AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲವೇ ತಿಂಗಳಲ್ಲಿ ಹೊರಬೀಳಲಿದೆ ಇನ್ನೊಂದು ಕೊವಿಡ್​ 19 ಲಸಿಕೆ; ಹೈದರಾಬಾದ್ ಮೂಲದ ಕಂಪನಿಗೆ ಈಗಲೇ ಮುಂಗಡ ಹಣ ನೀಡಿದ ಕೇಂದ್ರ  

Covid 19 Vaccine: ಎಂಆರ್​ಎನ್​ಎ (ಮೆಸೆಂಜರ್ ರಿಬೊನ್ಯೂಕ್ಲಿಯಿಕ್ ಆಮ್ಲ) PTX-COVID19-B ಲಸಿಕೆಯನ್ನು ಭಾರತದಲ್ಲಿ ತಯಾರಿಸಲೂ ಸಹ ಬಯಾಲಜಿಕಲ್ ಇ ಕಂಪನಿಯು ಮುಂದಾಗಿದೆ. ಇದಕ್ಕಾಗಿ ಕೆನಡಾ ಮೂಲದ ಪ್ರೊವಿಡೆನ್ಸ್​ ಥೆರಪೂಟಿಕ್ಸ್ ಹೋಲ್ಡಿಂಗ್ಸ್ ಇಂಕ್​​ನೊಂದಿಗೆ ಸಹಯೋಗ ಹೊಂದಿದೆ.

ಕೆಲವೇ ತಿಂಗಳಲ್ಲಿ ಹೊರಬೀಳಲಿದೆ ಇನ್ನೊಂದು ಕೊವಿಡ್​ 19 ಲಸಿಕೆ; ಹೈದರಾಬಾದ್ ಮೂಲದ ಕಂಪನಿಗೆ ಈಗಲೇ ಮುಂಗಡ ಹಣ ನೀಡಿದ ಕೇಂದ್ರ  
ಕೊರೊನಾ ಲಸಿಕೆ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Jun 03, 2021 | 11:49 AM

Share

ಮುಂದಿನ ಕೆಲವೇ ತಿಂಗಳುಗಳಲ್ಲಿ ಹೈದರಾಬಾದ್​ ಮೂಲದ ಎಂ/ಎಸ್ ಬಯಾಲಜಿಕಲ್​ ಇ ಲಿಮಿಟೆಡ್​ ಕಂಪನಿಯಿಂದ ಕೊವಿಡ್​ 19 ಲಸಿಕೆಯೊಂದು ಹೊರಬರಲಿದೆ. ಸುಮಾರು 30 ಕೋಟಿ ಡೋಸ್​ ಲಸಿಕೆಗಾಗಿ ಕೇಂದ್ರ ಸರ್ಕಾರ ಈಗಾಗಲೇ ಮುಂಗಡ ಒಪ್ಪಂದ ಪೂರ್ಣಗೊಳಿಸಿದೆ. 1500 ಕೋಟಿ ರೂಪಾಯಿ ಪಾವತಿ ಮಾಡಿದೆ. ಈ ಲಸಿಕೆ 1 ಮತ್ತು 2ನೇ ಹಂತದ ಕ್ಲಿನಿಕಲ್​ ಟ್ರಯಲ್​ನ್ನು ಪೂರ್ಣಗೊಳಿಸಿದ್ದು, 3ನೇ ಹಂತದ ಕ್ಲಿನಿಕಲ್​ ಪರೀಕ್ಷೆ ನಡೆಯುತ್ತಿದೆ. ಬಯಾಲಜಿಕಲ್​ ಇ ಅಭಿವೃದ್ಧಿ ಪಡಿಸಿದ ಈ ಲಸಿಕೆ ಆರ್​ಬಿಡಿ ಪ್ರೋಟಿನ್​ ಸಬ್​ ಯೂನಿಟ್​ ಲಸಿಕೆಯಾಗಿದ್ದು, 1 ಮತ್ತು 2ನೇ ಹಂತದ ಪರೀಕ್ಷೆಯಲ್ಲಿ ಸಕಾರಾತ್ಮಕ ಫಲಿತಾಂಶವನ್ನು ನೀಡಿದೆ. ಇದೀಗ ಮೂರನೇ ಹಂತದ ಕ್ಲಿನಿಕಲ್​ ಟ್ರಯಲ್​ ನಡೆಯುತ್ತಿದ್ದು, ಅದಾದ ಬಳಿಕ ಬಳಕೆಗೆ ಸಿಗಲಿದೆ.

ಹೈದರಾಬಾದ್​​ನ ಬಯಾಲಜಿಕಲ್​ ಇ ಲಿಮಿಟೆಡ್​ ಕಂಪನಿಯು ಯುಎಸ್​ನ ಬೇಲರ್​​ ಮೆಡಿಸಿನ್​ ಕಾಲೇಜಿನ ಸಹಯೋಗದೊಂದಿಗೆ ಲಸಿಕೆ ತಯಾರು ಮಾಡುತ್ತಿದೆ. ಈ ಲಸಿಕೆಯ ಮೂರನೇ ಹಂತದ ಕ್ಲಿನಿಕಲ್​ ಟ್ರಯಲ್​​ಗೆ ಕಂಪನಿಯು ಏಪ್ರಿಲ್​​ನಲ್ಲಿ ಕೇಂದ್ರ ಔಷಧಗಳ ಮತ್ತು ಗುಣಮಟ್ಟ ನಿಯಂತ್ರಣ ಸಂಸ್ಥೆ (CDSCO) ಅನುಮತಿ ನೀಡಿತ್ತು.

ಇದರೊಂದಿಗೆ  ಎಂಆರ್​ಎನ್​ಎ (ಮೆಸೆಂಜರ್ ರಿಬೊನ್ಯೂಕ್ಲಿಯಿಕ್ ಆಮ್ಲ) PTX-COVID19-B ಲಸಿಕೆಯನ್ನು ಭಾರತದಲ್ಲಿ ತಯಾರಿಸಲೂ ಸಹ ಬಯಾಲಜಿಕಲ್ ಇ ಕಂಪನಿಯು ಮುಂದಾಗಿದೆ. ಇದಕ್ಕಾಗಿ ಕೆನಡಾ ಮೂಲದ ಪ್ರೊವಿಡೆನ್ಸ್​ ಥೆರಪೂಟಿಕ್ಸ್ ಹೋಲ್ಡಿಂಗ್ಸ್ ಇಂಕ್​​ನೊಂದಿಗೆ ಸಹಯೋಗ ಹೊಂದಿದೆ. ಈ ಎಂಆರ್​​ಎನ್​ಎ ಲಸಿಕೆಯನ್ನು ಭಾರತದಲ್ಲಿ ತಯಾರಿಸಲು ಅಗತ್ಯವಿರುವ ಎಲ್ಲ ರೀತಿಯ ತಂತ್ರಜ್ಞಾನವನ್ನೂ ಪ್ರಾವಿಡೆನ್ಸ್​ ಕಂಪನಿ ಬಯಾಲಜಿಕಲ್​ ಇ ಕಂಪನಿಗೆ ವರ್ಗಾವಣೆ ಮಾಡಲಿದೆ.

ಇದನ್ನೂ ಓದಿ: ಲಾಕ್​ಡೌನ್​ ನಿಯಮ ಉಲ್ಲಂಘನೆ; ದಿಶಾ ಪಟಾನಿ, ಟೈಗರ್​ ಶ್ರಾಫ್​ ವಿರುದ್ಧ ಎಫ್​ಐಆರ್​ ದಾಖಲು

Published On - 11:05 am, Thu, 3 June 21

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್