆದ್ರೆ ಈ ಹೋರಾಟಕ್ಕೆ ಫುಲ್​ಸ್ಟಾಪ್ ಇಡಲು ಮುಂದಾಗಿರುವ ಕೇಂದ್ರ ಸರ್ಕಾರ ಅಂತೂ, ಇಂತೂ ದಿಟ್ಟ ನಿರ್ಧಾರವೊಂದನ್ನ ತೆಗೆದುಕೊಂಡಿದೆ.

ವಿದ್ಯಾರ್ಥಿ ಸಂಘಟನೆಗಳ ಜೊತೆ ಮಾತುಕತೆಗೆ ಕೇಂದ್ರದ ನಿರ್ಧಾರ..! ಜೆಎನ್​ಯು ಸ್ಟೂಡೆಂಟ್ಸ್ ಪ್ರತಿದಿನ ದೆಹಲಿಯಲ್ಲಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಸಂಸತ್ ಚಲೋದಿಂದ ಹಿಡಿದು ರಾಷ್ಟ್ರಪತಿ ಭವನ ಚಲೋವರೆಗೂ ಉಗ್ರ ಹೋರಾಟವೇ ನಡೆಯುತ್ತಿದೆ. ರಾಷ್ಟ್ರಪತಿಗೆ ಮನವಿ ಸಲ್ಲಿಸಲು ಮುಂದಾದ ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದಾರೆ.

ಅಲ್ಲದೆ ‌ಜೆಎನ್​ಯು ಪ್ರವೇಶಕ್ಕೆ ವಿಧ್ಯಾರ್ಥಿಗಳಿಗೆ, ಪ್ರಾದ್ಯಾಪಕರಿಗೆ ಪೊಲೀಸ್ರು ಅವಕಾಶ ಕೊಡ್ತಿಲ್ಲ ಅನ್ನೋ ಆರೋಪವೂ ಕೇಳಿಬಂದಿದೆ. ಈ ಮಧ್ಯೆ ಪ್ರತಿಭಟನೆ ತಣ್ಣಗಾಗಿಸಲು ಕೇಂದ್ರ ಮುಂದಾಗಿದ್ದು, ವಿದ್ಯಾರ್ಥಿಗಳ ಜೊತೆ ಮಾತುಕತೆಗೆ ನಿರ್ಧರಿಸಿದೆ.

ಮೊದ್ಲೇ ಮಾಲಿನ್ಯದ ಪರಿಣಾಮ ಬೆಚ್ಚಿಬಿದ್ದಿರುವ ರಾಷ್ಟ್ರ ರಾಜಧಾನಿಯ ನಿವಾಸಿಗಳಿಗೆ ವಿದ್ಯಾರ್ಥಿಗಳ ಪ್ರೊಟೆಸ್ಟ್ ಆತಂಕ ತಂದಿತ್ತು. ದಿನಬೆಳಗಾದ್ರೆ ಪ್ರತಿಭಟನೆಗಳನ್ನ ಕಂಡು ಜನ ಬೇಸತ್ತಿದ್ರು. ಇದೀಗ ಇದಕ್ಕೆಲ್ಲಾ ಇತಿಶ್ರೀ ಹಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಆದ್ರೆ, ಮಾತುಕತೆ ಯಾವಾಗ ನಡೆಯುತ್ತೆ ಅನ್ನೋದನ್ನ ರಿವೀಲ್ ಮಾಡಿಲ್ಲ.

Published On - 7:25 am, Tue, 10 December 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು