AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಧಿ ಬೆಲೆ ನಿಯಂತ್ರಣ, ದಾಸ್ತಾನು ಮೇಲೆ ಸರ್ಕಾರ ನಿಗಾ; ಪ್ರಲ್ಹಾದ್ ಜೋಶಿ ಮಾಹಿತಿ

ಗೋಧಿ ಬೆಲೆಯ ನಿಯಂತ್ರಣ ಮತ್ತು ದಾಸ್ತಾನು ಮೇಲೆ ಕೇಂದ್ರ ಸರ್ಕಾರ ನಿಗಾ ಇರಿಸಿದೆ. ಕೇಂದ್ರಾಡಳಿತ ಪ್ರದೇಶ ಮತ್ತು ರಾಜ್ಯಗಳಲ್ಲಿ ಗೋಧಿ ದಾಸ್ತಾನು ಮಿತಿ ನಿಗದಿಪಡಿಸಲಾಗಿದೆ. ಗೋಧಿ ದಾಸ್ತಾನು ಪೋರ್ಟಲ್‌ನಲ್ಲಿ ನೋಂದಾಯಿಸದ, ದಾಸ್ತಾನು ಮಿತಿ ಉಲ್ಲಂಘಿಸುವ ಯಾವುದೇ ಘಟಕವನ್ನು ಅಗತ್ಯ ಸರಕುಗಳ ಕಾಯ್ದೆ 1955ರ ಸೆಕ್ಷನ್ 6 ಮತ್ತು 7ರಡಿ ದಂಡ ವಿಧಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಎಚ್ಚರಿಸಿದ್ದಾರೆ.

ಗೋಧಿ ಬೆಲೆ ನಿಯಂತ್ರಣ, ದಾಸ್ತಾನು ಮೇಲೆ ಸರ್ಕಾರ ನಿಗಾ; ಪ್ರಲ್ಹಾದ್ ಜೋಶಿ ಮಾಹಿತಿ
Minister Pralhad Joshi
ಸುಷ್ಮಾ ಚಕ್ರೆ
|

Updated on: May 29, 2025 | 7:36 PM

Share

ನವದೆಹಲಿ, ಮೇ 29: ದೇಶದೆಲ್ಲೆಡೆ ಗೋಧಿ ಬೆಲೆ ನಿಯಂತ್ರಣ ಮತ್ತು ಸುಲಭ ಲಭ್ಯತೆಗಾಗಿ ಕೇಂದ್ರ ಸರ್ಕಾರ ನಿಗಾ ಇರಿಸಿದೆ. ಕೇಂದ್ರಾಡಳಿತ ಪ್ರದೇಶ ಹಾಗೂ ಎಲ್ಲಾ ರಾಜ್ಯಗಳಿಗೆ ಗೋಧಿ ದಾಸ್ತಾನು ಮಿತಿ ವಿಧಿಸಲಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ (Pralhad Joshi) ತಿಳಿಸಿದ್ದಾರೆ. 2026ರ ಮಾರ್ಚ್‌ 31ರವರೆಗೆ ಅನ್ವಯಿಸುವಂತೆ ವ್ಯಾಪಾರಿಗಳು ಮತ್ತು ಸಗಟು ಮಾರಾಟಗಾರರಿಗೆ 3000 ಮೆಟ್ರಿಕ್‌ ಟನ್‌, ಚಿಲ್ಲರೆ ವ್ಯಾಪಾರಿಗಳು ಮತ್ತು ಪ್ರತಿ ಚಿಲ್ಲರೆ ಮಾರಾಟ ಮಳಿಗೆಗೆ 10 ಮೆಟ್ರಿಕ್ ಟನ್, ದೊಡ್ಡ ರಿಟೇಲರ್, ಪ್ರತಿ ಚಿಲ್ಲರೆ ಔಟ್ಲೆಟ್ ಗೆ 10 ಮೆಟ್ರಿಕ್ ಟನ್​​ವರೆಗೆ ಗರಿಷ್ಠ ಪ್ರಮಾಣದ ದಾಸ್ತಾನು ಮಿತಿ ನಿಗದಿಪಡಿಸಿದೆ ಎಂದಿದ್ದಾರೆ.

ಮೇ 27ರಂದು ನಿರ್ದಿಷ್ಟ ಆಹಾರ ಧಾನ್ಯ ಮೇಲಿನ ಪರವಾನಗಿ ಅವಶ್ಯಕತೆ, ದಾಸ್ತಾನು ಮಿತಿ ಮತ್ತು ಸಾಗಣೆ ನಿರ್ಬಂಧ ತೆರವು (ತಿದ್ದುಪಡಿ) ಆದೇಶ ಹೊರಡಿಸಿದೆ. ಇದು 2026ರ ಮಾರ್ಚ್‌ 31ರವರೆಗೆ ಅನ್ವಯಿಸುತ್ತದೆ ಎಂದು ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ‌ ಹಿಟ್ಲರ್ ಆಡಳಿತ ಇದೆಯಾ? ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ ನಿರ್ಧಾರಕ್ಕೆ ಜೋಶಿ ಸೇರಿ ಅನೇಕರಿಂದ ಖಂಡನೆ

ಇದನ್ನೂ ಓದಿ
Image
ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು
Image
ಸೈಬರ್ ಅಪರಾಧಿಗಳ ವಿರುದ್ಧ 19 ಕಡೆ ಸಿಬಿಐ ಕಾರ್ಯಾಚರಣೆ
Image
ಬುರ್ಖಾ ಧರಿಸಿ ಸೊಸೆ ಮನೆಗೆ ನುಗ್ಗಿದ ಮಾವ, ಮುಂದೇನಾಯ್ತು?
Image
ವಿದ್ಯಾರ್ಥಿಗಳಿಗೆ ಅಮೆರಿಕ ವೀಸಾ ನಿರ್ಬಂಧದ ನಡುವೆ ಇಲ್ಲಿದೆ ಗುಡ್ ನ್ಯೂಸ್

ಪೋರ್ಟಲ್‌ನಲ್ಲಿ ದಾಸ್ತಾನು ಸ್ಥಿತಿ ಘೋಷಿಸದಿದ್ದರೆ ದಂಡ:

ಎಲ್ಲಾ ಗೋಧಿ ದಾಸ್ತಾನು ಘಟಕಗಳು ಪ್ರತಿ ಶುಕ್ರವಾರ ಗೋಧಿ ದಾಸ್ತಾನು ಪೋರ್ಟಲ್‌ನಲ್ಲಿ (https://evegoils.nic.in/wsp/login) ದಾಸ್ತಾನು ಸ್ಥಿತಿ ಘೋಷಿಸಿ ನವೀಕರಿಸಬೇಕು. ಇದನ್ನು ಸಕಾಲಕ್ಕೆ https://foodstock.dfpd.gov.inಗೆ ರವಾನಿಸಲಾಗುತ್ತದೆ. ಗೋಧಿ ದಾಸ್ತಾನು ಪೋರ್ಟಲ್‌ನಲ್ಲಿ ನೋಂದಾಯಿಸದ, ದಾಸ್ತಾನು ಮಿತಿ ಉಲ್ಲಂಘಿಸುವ ಯಾವುದೇ ಘಟಕವನ್ನು ಅಗತ್ಯ ಸರಕುಗಳ ಕಾಯ್ದೆ 1955ರ ಸೆಕ್ಷನ್ 6 ಮತ್ತು 7ರಡಿ ದಂಡ ವಿಧಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಪ್ರಲ್ಹಾದ್ ಜೋಶಿ ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ಕಾಂಗ್ರೆಸ್ ಸರ್ಕಾರ ಸರ್ವಾಧಿಕಾರಿಗಿಂತ ಕೆಟ್ಟದಾಗಿ ವರ್ತಿಸುತ್ತಿದೆ; ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟೀಕೆ

ಒಂದು ವೇಳೆ ಸಂಸ್ಥೆಗಳು ನಿಗದಿಗಿಂತ ಹೆಚ್ಚು ಗೋಧಿ ದಾಸ್ತಾನು ಹೊಂದಿದ್ದರೆ ಅಧಿಸೂಚನೆ ಹೊರಡಿಸಿದ 15 ದಿನಗಳಲ್ಲಿ ನಿಗದಿತ ಮಿತಿಗೆ ತರಬೇಕಾಗುತ್ತದೆ. ದೇಶದಲ್ಲಿ ಗೋಧಿ ಕೃತಕ ಅಭಾವ ಉಂಟಾಗದಂತೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ಅಧಿಕಾರಿಗಳು ಈ ದಾಸ್ತಾನು ಮಿತಿ ಜಾರಿಗೊಳಿಸಿ ಸೂಕ್ಷ್ಮವಾಗಿ ಅವಲೋಕಿಸುತ್ತಿರುತ್ತಾರೆ ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರ ಮೇ 27ರವರೆಗೆ ರಾಜ್ಯ ಸಂಸ್ಥೆಗಳು ಮತ್ತು ಎಫ್‌ಸಿಐ ಮೂಲಕ ಒಟ್ಟು 298.17 ಲಕ್ಷ ಮೆಟ್ರಿಕ್ ಟನ್ ಗೋಧಿ ಖರೀದಿಸಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್