AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕ್ ಆಫ್ ಇಂಡಿಯಾ ಸೇರಿ 4 ಬ್ಯಾಂಕ್​ಗಳ ಖಾಸಗೀಕರಣಕ್ಕೆ ಮುಂದಾದ ಕೇಂದ್ರ ಸರ್ಕಾರ

ಖಾಸಗೀಕರಣದ ಮೊದಲ ಹಂತ ಇದಾಗಿದೆ. ಸರ್ಕಾರಿ ಸ್ವಾಮ್ಯದ ಮಧ್ಯಮ ಗಾತ್ರದ ಬ್ಯಾಂಕ್ ಹಾಗೂ ಸಣ್ಣ ಬ್ಯಾಂಕ್​​​ಗಳನ್ನು ಮೊದಲು ಮಾರಾಟ ಮಾಡಲಾಗುತ್ತಿದೆ.

ಬ್ಯಾಂಕ್ ಆಫ್ ಇಂಡಿಯಾ ಸೇರಿ 4 ಬ್ಯಾಂಕ್​ಗಳ ಖಾಸಗೀಕರಣಕ್ಕೆ ಮುಂದಾದ ಕೇಂದ್ರ ಸರ್ಕಾರ
ಬ್ಯಾಂಕ್​ ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Feb 15, 2021 | 7:54 PM

Share

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ  ಅಧಿಕಾರಕ್ಕೆ ಬಂದ ನಂತರದಲ್ಲಿ ಖಾಸಗೀಕರಣಕ್ಕೆ ಹೆಚ್ಚು ಒತ್ತು ನೀಡುತ್ತಿದ್ದಾರೆ. ರೈಲ್ವೆ​ ಸೇರಿ ಅನೇಕ ವಲಯಗಳು ನಿಧಾನವಾಗಿ ಖಾಸಗೀಕರಣಗೊಳ್ಳುತ್ತಿವೆ. ಈಗ ಕೇಂದ್ರ ಸರ್ಕಾರ ಬ್ಯಾಂಕ್​ಗಳ ಮೇಲೆ ಕಣ್ಣಿಟ್ಟಿದೆ. ನಾಲ್ಕು ಮಧ್ಯಮ ಗಾತ್ರದ ಬ್ಯಾಂಕ್​ಗಳನ್ನು ಖಾಸಗೀಕರಣ ಮಾಡಲು ಕೇಂದ್ರ ಮುಂದಾಗಿದೆ ಎಂದು ವರದಿ ಹೇಳಿದೆ.

ಮೊದಲ ಹಂತದಲ್ಲಿ ಬ್ಯಾಂಕ್​ ಆಫ್​ ಮಹಾರಾಷ್ಟ್ರ, ಬ್ಯಾಂಕ್​ ಆಫ್​ ಇಂಡಿಯಾ, ಇಂಡಿಯನ್​ ಓವರ್​​ಸೀಸ್​ ಬ್ಯಾಂಕ್​ ಮತ್ತು ಸೆಂಟ್ರಲ್​ ಬ್ಯಾಂಕ್​ ಆಫ್​ ಇಂಡಿಯಾವನ್ನು ಮಾರಾಟ ಮಾಡಲು ಚಿಂತನೆ ನಡೆಸಲಾಗಿದೆ. ಆದರೆ, ಈ ವಿಚಾರದ ಬಗ್ಗೆ ಕೇಂದ್ರ ಸರ್ಕಾರದಿಂದ ಯಾವುದೇ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ.

ಖಾಸಗೀಕರಣದ ಮೊದಲ ಹಂತ ಇದಾಗಿದೆ. ಸರ್ಕಾರಿ ಸ್ವಾಮ್ಯದ ಮಧ್ಯಮ ಗಾತ್ರದ ಬ್ಯಾಂಕ್ ಹಾಗೂ ಸಣ್ಣ ಬ್ಯಾಂಕ್​​​ಗಳನ್ನು ಮೊದಲು ಮಾರಾಟ ಮಾಡಲಾಗುತ್ತಿದೆ. ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದರೆ, ದೇಶದ ದೊಡ್ಡ ಬ್ಯಾಂಕ್​ಗಳನ್ನು ಖಾಸಗೀಕರಣ ಮಾಡುವ ಆಲೋಚನೆ ಕೇಂದ್ರ ಸರ್ಕಾರದ್ದು. ಈ ಬಗ್ಗೆ ಉತ್ತರ ನೀಡಲು ಹಣಕಾಸು ಸಚಿವಾಲಯ ನಿರಾಕರಿಸಿದೆ.

ಬ್ಯಾಂಕ್​ ಆಫ್​ ಇಂಡಿಯಾದಲ್ಲಿ 50,000 ಮತ್ತು ಸೆಂಟ್ರಲ್​ ಬ್ಯಾಂಕ್​ ಆಫ್​ ಇಂಡಿಯಾದಲ್ಲಿ 33,000, ಇಂಡಿಯನ್​ ಓವರ್​ಸೀಸ್​ ಬ್ಯಾಂಕ್​ನಲ್ಲಿ 26,000 ಹಾಗೂ ಬ್ಯಾಂಕ್​ ಆಫ್​ ಮಹಾರಾಷ್ಟ್ರದಲ್ಲಿ 13,000 ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಲಕ್ಷಾಂತರ ಉದ್ಯೋಗಿಗಳನ್ನು ಹೊಂದಿರುವ ಸರ್ಕಾರಿ ಬ್ಯಾಂಕಿಂಗ್ ಕ್ಷೇತ್ರದ ಖಾಸಗೀಕರಣವು ರಾಜಕೀಯವಾಗಿ ಅಪಾಯಕಾರಿಯಾಗಿದೆ. ಇದರಿಂದ ಉದ್ಯೋಗ ನಷ್ಟ ಉಂಟಾಗಬಹದು ಎಂದು ತಜ್ಞರು ಎಚ್ಚರಿಸಿದ್ದಾರೆ.

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಖಾಸಗೀಕರಣ ಹಾಗೂ ಎಲ್​ಐಸಿ ಷೇರುಗಳ್ನು ಸರ್ಕಾರ ಮಾರಾಟ ಮಾಡುತ್ತಿರುವುದನ್ನು ವಿರೋಧಿಸಿ ಸೋಮವಾರ ಪ್ರತಿಭಟನೆ ನಡೆದಿದೆ.

ಇದನ್ನೂ ಓದಿ: HDFC ಬ್ಯಾಂಕ್ ಗ್ರಾಹಕರೇ ಎಚ್ಚರ: RBIನ ಈ ತೀರ್ಮಾನದಿಂದ ನಿಮ್ಮ ಹಣಕಾಸು ವ್ಯವಹಾರಕ್ಕೆ ತೊಂದರೆಯಾಗಬಹುದು..!

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ