AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ನೌಕರರ ತುಟ್ಟಿಭತ್ಯೆ ಏರಿಕೆಗೆ ಕೊರೊನಾ ಬ್ರೇಕ್

ನವದೆಹಲಿ: ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ತುಟ್ಟಿಭತ್ಯೆ ಏರಿಕೆಗೆ ಕೊರೊನಾ ಸೋಂಕಿನಿಂದಾಗಿ ತಡೆ ಬಿದ್ದಿದೆ. ನಿನ್ನೆ ಕೇಂದ್ರ ಕ್ಯಾಬಿನೆಟ್ ಸಭೆಯಲ್ಲಿ ಈ ಕುರಿತು ತೀರ್ಮಾನವಾಗಿದೆ. ಇಂದು ಈ ಕುರಿತು ಕೇಂದ್ರ ಹಣಕಾಸು ಇಲಾಖೆ ಮಾಹಿತಿ ನೀಡಿದೆ. 2020ರ ಜನವರಿ ಡಿಎ ನೀಡಿಕೆಗೆ ಕೇಂದ್ರ ಸರ್ಕಾರ ತಡೆ‌ ನೀಡಿದೆ. ಕೊರೊನಾದಿಂದ ಆರ್ಥಿಕ ಬಿಕ್ಕಟ್ಟು ಉಂಟಾಗಿರುವ ಹಿನ್ನೆಲೆಯಲ್ಲಿ ಡಿಎಗೆ ತಡೆಹಾಕಲಾಗಿದೆ. ಇದರಿಂದ ಕೇಂದ್ರಕ್ಕೆ 8 ಸಾವಿರ ಕೋಟಿ ಹಣ ಲಭ್ಯವಾಗಲಿದೆ.

ಕೇಂದ್ರ ನೌಕರರ ತುಟ್ಟಿಭತ್ಯೆ ಏರಿಕೆಗೆ ಕೊರೊನಾ ಬ್ರೇಕ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Apr 23, 2020 | 4:03 PM

Share

ನವದೆಹಲಿ: ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ತುಟ್ಟಿಭತ್ಯೆ ಏರಿಕೆಗೆ ಕೊರೊನಾ ಸೋಂಕಿನಿಂದಾಗಿ ತಡೆ ಬಿದ್ದಿದೆ.

ನಿನ್ನೆ ಕೇಂದ್ರ ಕ್ಯಾಬಿನೆಟ್ ಸಭೆಯಲ್ಲಿ ಈ ಕುರಿತು ತೀರ್ಮಾನವಾಗಿದೆ. ಇಂದು ಈ ಕುರಿತು ಕೇಂದ್ರ ಹಣಕಾಸು ಇಲಾಖೆ ಮಾಹಿತಿ ನೀಡಿದೆ. 2020ರ ಜನವರಿ ಡಿಎ ನೀಡಿಕೆಗೆ ಕೇಂದ್ರ ಸರ್ಕಾರ ತಡೆ‌ ನೀಡಿದೆ. ಕೊರೊನಾದಿಂದ ಆರ್ಥಿಕ ಬಿಕ್ಕಟ್ಟು ಉಂಟಾಗಿರುವ ಹಿನ್ನೆಲೆಯಲ್ಲಿ ಡಿಎಗೆ ತಡೆಹಾಕಲಾಗಿದೆ. ಇದರಿಂದ ಕೇಂದ್ರಕ್ಕೆ 8 ಸಾವಿರ ಕೋಟಿ ಹಣ ಲಭ್ಯವಾಗಲಿದೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು