AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕ್ ಆಫ್ ಇಂಡಿಯಾ ಸೇರಿ 4 ಬ್ಯಾಂಕ್​ಗಳ ಖಾಸಗೀಕರಣಕ್ಕೆ ಮುಂದಾದ ಕೇಂದ್ರ ಸರ್ಕಾರ

ಖಾಸಗೀಕರಣದ ಮೊದಲ ಹಂತ ಇದಾಗಿದೆ. ಸರ್ಕಾರಿ ಸ್ವಾಮ್ಯದ ಮಧ್ಯಮ ಗಾತ್ರದ ಬ್ಯಾಂಕ್ ಹಾಗೂ ಸಣ್ಣ ಬ್ಯಾಂಕ್​​​ಗಳನ್ನು ಮೊದಲು ಮಾರಾಟ ಮಾಡಲಾಗುತ್ತಿದೆ.

ಬ್ಯಾಂಕ್ ಆಫ್ ಇಂಡಿಯಾ ಸೇರಿ 4 ಬ್ಯಾಂಕ್​ಗಳ ಖಾಸಗೀಕರಣಕ್ಕೆ ಮುಂದಾದ ಕೇಂದ್ರ ಸರ್ಕಾರ
ಬ್ಯಾಂಕ್​ ಸಾಂದರ್ಭಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 15, 2021 | 7:54 PM

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ  ಅಧಿಕಾರಕ್ಕೆ ಬಂದ ನಂತರದಲ್ಲಿ ಖಾಸಗೀಕರಣಕ್ಕೆ ಹೆಚ್ಚು ಒತ್ತು ನೀಡುತ್ತಿದ್ದಾರೆ. ರೈಲ್ವೆ​ ಸೇರಿ ಅನೇಕ ವಲಯಗಳು ನಿಧಾನವಾಗಿ ಖಾಸಗೀಕರಣಗೊಳ್ಳುತ್ತಿವೆ. ಈಗ ಕೇಂದ್ರ ಸರ್ಕಾರ ಬ್ಯಾಂಕ್​ಗಳ ಮೇಲೆ ಕಣ್ಣಿಟ್ಟಿದೆ. ನಾಲ್ಕು ಮಧ್ಯಮ ಗಾತ್ರದ ಬ್ಯಾಂಕ್​ಗಳನ್ನು ಖಾಸಗೀಕರಣ ಮಾಡಲು ಕೇಂದ್ರ ಮುಂದಾಗಿದೆ ಎಂದು ವರದಿ ಹೇಳಿದೆ.

ಮೊದಲ ಹಂತದಲ್ಲಿ ಬ್ಯಾಂಕ್​ ಆಫ್​ ಮಹಾರಾಷ್ಟ್ರ, ಬ್ಯಾಂಕ್​ ಆಫ್​ ಇಂಡಿಯಾ, ಇಂಡಿಯನ್​ ಓವರ್​​ಸೀಸ್​ ಬ್ಯಾಂಕ್​ ಮತ್ತು ಸೆಂಟ್ರಲ್​ ಬ್ಯಾಂಕ್​ ಆಫ್​ ಇಂಡಿಯಾವನ್ನು ಮಾರಾಟ ಮಾಡಲು ಚಿಂತನೆ ನಡೆಸಲಾಗಿದೆ. ಆದರೆ, ಈ ವಿಚಾರದ ಬಗ್ಗೆ ಕೇಂದ್ರ ಸರ್ಕಾರದಿಂದ ಯಾವುದೇ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ.

ಖಾಸಗೀಕರಣದ ಮೊದಲ ಹಂತ ಇದಾಗಿದೆ. ಸರ್ಕಾರಿ ಸ್ವಾಮ್ಯದ ಮಧ್ಯಮ ಗಾತ್ರದ ಬ್ಯಾಂಕ್ ಹಾಗೂ ಸಣ್ಣ ಬ್ಯಾಂಕ್​​​ಗಳನ್ನು ಮೊದಲು ಮಾರಾಟ ಮಾಡಲಾಗುತ್ತಿದೆ. ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದರೆ, ದೇಶದ ದೊಡ್ಡ ಬ್ಯಾಂಕ್​ಗಳನ್ನು ಖಾಸಗೀಕರಣ ಮಾಡುವ ಆಲೋಚನೆ ಕೇಂದ್ರ ಸರ್ಕಾರದ್ದು. ಈ ಬಗ್ಗೆ ಉತ್ತರ ನೀಡಲು ಹಣಕಾಸು ಸಚಿವಾಲಯ ನಿರಾಕರಿಸಿದೆ.

ಬ್ಯಾಂಕ್​ ಆಫ್​ ಇಂಡಿಯಾದಲ್ಲಿ 50,000 ಮತ್ತು ಸೆಂಟ್ರಲ್​ ಬ್ಯಾಂಕ್​ ಆಫ್​ ಇಂಡಿಯಾದಲ್ಲಿ 33,000, ಇಂಡಿಯನ್​ ಓವರ್​ಸೀಸ್​ ಬ್ಯಾಂಕ್​ನಲ್ಲಿ 26,000 ಹಾಗೂ ಬ್ಯಾಂಕ್​ ಆಫ್​ ಮಹಾರಾಷ್ಟ್ರದಲ್ಲಿ 13,000 ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಲಕ್ಷಾಂತರ ಉದ್ಯೋಗಿಗಳನ್ನು ಹೊಂದಿರುವ ಸರ್ಕಾರಿ ಬ್ಯಾಂಕಿಂಗ್ ಕ್ಷೇತ್ರದ ಖಾಸಗೀಕರಣವು ರಾಜಕೀಯವಾಗಿ ಅಪಾಯಕಾರಿಯಾಗಿದೆ. ಇದರಿಂದ ಉದ್ಯೋಗ ನಷ್ಟ ಉಂಟಾಗಬಹದು ಎಂದು ತಜ್ಞರು ಎಚ್ಚರಿಸಿದ್ದಾರೆ.

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಖಾಸಗೀಕರಣ ಹಾಗೂ ಎಲ್​ಐಸಿ ಷೇರುಗಳ್ನು ಸರ್ಕಾರ ಮಾರಾಟ ಮಾಡುತ್ತಿರುವುದನ್ನು ವಿರೋಧಿಸಿ ಸೋಮವಾರ ಪ್ರತಿಭಟನೆ ನಡೆದಿದೆ.

ಇದನ್ನೂ ಓದಿ: HDFC ಬ್ಯಾಂಕ್ ಗ್ರಾಹಕರೇ ಎಚ್ಚರ: RBIನ ಈ ತೀರ್ಮಾನದಿಂದ ನಿಮ್ಮ ಹಣಕಾಸು ವ್ಯವಹಾರಕ್ಕೆ ತೊಂದರೆಯಾಗಬಹುದು..!

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ