AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಯಾಲಯದ ಸಿಬ್ಬಂದಿ ವರ್ಗಕ್ಕೆ ಆದ್ಯತೆ ಮೇರೆಗೆ ಕೊರೊನಾ ಲಸಿಕೆ ನೀಡಬೇಕೆಂದು ಸುಪ್ರೀಂಗೆ ಅರ್ಜಿ: ಕೇಂದ್ರ ಸರ್ಕಾರ ವಿರೋಧ

ನ್ಯಾಯಾಲಯದ ಸಿಬ್ಬಂದಿ ವರ್ಗಕ್ಕೆ ಕೊರೊನಾ ಲಸಿಕೆ ವಿತರಣೆಯಲ್ಲಿ ವಿಶೇಷ ಸೌಲಭ್ಯ ನೀಡಲು ಕೋರಿ ಅರವಿಂದ್ ಸಿಂಗ್​ ಎನ್ನುವವರು ಅರ್ಜಿ ಸಲ್ಲಿಸಿದ್ದು, ಮಾರ್ಚ್​ 18ರಂದು ವಿಚಾರಣೆ ನಡೆಯಲಿದೆ.

ನ್ಯಾಯಾಲಯದ ಸಿಬ್ಬಂದಿ ವರ್ಗಕ್ಕೆ ಆದ್ಯತೆ ಮೇರೆಗೆ ಕೊರೊನಾ ಲಸಿಕೆ ನೀಡಬೇಕೆಂದು ಸುಪ್ರೀಂಗೆ ಅರ್ಜಿ: ಕೇಂದ್ರ ಸರ್ಕಾರ ವಿರೋಧ
ಸುಪ್ರೀಂ ಕೋರ್ಟ್​
Follow us
Skanda
| Updated By: ganapathi bhat

Updated on: Mar 15, 2021 | 6:43 PM

ದೆಹಲಿ: ಕೊರೊನಾ ಲಸಿಕೆ ವಿತರಣೆ ವಿಚಾರದಲ್ಲಿ ನ್ಯಾಯಾಧೀಶರು, ವಕೀಲರು ಹಾಗೂ ಕೋರ್ಟ್​ ಸಿಬ್ಬಂದಿ ವರ್ಗಕ್ಕೆ ಆದ್ಯತೆ ನೀಡಬೇಕೆಂದು ಕೋರಿ ಸರ್ವೋಚ್ಛ ನ್ಯಾಯಾಲಯದಲ್ಲಿ ಸಲ್ಲಿಸಲಾಗಿರುವ ಅರ್ಜಿಗೆ ಕೇಂದ್ರ ಸರ್ಕಾರ ವಿರೋಧ ವ್ಯಕ್ತಪಡಿಸಿದೆ. ಈ ಬಗ್ಗೆ ನ್ಯಾಯಾಲಯಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣೆ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಮನೋಹರ್​ ಅಗ್ನಾನಿ, ನ್ಯಾಯಾಲಯದಲ್ಲಿ ಕಾರ್ಯ ನಿರ್ವಹಿಸುವವರೆಂಬ ಕಾರಣಕ್ಕೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಿಕೊಡಲಾಗುವುದಿಲ್ಲ. ಹಾಗೇನಾದರೂ ಮಾಡಿದಲ್ಲಿ ಅದು ಬೇರೆ ವಲಯದವರನ್ನು ತಾರತಮ್ಯ ಮಾಡಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈಗಿರುವ ನಿಯಮದ ಪ್ರಕಾರ ಜನಸಾಮಾನ್ಯರಿಗೆ ಅನ್ವಯಿಸುವಂತೆಯೇ 60 ವರ್ಷ ಮೇಲ್ಪಟ್ಟ ವಕೀಲರು, ನ್ಯಾಯಾಧೀಶರು ಅಥವಾ ಯಾವುದೇ ಸಿಬ್ಬಂದಿ ವರ್ಗದವರು ಕೊರೊನಾ ಲಸಿಕೆ ಸ್ವೀಕರಿಸಬಹುದು. ಅಂತೆಯೇ 45 ವರ್ಷ ಮೇಲ್ಪಟ್ಟು ವಿವಿಧ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಸಹ ಲಸಿಕೆಯ ಉಪಯೋಗ ಪಡೆದುಕೊಳ್ಳಬಹುದು. ಹೀಗಾಗಿ ಅವರಿಗಾಗಿ ಪ್ರತ್ಯೇಕ ಅವಕಾಶ ಕಲ್ಪಿಸುವುದು ಸಮಂಜಸವಲ್ಲ ಎಂದು ತಿಳಿಸಿದ್ದಾರೆ.

ದೇಶದಲ್ಲಿ ಬೇರೆ ಬೇರೆ ಉದ್ಯಮಗಳಲ್ಲಿ, ವೃತ್ತಿಗಳಲ್ಲಿ ತೊಡಗಿಕೊಂಡವರೂ ಇರುತ್ತಾರೆ. ಹೀಗಿರುವಾಗ ನ್ಯಾಯಾಧೀಶರಿಗೆ ಅಥವಾ ವಕೀಲರಿಗಾಗಿಯೇ ವಿಶೇಷ ಅವಕಾಶ ಕಲ್ಪಿಸಿಕೊಡಲಾಗುವುದಿಲ್ಲ ಎಂದು ಸರ್ವೋಚ್ಛ ನ್ಯಾಯಾಲಯಕ್ಕೆ ನೀಡಿದ ಉತ್ತರದಲ್ಲಿ ತಿಳಿಸಲಾಗಿದೆ. ನ್ಯಾಯಾಲಯದ ಸಿಬ್ಬಂದಿ ವರ್ಗಕ್ಕೆ ಕೊರೊನಾ ಲಸಿಕೆ ವಿತರಣೆಯಲ್ಲಿ ವಿಶೇಷ ಸೌಲಭ್ಯ ನೀಡಲು ಕೋರಿ ಅರವಿಂದ್ ಸಿಂಗ್​ ಎನ್ನುವವರು ಅರ್ಜಿ ಸಲ್ಲಿಸಿದ್ದು, ಮಾರ್ಚ್​ 18ರಂದು ವಿಚಾರಣೆ ನಡೆಯಲಿದೆ.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಫೆಬ್ರವರಿ 4ರಂದು ದೆಹಲಿಯ ಉಚ್ಛ ನ್ಯಾಯಾಲಯ ಅರ್ಜಿಯೊಂದನ್ನು ತಿರಸ್ಕರಿಸಿತ್ತು. ಆದರೆ, ಅದರ ಬೆನ್ನಲ್ಲೇ ದೆಹಲಿಯ ಬಾರ್​ ಕೌನ್ಸಿಲ್​ ಪತ್ರವೊಂದರ ಆಧಾರದ ಮೇಲೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ನ್ಯಾಯಾಂಗ ವ್ಯವಸ್ಥೆಯಲ್ಲಿ ಫ್ರಂಟ್​ಲೈನ್​ ವರ್ಕರ್ಸ್​ ಆಗಿ ದುಡಿದವರ ಬಗ್ಗೆ ಮಾಹಿತಿ ಕೇಳಿತ್ತು. ಇತ್ತ ಬಾಂಬೆ ಉಚ್ಛ ನ್ಯಾಯಾಲಯದಲ್ಲಿಯೂ ಇದೇ ಮಾದರಿಯ ಪ್ರಕರಣವೊಂದು ವಿಚಾರಣೆಗೆ ಬಾಕಿ ಉಳಿದಿತ್ತು. ಅಷ್ಟರಲ್ಲಿ ವಿಷಯ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ ಕಾರಣ ವಿಚಾರಣೆಯನ್ನು ಮುಂದೂಡಲಾಗಿತ್ತು.

ಇದನ್ನೂ ಓದಿ: ಭಾರತದಲ್ಲಿ 6ಕ್ಕೂ ಹೆಚ್ಚು ಕೊರೊನಾ ಲಸಿಕೆಗಳು ತಯಾರಾಗಲಿವೆ: ಆರೋಗ್ಯ ಸಚಿವ ಹರ್ಷ ವರ್ಧನ್ ಘೋಷಣೆ 

ನೆರೆಯ ಮಹಾರಾಷ್ಟ್ರದಲ್ಲಿ ಒಂದೇ ದಿನ 16,620 ಕೊರೊನಾ ಸೋಂಕಿತರು ಪತ್ತೆ; ಒಂದು ವರ್ಷ ಪೂರೈಸುವ ಹೊತ್ತಲ್ಲಿ ಮತ್ತೆ ಹಬ್ಬಲಿದೆಯಾ ಕೊರೊನಾ?

ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ