AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ರೈತರ ಮನವಿಗೆ ಸ್ಪಂದಿಸಿದ ಕೇಂದ್ರ ಸರ್ಕಾರ

ಎಂಎಸ್​ಪಿಯಲ್ಲಿ ಖರೀದಿ ಮಾಡುವುದರಿಂದ ಮಾರ್ಕೆಟ್ ರೇಟ್​ಗೆ ಅನುಗುಣವಾಗಿ ದರ ನಿಗದಿ ಆಗುತ್ತದೆ. ಕಬ್ಬನ್ನು ಎಥೆನಾಲ್ಗೆ ಹೆಚ್ಚು ಬಳಕೆ ಮಾಡಬೇಕು ಅಂತಲೂ ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ.

ಕರ್ನಾಟಕ ರೈತರ ಮನವಿಗೆ ಸ್ಪಂದಿಸಿದ ಕೇಂದ್ರ ಸರ್ಕಾರ
ಉದ್ದು ಮತ್ತು ಹೆಸರು ಕಾಳು
TV9 Web
| Edited By: ಸಾಧು ಶ್ರೀನಾಥ್​|

Updated on:Aug 26, 2021 | 1:43 PM

Share

ದೆಹಲಿ: ಹೆಸರು ಕಾಳು ಮತ್ತು ಉದ್ದನ್ನು ಎಂಎಸ್​ಪಿಯಲ್ಲಿ ಖರೀದಿ ಮಾಡಬೇಕು ಅಂತ ರಾಜ್ಯದ ರೈತರು ಮನವಿ ಮಾಡಿದ್ದರು. 30 ಸಾವಿರ ಮಿಲಿಯನ್ ಮೆಟ್ರಿಕ್ ಟನ್ ಹೆಸರು ಮತ್ತು 10 ಸಾವಿರ ಮಿಲಿಯನ್ ಮೆಟ್ರಿಕ್ ಟನ್ ಉದ್ದನ್ನು ಎಂಎಸ್​ಪಿಯಲ್ಲಿ ಖರೀದಿ ಮಾಡಲು ಕೇಂದ್ರ ಸರ್ಕಾರ ಅದೇಶ ನೀಡಿದೆ ಎಂದು ದೆಹಲಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಯಾವಾಗ ಖರೀದಿ ಮಾಡಬೇಕು ಎನ್ನುವುದು ರಾಜ್ಯ ಸರ್ಕಾರ ನಿರ್ಧಾರ ಮಾಡಿದ ನಂತರ ಆಗುತ್ತದೆ. ಎರಡು ಬೆಳೆಗಳನ್ನು ಬೆಳೆಯುವ ರೈತರಿಗೆ ಇದರಿಂದ ತುಂಬಾ ಅನುಕೂಲವಾಗಲಿದೆ ಎಂದು ಕೇಂದ್ರ ಸಚಿವೆ ಹೇಳಿದರು.

ಎಂಎಸ್​ಪಿಯಲ್ಲಿ ಖರೀದಿ ಮಾಡುವುದರಿಂದ ಮಾರ್ಕೆಟ್ ರೇಟ್​ಗೆ ಅನುಗುಣವಾಗಿ ದರ ನಿಗದಿ ಆಗುತ್ತದೆ. ಕಬ್ಬನ್ನು ಎಥೆನಾಲ್​ಗೆ ಹೆಚ್ಚು ಬಳಕೆ ಮಾಡಬೇಕು ಅಂತಲೂ ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ. ಇದರಿಂದ ಪೆಟ್ರೋಲ್ ಆಮದಿನ ಮೇಲೆ ಅವಲಂಬನೆ ಮಾಡುವುದು ಕಡಿಮೆ ಆಗುತ್ತದೆ. ಕಬ್ಬು ಬೆಳೆಗಾರರಿಗೆ ಅನುಕೂಲ ಮಾಡುವ ನಿರ್ಧಾರವನ್ನೂ ಕೇಂದ್ರ ಕೈಗೊಂಡಿದೆ. ಕಬ್ಬಿನ ಮೇಲಿನ ಎಫ್ಆರ್ಪಿಯನ್ನು ಹೆಚ್ಚಳ ಮಾಡಲಾಗಿದೆ ಎಂದು ಶೋಭಾ ಕರಂದ್ಲಾಜೆ ಹೇಳಿದರು.

ಹಿಂದೆ ಒಂದು ಕ್ವಿಂಟಾಲ್ ಕಬ್ಬಿಗೆ ಎಫ್ಆರ್ಪಿಯನ್ನು (FRP) ಶೇ.10ರಷ್ಟು ಏರಿಕೆ ಮಾಡಲಾಗಿದೆ. ಈವರೆಗಿನ ಗರಿಷ್ಠ ಲಾಭಕರ ಬೆಲೆ 290 ರೂ. ಪ್ರತಿ ಕ್ವಿಂಟಲ್​ಗೆ ಕಬ್ಬು ಬೆಳೆಗಾರರಿಗೆ ನೀಡಲು ಒಪ್ಪಿಗೆ ನೀಡಿದೆ. ಈ ತೀರ್ಮಾನದಿಂದ 5 ಕೋಟಿ ಕಬ್ಬು ಬೆಳೆಗಾರರಿಗೆ ಲಾಭ ಸಿಗುತ್ತದೆ. 2021- 2022ರ ಸಾಲಿನಲ್ಲಿ ಕಬ್ಬು ಉತ್ಪಾದನಾ ವೆಚ್ಚವನ್ನು 155 ರೂ. ಎಂದು ತೀರ್ಮಾನಿಸಲಾಗಿದೆ. ಪ್ರತಿ ಕ್ವಿಂಟಾಲ್ಗೆ 290 ರೂ. ಕೊಡುವುದರಿಂದ ಶೇ.10ರಷ್ಟು ಚೇತರಿಕೆ ದರ ನೀಡಲಾಗುವುದು. ಒಟ್ಟಾರೆ ಉತ್ಪಾದನಾ ವೆಚ್ಚಕ್ಕಿಂತ ಶೇ.87.1ರಷ್ಟು ಹೆಚ್ಚುವರಿ ಬೆಲೆ ನಿಗದಿಯಾದಂತಿದೆ.

ಇದನ್ನೂ ಓದಿ

ಸುಪ್ರೀಂಕೋರ್ಟ್​ನ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿ ಆಗಲಿದ್ದಾರಾ ಕರ್ನಾಟಕ ಮೂಲದ ನ್ಯಾ. ಬಿ.ವಿ.ನಾಗರತ್ನ?

ಉಪ ರಾಷ್ಟ್ರಪತಿ ಕರ್ನಾಟಕ ಭೇಟಿ ಅಂತ್ಯ; ತಾವು ಹೇಳಿದ ಮಾತಿನಂತೆ ನಡೆದುಕೊಂಡ ಸಿಎಂ ಬಸವರಾಜ ಬೊಮ್ಮಾಯಿ!

(central government has instructed to buy Vigna Mungo and Mung Bean in MSP)

Published On - 1:00 pm, Thu, 26 August 21

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ