AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲವೇ ತಿಂಗಳಲ್ಲಿ ಹೊರಬೀಳಲಿದೆ ಇನ್ನೊಂದು ಕೊವಿಡ್​ 19 ಲಸಿಕೆ; ಹೈದರಾಬಾದ್ ಮೂಲದ ಕಂಪನಿಗೆ ಈಗಲೇ ಮುಂಗಡ ಹಣ ನೀಡಿದ ಕೇಂದ್ರ  

Covid 19 Vaccine: ಎಂಆರ್​ಎನ್​ಎ (ಮೆಸೆಂಜರ್ ರಿಬೊನ್ಯೂಕ್ಲಿಯಿಕ್ ಆಮ್ಲ) PTX-COVID19-B ಲಸಿಕೆಯನ್ನು ಭಾರತದಲ್ಲಿ ತಯಾರಿಸಲೂ ಸಹ ಬಯಾಲಜಿಕಲ್ ಇ ಕಂಪನಿಯು ಮುಂದಾಗಿದೆ. ಇದಕ್ಕಾಗಿ ಕೆನಡಾ ಮೂಲದ ಪ್ರೊವಿಡೆನ್ಸ್​ ಥೆರಪೂಟಿಕ್ಸ್ ಹೋಲ್ಡಿಂಗ್ಸ್ ಇಂಕ್​​ನೊಂದಿಗೆ ಸಹಯೋಗ ಹೊಂದಿದೆ.

ಕೆಲವೇ ತಿಂಗಳಲ್ಲಿ ಹೊರಬೀಳಲಿದೆ ಇನ್ನೊಂದು ಕೊವಿಡ್​ 19 ಲಸಿಕೆ; ಹೈದರಾಬಾದ್ ಮೂಲದ ಕಂಪನಿಗೆ ಈಗಲೇ ಮುಂಗಡ ಹಣ ನೀಡಿದ ಕೇಂದ್ರ  
ಕೊರೊನಾ ಲಸಿಕೆ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Jun 03, 2021 | 11:49 AM

Share

ಮುಂದಿನ ಕೆಲವೇ ತಿಂಗಳುಗಳಲ್ಲಿ ಹೈದರಾಬಾದ್​ ಮೂಲದ ಎಂ/ಎಸ್ ಬಯಾಲಜಿಕಲ್​ ಇ ಲಿಮಿಟೆಡ್​ ಕಂಪನಿಯಿಂದ ಕೊವಿಡ್​ 19 ಲಸಿಕೆಯೊಂದು ಹೊರಬರಲಿದೆ. ಸುಮಾರು 30 ಕೋಟಿ ಡೋಸ್​ ಲಸಿಕೆಗಾಗಿ ಕೇಂದ್ರ ಸರ್ಕಾರ ಈಗಾಗಲೇ ಮುಂಗಡ ಒಪ್ಪಂದ ಪೂರ್ಣಗೊಳಿಸಿದೆ. 1500 ಕೋಟಿ ರೂಪಾಯಿ ಪಾವತಿ ಮಾಡಿದೆ. ಈ ಲಸಿಕೆ 1 ಮತ್ತು 2ನೇ ಹಂತದ ಕ್ಲಿನಿಕಲ್​ ಟ್ರಯಲ್​ನ್ನು ಪೂರ್ಣಗೊಳಿಸಿದ್ದು, 3ನೇ ಹಂತದ ಕ್ಲಿನಿಕಲ್​ ಪರೀಕ್ಷೆ ನಡೆಯುತ್ತಿದೆ. ಬಯಾಲಜಿಕಲ್​ ಇ ಅಭಿವೃದ್ಧಿ ಪಡಿಸಿದ ಈ ಲಸಿಕೆ ಆರ್​ಬಿಡಿ ಪ್ರೋಟಿನ್​ ಸಬ್​ ಯೂನಿಟ್​ ಲಸಿಕೆಯಾಗಿದ್ದು, 1 ಮತ್ತು 2ನೇ ಹಂತದ ಪರೀಕ್ಷೆಯಲ್ಲಿ ಸಕಾರಾತ್ಮಕ ಫಲಿತಾಂಶವನ್ನು ನೀಡಿದೆ. ಇದೀಗ ಮೂರನೇ ಹಂತದ ಕ್ಲಿನಿಕಲ್​ ಟ್ರಯಲ್​ ನಡೆಯುತ್ತಿದ್ದು, ಅದಾದ ಬಳಿಕ ಬಳಕೆಗೆ ಸಿಗಲಿದೆ.

ಹೈದರಾಬಾದ್​​ನ ಬಯಾಲಜಿಕಲ್​ ಇ ಲಿಮಿಟೆಡ್​ ಕಂಪನಿಯು ಯುಎಸ್​ನ ಬೇಲರ್​​ ಮೆಡಿಸಿನ್​ ಕಾಲೇಜಿನ ಸಹಯೋಗದೊಂದಿಗೆ ಲಸಿಕೆ ತಯಾರು ಮಾಡುತ್ತಿದೆ. ಈ ಲಸಿಕೆಯ ಮೂರನೇ ಹಂತದ ಕ್ಲಿನಿಕಲ್​ ಟ್ರಯಲ್​​ಗೆ ಕಂಪನಿಯು ಏಪ್ರಿಲ್​​ನಲ್ಲಿ ಕೇಂದ್ರ ಔಷಧಗಳ ಮತ್ತು ಗುಣಮಟ್ಟ ನಿಯಂತ್ರಣ ಸಂಸ್ಥೆ (CDSCO) ಅನುಮತಿ ನೀಡಿತ್ತು.

ಇದರೊಂದಿಗೆ  ಎಂಆರ್​ಎನ್​ಎ (ಮೆಸೆಂಜರ್ ರಿಬೊನ್ಯೂಕ್ಲಿಯಿಕ್ ಆಮ್ಲ) PTX-COVID19-B ಲಸಿಕೆಯನ್ನು ಭಾರತದಲ್ಲಿ ತಯಾರಿಸಲೂ ಸಹ ಬಯಾಲಜಿಕಲ್ ಇ ಕಂಪನಿಯು ಮುಂದಾಗಿದೆ. ಇದಕ್ಕಾಗಿ ಕೆನಡಾ ಮೂಲದ ಪ್ರೊವಿಡೆನ್ಸ್​ ಥೆರಪೂಟಿಕ್ಸ್ ಹೋಲ್ಡಿಂಗ್ಸ್ ಇಂಕ್​​ನೊಂದಿಗೆ ಸಹಯೋಗ ಹೊಂದಿದೆ. ಈ ಎಂಆರ್​​ಎನ್​ಎ ಲಸಿಕೆಯನ್ನು ಭಾರತದಲ್ಲಿ ತಯಾರಿಸಲು ಅಗತ್ಯವಿರುವ ಎಲ್ಲ ರೀತಿಯ ತಂತ್ರಜ್ಞಾನವನ್ನೂ ಪ್ರಾವಿಡೆನ್ಸ್​ ಕಂಪನಿ ಬಯಾಲಜಿಕಲ್​ ಇ ಕಂಪನಿಗೆ ವರ್ಗಾವಣೆ ಮಾಡಲಿದೆ.

ಇದನ್ನೂ ಓದಿ: ಲಾಕ್​ಡೌನ್​ ನಿಯಮ ಉಲ್ಲಂಘನೆ; ದಿಶಾ ಪಟಾನಿ, ಟೈಗರ್​ ಶ್ರಾಫ್​ ವಿರುದ್ಧ ಎಫ್​ಐಆರ್​ ದಾಖಲು

Published On - 11:05 am, Thu, 3 June 21

Follow Us
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?