AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲವೇ ತಿಂಗಳಲ್ಲಿ ಹೊರಬೀಳಲಿದೆ ಇನ್ನೊಂದು ಕೊವಿಡ್​ 19 ಲಸಿಕೆ; ಹೈದರಾಬಾದ್ ಮೂಲದ ಕಂಪನಿಗೆ ಈಗಲೇ ಮುಂಗಡ ಹಣ ನೀಡಿದ ಕೇಂದ್ರ  

Covid 19 Vaccine: ಎಂಆರ್​ಎನ್​ಎ (ಮೆಸೆಂಜರ್ ರಿಬೊನ್ಯೂಕ್ಲಿಯಿಕ್ ಆಮ್ಲ) PTX-COVID19-B ಲಸಿಕೆಯನ್ನು ಭಾರತದಲ್ಲಿ ತಯಾರಿಸಲೂ ಸಹ ಬಯಾಲಜಿಕಲ್ ಇ ಕಂಪನಿಯು ಮುಂದಾಗಿದೆ. ಇದಕ್ಕಾಗಿ ಕೆನಡಾ ಮೂಲದ ಪ್ರೊವಿಡೆನ್ಸ್​ ಥೆರಪೂಟಿಕ್ಸ್ ಹೋಲ್ಡಿಂಗ್ಸ್ ಇಂಕ್​​ನೊಂದಿಗೆ ಸಹಯೋಗ ಹೊಂದಿದೆ.

ಕೆಲವೇ ತಿಂಗಳಲ್ಲಿ ಹೊರಬೀಳಲಿದೆ ಇನ್ನೊಂದು ಕೊವಿಡ್​ 19 ಲಸಿಕೆ; ಹೈದರಾಬಾದ್ ಮೂಲದ ಕಂಪನಿಗೆ ಈಗಲೇ ಮುಂಗಡ ಹಣ ನೀಡಿದ ಕೇಂದ್ರ  
ಕೊರೊನಾ ಲಸಿಕೆ (ಪ್ರಾತಿನಿಧಿಕ ಚಿತ್ರ)
Follow us
TV9 Web
| Updated By: Lakshmi Hegde

Updated on:Jun 03, 2021 | 11:49 AM

ಮುಂದಿನ ಕೆಲವೇ ತಿಂಗಳುಗಳಲ್ಲಿ ಹೈದರಾಬಾದ್​ ಮೂಲದ ಎಂ/ಎಸ್ ಬಯಾಲಜಿಕಲ್​ ಇ ಲಿಮಿಟೆಡ್​ ಕಂಪನಿಯಿಂದ ಕೊವಿಡ್​ 19 ಲಸಿಕೆಯೊಂದು ಹೊರಬರಲಿದೆ. ಸುಮಾರು 30 ಕೋಟಿ ಡೋಸ್​ ಲಸಿಕೆಗಾಗಿ ಕೇಂದ್ರ ಸರ್ಕಾರ ಈಗಾಗಲೇ ಮುಂಗಡ ಒಪ್ಪಂದ ಪೂರ್ಣಗೊಳಿಸಿದೆ. 1500 ಕೋಟಿ ರೂಪಾಯಿ ಪಾವತಿ ಮಾಡಿದೆ. ಈ ಲಸಿಕೆ 1 ಮತ್ತು 2ನೇ ಹಂತದ ಕ್ಲಿನಿಕಲ್​ ಟ್ರಯಲ್​ನ್ನು ಪೂರ್ಣಗೊಳಿಸಿದ್ದು, 3ನೇ ಹಂತದ ಕ್ಲಿನಿಕಲ್​ ಪರೀಕ್ಷೆ ನಡೆಯುತ್ತಿದೆ. ಬಯಾಲಜಿಕಲ್​ ಇ ಅಭಿವೃದ್ಧಿ ಪಡಿಸಿದ ಈ ಲಸಿಕೆ ಆರ್​ಬಿಡಿ ಪ್ರೋಟಿನ್​ ಸಬ್​ ಯೂನಿಟ್​ ಲಸಿಕೆಯಾಗಿದ್ದು, 1 ಮತ್ತು 2ನೇ ಹಂತದ ಪರೀಕ್ಷೆಯಲ್ಲಿ ಸಕಾರಾತ್ಮಕ ಫಲಿತಾಂಶವನ್ನು ನೀಡಿದೆ. ಇದೀಗ ಮೂರನೇ ಹಂತದ ಕ್ಲಿನಿಕಲ್​ ಟ್ರಯಲ್​ ನಡೆಯುತ್ತಿದ್ದು, ಅದಾದ ಬಳಿಕ ಬಳಕೆಗೆ ಸಿಗಲಿದೆ.

ಹೈದರಾಬಾದ್​​ನ ಬಯಾಲಜಿಕಲ್​ ಇ ಲಿಮಿಟೆಡ್​ ಕಂಪನಿಯು ಯುಎಸ್​ನ ಬೇಲರ್​​ ಮೆಡಿಸಿನ್​ ಕಾಲೇಜಿನ ಸಹಯೋಗದೊಂದಿಗೆ ಲಸಿಕೆ ತಯಾರು ಮಾಡುತ್ತಿದೆ. ಈ ಲಸಿಕೆಯ ಮೂರನೇ ಹಂತದ ಕ್ಲಿನಿಕಲ್​ ಟ್ರಯಲ್​​ಗೆ ಕಂಪನಿಯು ಏಪ್ರಿಲ್​​ನಲ್ಲಿ ಕೇಂದ್ರ ಔಷಧಗಳ ಮತ್ತು ಗುಣಮಟ್ಟ ನಿಯಂತ್ರಣ ಸಂಸ್ಥೆ (CDSCO) ಅನುಮತಿ ನೀಡಿತ್ತು.

ಇದರೊಂದಿಗೆ  ಎಂಆರ್​ಎನ್​ಎ (ಮೆಸೆಂಜರ್ ರಿಬೊನ್ಯೂಕ್ಲಿಯಿಕ್ ಆಮ್ಲ) PTX-COVID19-B ಲಸಿಕೆಯನ್ನು ಭಾರತದಲ್ಲಿ ತಯಾರಿಸಲೂ ಸಹ ಬಯಾಲಜಿಕಲ್ ಇ ಕಂಪನಿಯು ಮುಂದಾಗಿದೆ. ಇದಕ್ಕಾಗಿ ಕೆನಡಾ ಮೂಲದ ಪ್ರೊವಿಡೆನ್ಸ್​ ಥೆರಪೂಟಿಕ್ಸ್ ಹೋಲ್ಡಿಂಗ್ಸ್ ಇಂಕ್​​ನೊಂದಿಗೆ ಸಹಯೋಗ ಹೊಂದಿದೆ. ಈ ಎಂಆರ್​​ಎನ್​ಎ ಲಸಿಕೆಯನ್ನು ಭಾರತದಲ್ಲಿ ತಯಾರಿಸಲು ಅಗತ್ಯವಿರುವ ಎಲ್ಲ ರೀತಿಯ ತಂತ್ರಜ್ಞಾನವನ್ನೂ ಪ್ರಾವಿಡೆನ್ಸ್​ ಕಂಪನಿ ಬಯಾಲಜಿಕಲ್​ ಇ ಕಂಪನಿಗೆ ವರ್ಗಾವಣೆ ಮಾಡಲಿದೆ.

ಇದನ್ನೂ ಓದಿ: ಲಾಕ್​ಡೌನ್​ ನಿಯಮ ಉಲ್ಲಂಘನೆ; ದಿಶಾ ಪಟಾನಿ, ಟೈಗರ್​ ಶ್ರಾಫ್​ ವಿರುದ್ಧ ಎಫ್​ಐಆರ್​ ದಾಖಲು

Published On - 11:05 am, Thu, 3 June 21

ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್