AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜಿಟಲ್​ ಕ್ಯಾಲೆಂಡರ್​ ಮತ್ತು ಡೈರಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

ಉಳಿದ ಡಿಜಿಟಲ್​ ಕ್ಯಾಲೆಂಡರ್​ ಆ್ಯಪ್​ಗಳಿಗೆ ಹೋಲಿಕೆ ಮಾಡಿದರೆ ಈ ಆ್ಯಪ್​ ತುಂಬಾನೇ ಅಭಿವೃದ್ಧಿ ಹೊಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಡಿಜಿಟಲ್​ ಇಂಡಿಯಾ ಕನಸಿಗೆ ಸಾಕಾರ ನೀಡಲು ಈ ಆ್ಯಪ್​ ಸಹಕಾರಿ ಎಂದು ಪ್ರಕಾಶ್​ ಜಾವ್ಡೇಕರ್ ಅಭಿಪ್ರಾಯಪಟ್ಟಿದ್ದಾರೆ.

ಡಿಜಿಟಲ್​ ಕ್ಯಾಲೆಂಡರ್​ ಮತ್ತು ಡೈರಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ
ಡೈರಿ-ಕ್ಯಾಲೆಂಡರ್​ ಬಿಡುಗಡೆ ಮಾಡಿದ ಪ್ರಕಾಶ್​ ಜಾವ್ಡೇಕರ್
ರಾಜೇಶ್ ದುಗ್ಗುಮನೆ
|

Updated on: Jan 08, 2021 | 8:54 PM

Share

ನವದೆಹಲಿ: ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್​ ಜಾವ್ಡೇಕರ್​ ಶುಕ್ರವಾರ ಡಿಜಿಟಲ್​ ಕ್ಯಾಲೆಂಡರ್​ ಹಾಗೂ ಡಿಜಿಟಲ್​ ಡೈರಿಯನ್ನು ಬಿಡುಗಡೆ ಮಾಡಿದ್ದಾರೆ.

ರಾಷ್ಟ್ರೀಯ ವೈದ್ಯಕೀಯ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಕಾಶ್​ ಜಾವ್ಡೇಕರ್​ ಪಾಲ್ಗೊಂಡಿದ್ದರು. ಈ ವೇಳೆ, ಆ್ಯಂಡ್ರಾಯ್ಡ್​ ಹಾಗೂ ಐಒಎಸ್​ ಮೊಬೈಲ್​ಗಳಲ್ಲಿ ಕ್ಯಾಲೆಂಡರ್​ ಹಾಗೂ ಡೈರಿ ಲಭ್ಯವಾಗುವಂತೆ ನೋಡಿಕೊಳ್ಳಲು ಅಪ್ಲಿಕೇಷನ್​ ಬಿಡುಗಡೆ ಮಾಡಿದರು.

ನಂತರ ಮಾತನಾಡಿದ ಪ್ರಕಾಶ್​ ಜಾವ್ಡೇಕರ್​, ಜನವರಿ 15ರಿಂದ ಒಟ್ಟು 11 ಭಾಷೆಗಳಲ್ಲಿ ಈ ಉಚಿತ ಆ್ಯಪ್​ ಲಭ್ಯವಿದೆ. ಪ್ರತಿ ವರ್ಷ ಈ ಆ್ಯಪ್​ನಲ್ಲಿ ಹೊಸ ಹೊಸ ಕ್ಯಾಲೆಂಡರ್​ ಸಿಗಲಿದೆ. ಅಲ್ಲದೆ, ಸರ್ಕಾರದ ವಿವಿಧ ಕಾರ್ಯಕ್ರಮಗಳ ಬಗ್ಗೆಯೂ ಮಾಹಿತಿ ನೀಡಲಿದೆ ಎಂದು ಪ್ರಕಾಶ್​ ಜಾವ್ಡೇಕರ್ ತಿಳಿಸಿದರು.

ಉಳಿದ ಡಿಜಿಟಲ್​ ಕ್ಯಾಲೆಂಡರ್​ ಆ್ಯಪ್​ಗಳಿಗೆ ಹೋಲಿಕೆ ಮಾಡಿದರೆ ಈ ಆ್ಯಪ್​ ತುಂಬಾನೇ ಅಭಿವೃದ್ಧಿ ಹೊಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಡಿಜಿಟಲ್​ ಇಂಡಿಯಾ ಕನಸಿಗೆ ಸಾಕಾರ ನೀಡಲು ಈ ಆ್ಯಪ್​ ಸಹಕಾರಿ ಎಂದು ಪ್ರಕಾಶ್​ ಜಾವ್ಡೇಕರ್ ಅಭಿಪ್ರಾಯಪಟ್ಟಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ಮೊದಲಿನಿಂದಲೂ ಡಿಜಿಟಲ್​ ಇಂಡಿಯಾಗೆ ಮಹತ್ವ ನೀಡುತ್ತಲೇ ಬಂದಿದೆ. ಅಲ್ಲದೆ, ಸಾಕಷ್ಟು ಕ್ಷೇತ್ರಗಳಲ್ಲಿ ಡಿಜಿಟಲ್​  ಕ್ರಾಂತಿ ಮಾಡಿದೆ.

ಎಲ್ಲ ರೀತಿಯ ಚಲನಚಿತ್ರಗಳಿಗೆ ಪ್ರೋತ್ಸಾಹ ನೀಡಲು ಸರ್ಕಾರದ ಚಿಂತನೆ: ಪ್ರಕಾಶ್ ಜಾವಡೇಕರ್

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!