AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಾಂಕ್ರಾಮಿಕದಿಂದ ಅನಾಥರಾದ ಮಕ್ಕಳಿಗೆ 5 ಲಕ್ಷ ರೂ. ಉಚಿತ ಆರೋಗ್ಯ ವಿಮೆ ಸೌಲಭ್ಯ ಘೋಷಿಸಿದ ಕೇಂದ್ರ ಸರ್ಕಾರ

ಈ ಉಚಿತ ಆರೋಗ್ಯವಿಮೆಯ ಪ್ರೀಮಿಯಮ್​ನ್ನು ಪ್ರಧಾನಮಂತ್ರಿ ತುರ್ತುಪರಿಸ್ಥಿತಿ ಸಂದರ್ಭದ ನಿಧಿಯ, ನಾಗರಿಕ ನೆರವು ಮತ್ತು ಪರಿಹಾರ (PM-CARES)ದಿಂದ ಪಾವತಿಸಲಾಗುವುದು ಎಂದು ಸಚಿವ ಅನುರಾಗ್​ ಠಾಕೂರ್​ ತಿಳಿಸಿದ್ದಾರೆ.

ಕೊರೊನಾ ಸಾಂಕ್ರಾಮಿಕದಿಂದ ಅನಾಥರಾದ ಮಕ್ಕಳಿಗೆ 5 ಲಕ್ಷ ರೂ. ಉಚಿತ ಆರೋಗ್ಯ ವಿಮೆ ಸೌಲಭ್ಯ ಘೋಷಿಸಿದ ಕೇಂದ್ರ ಸರ್ಕಾರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 05, 2021 | 11:17 AM

Share

ಕೊರೊನಾ ವೈರಸ್​​ ಸಾಂಕ್ರಾಮಿಕ(Coronavirus)ದಿಂದ ಅನಾಥರಾದ ಮಕ್ಕಳಿಗೆ 5 ಲಕ್ಷ ರೂಪಾಯಿ ಉಚಿತ ಆರೋಗ್ಯ ವಿಮೆ (Health Insurance) ನೀಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ ಎಂದು ಸಚಿವ ಅನುರಾಗ್​ ಠಾಕೂರ್ (Anurag Thakur)​ ಘೋಷಿಸಿದ್ದಾರೆ. ಅಂದರೆ ಈ ಬಾರಿ ಕೊವಿಡ್​ 19 ಸಾಂಕ್ರಾಮಿಕದಿಂದ ಅನೇಕ ಮಕ್ಕಳು ತಮ್ಮ ಪಾಲಕರನ್ನು ಕಳೆದುಕೊಂಡಿದ್ದಾರೆ. ಜೀವನಕ್ಕೆ ಕಷ್ಟಪಡುವಂತಾಗಿದೆ. ಹೀಗೆ ಅನಾಥರಾದ ಮಕ್ಕಳಿಗೆ ಅನುಕೂಲವಾಗುವಂತೆ ಆರೋಗ್ಯ ವಿಮೆ ನೀಡಲು ಕೇಂದ್ರ ಸರ್ಕಾರ (Central Government) ಮುಂದಾಗಿದ್ದು, ಇದು ಪುಟ್ಟ ಮಗುವಿನಿಂದ ಹಿಡಿದು 18ವರ್ಷದವರೆಗಿನವರಿಗೆ ಅನ್ವಯ ಆಗುತ್ತದೆ ಎಂದು ತಿಳಿಸಿದ್ದಾರೆ.

ಟ್ವೀಟ್ ಮಾಡಿರುವ ಅನುರಾಗ್​ ಠಾಕೂರ್​, ಈ ಉಚಿತ ಆರೋಗ್ಯವಿಮೆಯ ಪ್ರೀಮಿಯಮ್​ನ್ನು ಪ್ರಧಾನಮಂತ್ರಿ ತುರ್ತುಪರಿಸ್ಥಿತಿ ಸಂದರ್ಭದ ನಿಧಿಯ, ನಾಗರಿಕ ನೆರವು ಮತ್ತು ಪರಿಹಾರ (PM-CARES)ದಿಂದ ಪಾವತಿಸಲಾಗುವುದು ಎಂದು ತಿಳಿಸಿದ್ದಾರೆ. ಹಾಗೇ, ಈ ಆರೋಗ್ಯ ವಿಮೆ ಸ್ಕೀಮ್​​ಗೆ ಸಂಬಂಧಪಟ್ಟ ಪೂರ್ತಿ ವಿವರವನ್ನೂ ತಮ್ಮ ಟ್ವಿಟರ್​​ನಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. ಸ್ವಾವಲಂಬಿ ಭಾರತ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರ ಕೈಗೊಂಡ ಕ್ರಮಗಳ ವಿವರ ಇರುವ ಸರ್ಕಾರಿ ವೆಬ್​ಸೈಟ್​ನ ಲಿಂಕ್​​ನ್ನೂ ಕೂಡ ಅನುರಾಗ್​ ಠಾಕೂರ್​ ಶೇರ್​ ಮಾಡಿಕೊಂಡಿದ್ದಾರೆ.

ಮಕ್ಕಳಿಗಾಗಿ ಪಿಎಂ-ಕೇರ್ಸ್​ (PM-CARES) ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ಪ್ರಸಕ್ತವರ್ಷದ ಮೇ ತಿಂಗಳಲ್ಲಿ ಉದ್ಘಾಟನೆ ಮಾಡಿದ್ದಾರೆ. 2020ರ ಮಾರ್ಚ್​ನಲ್ಲಿ ಕೊವಿಡ್​ 19 ಸಾಂಕ್ರಾಮಿಕ ಶುರುವಾದಾಗಿನಿಂದ ಅನೇಕ ಮಕ್ಕಳು ತಮ್ಮ ಪಾಲಕರು, ಪೋಷಕರನ್ನು ಕಳೆದುಕೊಂಡಿದ್ದಾರೆ. ಅಂಥವರನ್ನು ನೋಡಿಕೊಳ್ಳಲೂ ಯಾರೂ ಇಲ್ಲದೆ ಅನಾಥಾಶ್ರಮ ಸೇರುವ ಪರಿಸ್ಥಿತಿಯೂ ಬಂದಿದೆ. ಅಂಥ ಮಕ್ಕಳಿಗೆ ಎಲ್ಲ ರೀತಿಯ ಅನುಕೂಲ ಒದಗಿಸಿಕೊಡಲು, ಅವರ ಬದುಕನ್ನು ಭದ್ರ ಮಾಡುವ ಸಲುವಾಗಿ ಕೇಂದ್ರ ಸರ್ಕಾರ ಪಿಎಂ ಕೇರ್ಸ್ ಮೂಲಕ ಒಂದಷ್ಟು ಯೋಜನೆಗಳನ್ನು ಪರಿಚಯಿಸಿದೆ. ಅದರ ಒಂದು ಭಾಗವಾಗಿ ಈಗ ಆರೋಗ್ಯ ವಿಮೆ ಸೌಕರ್ಯ ನೀಡಲೂ ನಿರ್ಧಾರ ಮಾಡಿದೆ.

Published On - 10:59 am, Thu, 5 August 21

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ