AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಯಾರಸಿಟಮಾಲ್ ಸೇರಿದಂತೆ 16 ಔಷಧಗಳನ್ನು ನೇರವಾಗಿ ಕೌಂಟರ್​​ನಲ್ಲಿ ಮಾರಲು ಸರ್ಕಾರ ನಿರ್ಧಾರ

ಇನ್ನು ಮುಂದೆ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆಯೇ ಈ 16 ಔಷಧಗಳನ್ನು ಕೌಂಟರ್​ಗಳಿಂದ (ಔಷಧಾಲಯಗಳು) ಖರೀದಿಸಬಹುದು.

ಪ್ಯಾರಸಿಟಮಾಲ್ ಸೇರಿದಂತೆ 16 ಔಷಧಗಳನ್ನು ನೇರವಾಗಿ ಕೌಂಟರ್​​ನಲ್ಲಿ ಮಾರಲು ಸರ್ಕಾರ ನಿರ್ಧಾರ
ಸಾಂದರ್ಭಿಕ ಚಿತ್ರImage Credit source: Hindustan Times
TV9 Web
| Edited By: |

Updated on:Jun 07, 2022 | 12:48 PM

Share

ನವದೆಹಲಿ: ಸಾಮಾನ್ಯವಾಗಿ ಬಹುತೇಕರು ಬಳಸುವಂತಹ ಪ್ಯಾರಸಿಟಮಾಲ್‌ನಂತಹ 16 ಔಷಧಗಳನ್ನು ಕೌಂಟರ್‌ನಲ್ಲಿ ಮಾರಾಟ ಮಾಡಲು ಸರ್ಕಾರವು ನಿರ್ಧರಿಸಿದೆ. ಕಾನೂನನ್ನು ಮಾರ್ಪಡಿಸುವ ಮೂಲಕ ಈ ಅತ್ಯಗತ್ಯ ಮತ್ತು ಅತಿ ಹೆಚ್ಚು ಬಳಕೆಯಲ್ಲಿರುವ 16 ಔಷಧಗಳನ್ನು ಕೌಂಟರ್​​ನಲ್ಲಿ ದೊರೆಯುವಂತೆ ಮಾಡಲಾಗುವುದು ಎಂದು ಭಾರತೀಯ ಗೆಜೆಟ್‌ನಲ್ಲಿ ಪ್ರಕಟಿಸಲಾದ ಕರಡು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಹೀಗಾಗಿ, ಇನ್ನು ಮುಂದೆ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆಯೇ ಈ 16 ಔಷಧಗಳನ್ನು ಕೌಂಟರ್​ಗಳಿಂದ (ಔಷಧಾಲಯಗಳು) ಖರೀದಿಸಬಹುದು. ಆ್ಯಂಟಿಬಯೋಟಿಕ್‌ಗಳು ಸೇರಿದಂತೆ ಹಲವಾರು ಔಷಧಿಗಳನ್ನು ಕೌಂಟರ್‌ನಲ್ಲಿ ಮಾರಾಟ ಮಾಡಲಾಗುವುದು. ದೇಶದಲ್ಲಿ ಪ್ರಿಸ್ಕ್ರಿಪ್ಷನ್ ಇಲ್ಲದೆ ಮಾರಾಟ ಮಾಡಬಹುದಾದ ಔಷಧಿಗಳನ್ನು ಪಟ್ಟಿಯಲ್ಲಿ ಸೇರಿಸಲು ಸರ್ಕಾರವು ಕ್ರಮಗಳನ್ನು ತೆಗೆದುಕೊಳ್ಳುತ್ತಿರುವುದು ಬಹುಶಃ ಇದೇ ಮೊದಲಾಗಿದೆ.

ಇದನ್ನೂ ಓದಿ: ಇನ್ನು ಈ 16 ಔಷಧಿ ಖರೀದಿಸಲು ಪ್ರಿಸ್ಕ್ರಿಪ್ಷನ್ ಬೇಕಾಗಿಲ್ಲ; ಶೀಘ್ರದಲ್ಲೇ ಪರಿಷ್ಕೃತ ನಿಯಮ ಜಾರಿ

ಪ್ರಿಸ್ಕ್ರಿಪ್ಷನ್ ಇಲ್ಲದೆ ಮಾರಾಟವಾಗುವ ಇತರ ಔಷಧಿಗಳಲ್ಲಿ ಕೆಲವು ಡಿಕೊಂಗಸ್ಟೆಂಟ್‌ಗಳು, ಸಾಮಾನ್ಯವಾಗಿ ಬಳಸುವ ಲಾಕ್ಸಾಟಿವ್ಸ್​, ಕೆಲವು ಮೌತ್‌ವಾಶ್‌ಗಳು, ಮೊಡವೆ-ನಿವಾರಕ ಕ್ರೀಮ್‌ಗಳು ಮತ್ತು ಪೇಯ್ನ್ ಕಿಲ್ಲರ್​ಗಳು ಸೇರಿವೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಔಷಧಗಳ ನಿಯಂತ್ರಣ ಕಾಯಿದೆ, 1945ಕ್ಕೆ ಬದಲಾವಣೆಗಳನ್ನು ಪ್ರಸ್ತಾಪಿಸಿದೆ. ಈ 16 ಔಷಧಗಳನ್ನು ನಿರಂತರವಾಗಿ 5 ದಿನಕ್ಕಿಂತ ಹೆಚ್ಚು ಮುಂದುವರಿಸಬಾರದು, ರೋಗಲಕ್ಷಣಗಳು ಕಡಿಮೆಯಾಗದಿದ್ದರೆ ರೋಗಿಯು ವೈದ್ಯರನ್ನು ಸಂಪರ್ಕಿಸಬೇಕು ಎಂಬ ಷರತ್ತನ್ನೂ ವಿಧಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:46 pm, Tue, 7 June 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ