AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಯಾರಸಿಟಮಾಲ್ ಸೇರಿದಂತೆ 16 ಔಷಧಗಳನ್ನು ನೇರವಾಗಿ ಕೌಂಟರ್​​ನಲ್ಲಿ ಮಾರಲು ಸರ್ಕಾರ ನಿರ್ಧಾರ

ಇನ್ನು ಮುಂದೆ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆಯೇ ಈ 16 ಔಷಧಗಳನ್ನು ಕೌಂಟರ್​ಗಳಿಂದ (ಔಷಧಾಲಯಗಳು) ಖರೀದಿಸಬಹುದು.

ಪ್ಯಾರಸಿಟಮಾಲ್ ಸೇರಿದಂತೆ 16 ಔಷಧಗಳನ್ನು ನೇರವಾಗಿ ಕೌಂಟರ್​​ನಲ್ಲಿ ಮಾರಲು ಸರ್ಕಾರ ನಿರ್ಧಾರ
ಸಾಂದರ್ಭಿಕ ಚಿತ್ರImage Credit source: Hindustan Times
TV9 Web
| Edited By: |

Updated on:Jun 07, 2022 | 12:48 PM

Share

ನವದೆಹಲಿ: ಸಾಮಾನ್ಯವಾಗಿ ಬಹುತೇಕರು ಬಳಸುವಂತಹ ಪ್ಯಾರಸಿಟಮಾಲ್‌ನಂತಹ 16 ಔಷಧಗಳನ್ನು ಕೌಂಟರ್‌ನಲ್ಲಿ ಮಾರಾಟ ಮಾಡಲು ಸರ್ಕಾರವು ನಿರ್ಧರಿಸಿದೆ. ಕಾನೂನನ್ನು ಮಾರ್ಪಡಿಸುವ ಮೂಲಕ ಈ ಅತ್ಯಗತ್ಯ ಮತ್ತು ಅತಿ ಹೆಚ್ಚು ಬಳಕೆಯಲ್ಲಿರುವ 16 ಔಷಧಗಳನ್ನು ಕೌಂಟರ್​​ನಲ್ಲಿ ದೊರೆಯುವಂತೆ ಮಾಡಲಾಗುವುದು ಎಂದು ಭಾರತೀಯ ಗೆಜೆಟ್‌ನಲ್ಲಿ ಪ್ರಕಟಿಸಲಾದ ಕರಡು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಹೀಗಾಗಿ, ಇನ್ನು ಮುಂದೆ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆಯೇ ಈ 16 ಔಷಧಗಳನ್ನು ಕೌಂಟರ್​ಗಳಿಂದ (ಔಷಧಾಲಯಗಳು) ಖರೀದಿಸಬಹುದು. ಆ್ಯಂಟಿಬಯೋಟಿಕ್‌ಗಳು ಸೇರಿದಂತೆ ಹಲವಾರು ಔಷಧಿಗಳನ್ನು ಕೌಂಟರ್‌ನಲ್ಲಿ ಮಾರಾಟ ಮಾಡಲಾಗುವುದು. ದೇಶದಲ್ಲಿ ಪ್ರಿಸ್ಕ್ರಿಪ್ಷನ್ ಇಲ್ಲದೆ ಮಾರಾಟ ಮಾಡಬಹುದಾದ ಔಷಧಿಗಳನ್ನು ಪಟ್ಟಿಯಲ್ಲಿ ಸೇರಿಸಲು ಸರ್ಕಾರವು ಕ್ರಮಗಳನ್ನು ತೆಗೆದುಕೊಳ್ಳುತ್ತಿರುವುದು ಬಹುಶಃ ಇದೇ ಮೊದಲಾಗಿದೆ.

ಇದನ್ನೂ ಓದಿ: ಇನ್ನು ಈ 16 ಔಷಧಿ ಖರೀದಿಸಲು ಪ್ರಿಸ್ಕ್ರಿಪ್ಷನ್ ಬೇಕಾಗಿಲ್ಲ; ಶೀಘ್ರದಲ್ಲೇ ಪರಿಷ್ಕೃತ ನಿಯಮ ಜಾರಿ

ಪ್ರಿಸ್ಕ್ರಿಪ್ಷನ್ ಇಲ್ಲದೆ ಮಾರಾಟವಾಗುವ ಇತರ ಔಷಧಿಗಳಲ್ಲಿ ಕೆಲವು ಡಿಕೊಂಗಸ್ಟೆಂಟ್‌ಗಳು, ಸಾಮಾನ್ಯವಾಗಿ ಬಳಸುವ ಲಾಕ್ಸಾಟಿವ್ಸ್​, ಕೆಲವು ಮೌತ್‌ವಾಶ್‌ಗಳು, ಮೊಡವೆ-ನಿವಾರಕ ಕ್ರೀಮ್‌ಗಳು ಮತ್ತು ಪೇಯ್ನ್ ಕಿಲ್ಲರ್​ಗಳು ಸೇರಿವೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಔಷಧಗಳ ನಿಯಂತ್ರಣ ಕಾಯಿದೆ, 1945ಕ್ಕೆ ಬದಲಾವಣೆಗಳನ್ನು ಪ್ರಸ್ತಾಪಿಸಿದೆ. ಈ 16 ಔಷಧಗಳನ್ನು ನಿರಂತರವಾಗಿ 5 ದಿನಕ್ಕಿಂತ ಹೆಚ್ಚು ಮುಂದುವರಿಸಬಾರದು, ರೋಗಲಕ್ಷಣಗಳು ಕಡಿಮೆಯಾಗದಿದ್ದರೆ ರೋಗಿಯು ವೈದ್ಯರನ್ನು ಸಂಪರ್ಕಿಸಬೇಕು ಎಂಬ ಷರತ್ತನ್ನೂ ವಿಧಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:46 pm, Tue, 7 June 22

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್