AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲವೇ ತಿಂಗಳಲ್ಲಿ ಹೊರಬೀಳಲಿದೆ ಇನ್ನೊಂದು ಕೊವಿಡ್​ 19 ಲಸಿಕೆ; ಹೈದರಾಬಾದ್ ಮೂಲದ ಕಂಪನಿಗೆ ಈಗಲೇ ಮುಂಗಡ ಹಣ ನೀಡಿದ ಕೇಂದ್ರ  

Covid 19 Vaccine: ಎಂಆರ್​ಎನ್​ಎ (ಮೆಸೆಂಜರ್ ರಿಬೊನ್ಯೂಕ್ಲಿಯಿಕ್ ಆಮ್ಲ) PTX-COVID19-B ಲಸಿಕೆಯನ್ನು ಭಾರತದಲ್ಲಿ ತಯಾರಿಸಲೂ ಸಹ ಬಯಾಲಜಿಕಲ್ ಇ ಕಂಪನಿಯು ಮುಂದಾಗಿದೆ. ಇದಕ್ಕಾಗಿ ಕೆನಡಾ ಮೂಲದ ಪ್ರೊವಿಡೆನ್ಸ್​ ಥೆರಪೂಟಿಕ್ಸ್ ಹೋಲ್ಡಿಂಗ್ಸ್ ಇಂಕ್​​ನೊಂದಿಗೆ ಸಹಯೋಗ ಹೊಂದಿದೆ.

ಕೆಲವೇ ತಿಂಗಳಲ್ಲಿ ಹೊರಬೀಳಲಿದೆ ಇನ್ನೊಂದು ಕೊವಿಡ್​ 19 ಲಸಿಕೆ; ಹೈದರಾಬಾದ್ ಮೂಲದ ಕಂಪನಿಗೆ ಈಗಲೇ ಮುಂಗಡ ಹಣ ನೀಡಿದ ಕೇಂದ್ರ  
ಕೊರೊನಾ ಲಸಿಕೆ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Jun 03, 2021 | 11:49 AM

Share

ಮುಂದಿನ ಕೆಲವೇ ತಿಂಗಳುಗಳಲ್ಲಿ ಹೈದರಾಬಾದ್​ ಮೂಲದ ಎಂ/ಎಸ್ ಬಯಾಲಜಿಕಲ್​ ಇ ಲಿಮಿಟೆಡ್​ ಕಂಪನಿಯಿಂದ ಕೊವಿಡ್​ 19 ಲಸಿಕೆಯೊಂದು ಹೊರಬರಲಿದೆ. ಸುಮಾರು 30 ಕೋಟಿ ಡೋಸ್​ ಲಸಿಕೆಗಾಗಿ ಕೇಂದ್ರ ಸರ್ಕಾರ ಈಗಾಗಲೇ ಮುಂಗಡ ಒಪ್ಪಂದ ಪೂರ್ಣಗೊಳಿಸಿದೆ. 1500 ಕೋಟಿ ರೂಪಾಯಿ ಪಾವತಿ ಮಾಡಿದೆ. ಈ ಲಸಿಕೆ 1 ಮತ್ತು 2ನೇ ಹಂತದ ಕ್ಲಿನಿಕಲ್​ ಟ್ರಯಲ್​ನ್ನು ಪೂರ್ಣಗೊಳಿಸಿದ್ದು, 3ನೇ ಹಂತದ ಕ್ಲಿನಿಕಲ್​ ಪರೀಕ್ಷೆ ನಡೆಯುತ್ತಿದೆ. ಬಯಾಲಜಿಕಲ್​ ಇ ಅಭಿವೃದ್ಧಿ ಪಡಿಸಿದ ಈ ಲಸಿಕೆ ಆರ್​ಬಿಡಿ ಪ್ರೋಟಿನ್​ ಸಬ್​ ಯೂನಿಟ್​ ಲಸಿಕೆಯಾಗಿದ್ದು, 1 ಮತ್ತು 2ನೇ ಹಂತದ ಪರೀಕ್ಷೆಯಲ್ಲಿ ಸಕಾರಾತ್ಮಕ ಫಲಿತಾಂಶವನ್ನು ನೀಡಿದೆ. ಇದೀಗ ಮೂರನೇ ಹಂತದ ಕ್ಲಿನಿಕಲ್​ ಟ್ರಯಲ್​ ನಡೆಯುತ್ತಿದ್ದು, ಅದಾದ ಬಳಿಕ ಬಳಕೆಗೆ ಸಿಗಲಿದೆ.

ಹೈದರಾಬಾದ್​​ನ ಬಯಾಲಜಿಕಲ್​ ಇ ಲಿಮಿಟೆಡ್​ ಕಂಪನಿಯು ಯುಎಸ್​ನ ಬೇಲರ್​​ ಮೆಡಿಸಿನ್​ ಕಾಲೇಜಿನ ಸಹಯೋಗದೊಂದಿಗೆ ಲಸಿಕೆ ತಯಾರು ಮಾಡುತ್ತಿದೆ. ಈ ಲಸಿಕೆಯ ಮೂರನೇ ಹಂತದ ಕ್ಲಿನಿಕಲ್​ ಟ್ರಯಲ್​​ಗೆ ಕಂಪನಿಯು ಏಪ್ರಿಲ್​​ನಲ್ಲಿ ಕೇಂದ್ರ ಔಷಧಗಳ ಮತ್ತು ಗುಣಮಟ್ಟ ನಿಯಂತ್ರಣ ಸಂಸ್ಥೆ (CDSCO) ಅನುಮತಿ ನೀಡಿತ್ತು.

ಇದರೊಂದಿಗೆ  ಎಂಆರ್​ಎನ್​ಎ (ಮೆಸೆಂಜರ್ ರಿಬೊನ್ಯೂಕ್ಲಿಯಿಕ್ ಆಮ್ಲ) PTX-COVID19-B ಲಸಿಕೆಯನ್ನು ಭಾರತದಲ್ಲಿ ತಯಾರಿಸಲೂ ಸಹ ಬಯಾಲಜಿಕಲ್ ಇ ಕಂಪನಿಯು ಮುಂದಾಗಿದೆ. ಇದಕ್ಕಾಗಿ ಕೆನಡಾ ಮೂಲದ ಪ್ರೊವಿಡೆನ್ಸ್​ ಥೆರಪೂಟಿಕ್ಸ್ ಹೋಲ್ಡಿಂಗ್ಸ್ ಇಂಕ್​​ನೊಂದಿಗೆ ಸಹಯೋಗ ಹೊಂದಿದೆ. ಈ ಎಂಆರ್​​ಎನ್​ಎ ಲಸಿಕೆಯನ್ನು ಭಾರತದಲ್ಲಿ ತಯಾರಿಸಲು ಅಗತ್ಯವಿರುವ ಎಲ್ಲ ರೀತಿಯ ತಂತ್ರಜ್ಞಾನವನ್ನೂ ಪ್ರಾವಿಡೆನ್ಸ್​ ಕಂಪನಿ ಬಯಾಲಜಿಕಲ್​ ಇ ಕಂಪನಿಗೆ ವರ್ಗಾವಣೆ ಮಾಡಲಿದೆ.

ಇದನ್ನೂ ಓದಿ: ಲಾಕ್​ಡೌನ್​ ನಿಯಮ ಉಲ್ಲಂಘನೆ; ದಿಶಾ ಪಟಾನಿ, ಟೈಗರ್​ ಶ್ರಾಫ್​ ವಿರುದ್ಧ ಎಫ್​ಐಆರ್​ ದಾಖಲು

Published On - 11:05 am, Thu, 3 June 21

Follow Us
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ