AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಯಾರಸಿಟಮಾಲ್ ಸೇರಿದಂತೆ 16 ಔಷಧಗಳನ್ನು ನೇರವಾಗಿ ಕೌಂಟರ್​​ನಲ್ಲಿ ಮಾರಲು ಸರ್ಕಾರ ನಿರ್ಧಾರ

ಇನ್ನು ಮುಂದೆ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆಯೇ ಈ 16 ಔಷಧಗಳನ್ನು ಕೌಂಟರ್​ಗಳಿಂದ (ಔಷಧಾಲಯಗಳು) ಖರೀದಿಸಬಹುದು.

ಪ್ಯಾರಸಿಟಮಾಲ್ ಸೇರಿದಂತೆ 16 ಔಷಧಗಳನ್ನು ನೇರವಾಗಿ ಕೌಂಟರ್​​ನಲ್ಲಿ ಮಾರಲು ಸರ್ಕಾರ ನಿರ್ಧಾರ
ಸಾಂದರ್ಭಿಕ ಚಿತ್ರImage Credit source: Hindustan Times
TV9 Web
| Edited By: |

Updated on:Jun 07, 2022 | 12:48 PM

Share

ನವದೆಹಲಿ: ಸಾಮಾನ್ಯವಾಗಿ ಬಹುತೇಕರು ಬಳಸುವಂತಹ ಪ್ಯಾರಸಿಟಮಾಲ್‌ನಂತಹ 16 ಔಷಧಗಳನ್ನು ಕೌಂಟರ್‌ನಲ್ಲಿ ಮಾರಾಟ ಮಾಡಲು ಸರ್ಕಾರವು ನಿರ್ಧರಿಸಿದೆ. ಕಾನೂನನ್ನು ಮಾರ್ಪಡಿಸುವ ಮೂಲಕ ಈ ಅತ್ಯಗತ್ಯ ಮತ್ತು ಅತಿ ಹೆಚ್ಚು ಬಳಕೆಯಲ್ಲಿರುವ 16 ಔಷಧಗಳನ್ನು ಕೌಂಟರ್​​ನಲ್ಲಿ ದೊರೆಯುವಂತೆ ಮಾಡಲಾಗುವುದು ಎಂದು ಭಾರತೀಯ ಗೆಜೆಟ್‌ನಲ್ಲಿ ಪ್ರಕಟಿಸಲಾದ ಕರಡು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಹೀಗಾಗಿ, ಇನ್ನು ಮುಂದೆ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆಯೇ ಈ 16 ಔಷಧಗಳನ್ನು ಕೌಂಟರ್​ಗಳಿಂದ (ಔಷಧಾಲಯಗಳು) ಖರೀದಿಸಬಹುದು. ಆ್ಯಂಟಿಬಯೋಟಿಕ್‌ಗಳು ಸೇರಿದಂತೆ ಹಲವಾರು ಔಷಧಿಗಳನ್ನು ಕೌಂಟರ್‌ನಲ್ಲಿ ಮಾರಾಟ ಮಾಡಲಾಗುವುದು. ದೇಶದಲ್ಲಿ ಪ್ರಿಸ್ಕ್ರಿಪ್ಷನ್ ಇಲ್ಲದೆ ಮಾರಾಟ ಮಾಡಬಹುದಾದ ಔಷಧಿಗಳನ್ನು ಪಟ್ಟಿಯಲ್ಲಿ ಸೇರಿಸಲು ಸರ್ಕಾರವು ಕ್ರಮಗಳನ್ನು ತೆಗೆದುಕೊಳ್ಳುತ್ತಿರುವುದು ಬಹುಶಃ ಇದೇ ಮೊದಲಾಗಿದೆ.

ಇದನ್ನೂ ಓದಿ: ಇನ್ನು ಈ 16 ಔಷಧಿ ಖರೀದಿಸಲು ಪ್ರಿಸ್ಕ್ರಿಪ್ಷನ್ ಬೇಕಾಗಿಲ್ಲ; ಶೀಘ್ರದಲ್ಲೇ ಪರಿಷ್ಕೃತ ನಿಯಮ ಜಾರಿ

ಪ್ರಿಸ್ಕ್ರಿಪ್ಷನ್ ಇಲ್ಲದೆ ಮಾರಾಟವಾಗುವ ಇತರ ಔಷಧಿಗಳಲ್ಲಿ ಕೆಲವು ಡಿಕೊಂಗಸ್ಟೆಂಟ್‌ಗಳು, ಸಾಮಾನ್ಯವಾಗಿ ಬಳಸುವ ಲಾಕ್ಸಾಟಿವ್ಸ್​, ಕೆಲವು ಮೌತ್‌ವಾಶ್‌ಗಳು, ಮೊಡವೆ-ನಿವಾರಕ ಕ್ರೀಮ್‌ಗಳು ಮತ್ತು ಪೇಯ್ನ್ ಕಿಲ್ಲರ್​ಗಳು ಸೇರಿವೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಔಷಧಗಳ ನಿಯಂತ್ರಣ ಕಾಯಿದೆ, 1945ಕ್ಕೆ ಬದಲಾವಣೆಗಳನ್ನು ಪ್ರಸ್ತಾಪಿಸಿದೆ. ಈ 16 ಔಷಧಗಳನ್ನು ನಿರಂತರವಾಗಿ 5 ದಿನಕ್ಕಿಂತ ಹೆಚ್ಚು ಮುಂದುವರಿಸಬಾರದು, ರೋಗಲಕ್ಷಣಗಳು ಕಡಿಮೆಯಾಗದಿದ್ದರೆ ರೋಗಿಯು ವೈದ್ಯರನ್ನು ಸಂಪರ್ಕಿಸಬೇಕು ಎಂಬ ಷರತ್ತನ್ನೂ ವಿಧಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:46 pm, Tue, 7 June 22

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್