AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ರೈತರ ಮನವಿಗೆ ಸ್ಪಂದಿಸಿದ ಕೇಂದ್ರ ಸರ್ಕಾರ

ಎಂಎಸ್​ಪಿಯಲ್ಲಿ ಖರೀದಿ ಮಾಡುವುದರಿಂದ ಮಾರ್ಕೆಟ್ ರೇಟ್​ಗೆ ಅನುಗುಣವಾಗಿ ದರ ನಿಗದಿ ಆಗುತ್ತದೆ. ಕಬ್ಬನ್ನು ಎಥೆನಾಲ್ಗೆ ಹೆಚ್ಚು ಬಳಕೆ ಮಾಡಬೇಕು ಅಂತಲೂ ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ.

ಕರ್ನಾಟಕ ರೈತರ ಮನವಿಗೆ ಸ್ಪಂದಿಸಿದ ಕೇಂದ್ರ ಸರ್ಕಾರ
ಉದ್ದು ಮತ್ತು ಹೆಸರು ಕಾಳು
TV9 Web
| Updated By: ಸಾಧು ಶ್ರೀನಾಥ್​|

Updated on:Aug 26, 2021 | 1:43 PM

Share

ದೆಹಲಿ: ಹೆಸರು ಕಾಳು ಮತ್ತು ಉದ್ದನ್ನು ಎಂಎಸ್​ಪಿಯಲ್ಲಿ ಖರೀದಿ ಮಾಡಬೇಕು ಅಂತ ರಾಜ್ಯದ ರೈತರು ಮನವಿ ಮಾಡಿದ್ದರು. 30 ಸಾವಿರ ಮಿಲಿಯನ್ ಮೆಟ್ರಿಕ್ ಟನ್ ಹೆಸರು ಮತ್ತು 10 ಸಾವಿರ ಮಿಲಿಯನ್ ಮೆಟ್ರಿಕ್ ಟನ್ ಉದ್ದನ್ನು ಎಂಎಸ್​ಪಿಯಲ್ಲಿ ಖರೀದಿ ಮಾಡಲು ಕೇಂದ್ರ ಸರ್ಕಾರ ಅದೇಶ ನೀಡಿದೆ ಎಂದು ದೆಹಲಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಯಾವಾಗ ಖರೀದಿ ಮಾಡಬೇಕು ಎನ್ನುವುದು ರಾಜ್ಯ ಸರ್ಕಾರ ನಿರ್ಧಾರ ಮಾಡಿದ ನಂತರ ಆಗುತ್ತದೆ. ಎರಡು ಬೆಳೆಗಳನ್ನು ಬೆಳೆಯುವ ರೈತರಿಗೆ ಇದರಿಂದ ತುಂಬಾ ಅನುಕೂಲವಾಗಲಿದೆ ಎಂದು ಕೇಂದ್ರ ಸಚಿವೆ ಹೇಳಿದರು.

ಎಂಎಸ್​ಪಿಯಲ್ಲಿ ಖರೀದಿ ಮಾಡುವುದರಿಂದ ಮಾರ್ಕೆಟ್ ರೇಟ್​ಗೆ ಅನುಗುಣವಾಗಿ ದರ ನಿಗದಿ ಆಗುತ್ತದೆ. ಕಬ್ಬನ್ನು ಎಥೆನಾಲ್​ಗೆ ಹೆಚ್ಚು ಬಳಕೆ ಮಾಡಬೇಕು ಅಂತಲೂ ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ. ಇದರಿಂದ ಪೆಟ್ರೋಲ್ ಆಮದಿನ ಮೇಲೆ ಅವಲಂಬನೆ ಮಾಡುವುದು ಕಡಿಮೆ ಆಗುತ್ತದೆ. ಕಬ್ಬು ಬೆಳೆಗಾರರಿಗೆ ಅನುಕೂಲ ಮಾಡುವ ನಿರ್ಧಾರವನ್ನೂ ಕೇಂದ್ರ ಕೈಗೊಂಡಿದೆ. ಕಬ್ಬಿನ ಮೇಲಿನ ಎಫ್ಆರ್ಪಿಯನ್ನು ಹೆಚ್ಚಳ ಮಾಡಲಾಗಿದೆ ಎಂದು ಶೋಭಾ ಕರಂದ್ಲಾಜೆ ಹೇಳಿದರು.

ಹಿಂದೆ ಒಂದು ಕ್ವಿಂಟಾಲ್ ಕಬ್ಬಿಗೆ ಎಫ್ಆರ್ಪಿಯನ್ನು (FRP) ಶೇ.10ರಷ್ಟು ಏರಿಕೆ ಮಾಡಲಾಗಿದೆ. ಈವರೆಗಿನ ಗರಿಷ್ಠ ಲಾಭಕರ ಬೆಲೆ 290 ರೂ. ಪ್ರತಿ ಕ್ವಿಂಟಲ್​ಗೆ ಕಬ್ಬು ಬೆಳೆಗಾರರಿಗೆ ನೀಡಲು ಒಪ್ಪಿಗೆ ನೀಡಿದೆ. ಈ ತೀರ್ಮಾನದಿಂದ 5 ಕೋಟಿ ಕಬ್ಬು ಬೆಳೆಗಾರರಿಗೆ ಲಾಭ ಸಿಗುತ್ತದೆ. 2021- 2022ರ ಸಾಲಿನಲ್ಲಿ ಕಬ್ಬು ಉತ್ಪಾದನಾ ವೆಚ್ಚವನ್ನು 155 ರೂ. ಎಂದು ತೀರ್ಮಾನಿಸಲಾಗಿದೆ. ಪ್ರತಿ ಕ್ವಿಂಟಾಲ್ಗೆ 290 ರೂ. ಕೊಡುವುದರಿಂದ ಶೇ.10ರಷ್ಟು ಚೇತರಿಕೆ ದರ ನೀಡಲಾಗುವುದು. ಒಟ್ಟಾರೆ ಉತ್ಪಾದನಾ ವೆಚ್ಚಕ್ಕಿಂತ ಶೇ.87.1ರಷ್ಟು ಹೆಚ್ಚುವರಿ ಬೆಲೆ ನಿಗದಿಯಾದಂತಿದೆ.

ಇದನ್ನೂ ಓದಿ

ಸುಪ್ರೀಂಕೋರ್ಟ್​ನ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿ ಆಗಲಿದ್ದಾರಾ ಕರ್ನಾಟಕ ಮೂಲದ ನ್ಯಾ. ಬಿ.ವಿ.ನಾಗರತ್ನ?

ಉಪ ರಾಷ್ಟ್ರಪತಿ ಕರ್ನಾಟಕ ಭೇಟಿ ಅಂತ್ಯ; ತಾವು ಹೇಳಿದ ಮಾತಿನಂತೆ ನಡೆದುಕೊಂಡ ಸಿಎಂ ಬಸವರಾಜ ಬೊಮ್ಮಾಯಿ!

(central government has instructed to buy Vigna Mungo and Mung Bean in MSP)

Published On - 1:00 pm, Thu, 26 August 21

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್