AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಯಾರಸಿಟಮಾಲ್ ಸೇರಿದಂತೆ 16 ಔಷಧಗಳನ್ನು ನೇರವಾಗಿ ಕೌಂಟರ್​​ನಲ್ಲಿ ಮಾರಲು ಸರ್ಕಾರ ನಿರ್ಧಾರ

ಇನ್ನು ಮುಂದೆ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆಯೇ ಈ 16 ಔಷಧಗಳನ್ನು ಕೌಂಟರ್​ಗಳಿಂದ (ಔಷಧಾಲಯಗಳು) ಖರೀದಿಸಬಹುದು.

ಪ್ಯಾರಸಿಟಮಾಲ್ ಸೇರಿದಂತೆ 16 ಔಷಧಗಳನ್ನು ನೇರವಾಗಿ ಕೌಂಟರ್​​ನಲ್ಲಿ ಮಾರಲು ಸರ್ಕಾರ ನಿರ್ಧಾರ
ಸಾಂದರ್ಭಿಕ ಚಿತ್ರImage Credit source: Hindustan Times
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jun 07, 2022 | 12:48 PM

ನವದೆಹಲಿ: ಸಾಮಾನ್ಯವಾಗಿ ಬಹುತೇಕರು ಬಳಸುವಂತಹ ಪ್ಯಾರಸಿಟಮಾಲ್‌ನಂತಹ 16 ಔಷಧಗಳನ್ನು ಕೌಂಟರ್‌ನಲ್ಲಿ ಮಾರಾಟ ಮಾಡಲು ಸರ್ಕಾರವು ನಿರ್ಧರಿಸಿದೆ. ಕಾನೂನನ್ನು ಮಾರ್ಪಡಿಸುವ ಮೂಲಕ ಈ ಅತ್ಯಗತ್ಯ ಮತ್ತು ಅತಿ ಹೆಚ್ಚು ಬಳಕೆಯಲ್ಲಿರುವ 16 ಔಷಧಗಳನ್ನು ಕೌಂಟರ್​​ನಲ್ಲಿ ದೊರೆಯುವಂತೆ ಮಾಡಲಾಗುವುದು ಎಂದು ಭಾರತೀಯ ಗೆಜೆಟ್‌ನಲ್ಲಿ ಪ್ರಕಟಿಸಲಾದ ಕರಡು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಹೀಗಾಗಿ, ಇನ್ನು ಮುಂದೆ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆಯೇ ಈ 16 ಔಷಧಗಳನ್ನು ಕೌಂಟರ್​ಗಳಿಂದ (ಔಷಧಾಲಯಗಳು) ಖರೀದಿಸಬಹುದು. ಆ್ಯಂಟಿಬಯೋಟಿಕ್‌ಗಳು ಸೇರಿದಂತೆ ಹಲವಾರು ಔಷಧಿಗಳನ್ನು ಕೌಂಟರ್‌ನಲ್ಲಿ ಮಾರಾಟ ಮಾಡಲಾಗುವುದು. ದೇಶದಲ್ಲಿ ಪ್ರಿಸ್ಕ್ರಿಪ್ಷನ್ ಇಲ್ಲದೆ ಮಾರಾಟ ಮಾಡಬಹುದಾದ ಔಷಧಿಗಳನ್ನು ಪಟ್ಟಿಯಲ್ಲಿ ಸೇರಿಸಲು ಸರ್ಕಾರವು ಕ್ರಮಗಳನ್ನು ತೆಗೆದುಕೊಳ್ಳುತ್ತಿರುವುದು ಬಹುಶಃ ಇದೇ ಮೊದಲಾಗಿದೆ.

ಇದನ್ನೂ ಓದಿ: ಇನ್ನು ಈ 16 ಔಷಧಿ ಖರೀದಿಸಲು ಪ್ರಿಸ್ಕ್ರಿಪ್ಷನ್ ಬೇಕಾಗಿಲ್ಲ; ಶೀಘ್ರದಲ್ಲೇ ಪರಿಷ್ಕೃತ ನಿಯಮ ಜಾರಿ

ಪ್ರಿಸ್ಕ್ರಿಪ್ಷನ್ ಇಲ್ಲದೆ ಮಾರಾಟವಾಗುವ ಇತರ ಔಷಧಿಗಳಲ್ಲಿ ಕೆಲವು ಡಿಕೊಂಗಸ್ಟೆಂಟ್‌ಗಳು, ಸಾಮಾನ್ಯವಾಗಿ ಬಳಸುವ ಲಾಕ್ಸಾಟಿವ್ಸ್​, ಕೆಲವು ಮೌತ್‌ವಾಶ್‌ಗಳು, ಮೊಡವೆ-ನಿವಾರಕ ಕ್ರೀಮ್‌ಗಳು ಮತ್ತು ಪೇಯ್ನ್ ಕಿಲ್ಲರ್​ಗಳು ಸೇರಿವೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಔಷಧಗಳ ನಿಯಂತ್ರಣ ಕಾಯಿದೆ, 1945ಕ್ಕೆ ಬದಲಾವಣೆಗಳನ್ನು ಪ್ರಸ್ತಾಪಿಸಿದೆ. ಈ 16 ಔಷಧಗಳನ್ನು ನಿರಂತರವಾಗಿ 5 ದಿನಕ್ಕಿಂತ ಹೆಚ್ಚು ಮುಂದುವರಿಸಬಾರದು, ರೋಗಲಕ್ಷಣಗಳು ಕಡಿಮೆಯಾಗದಿದ್ದರೆ ರೋಗಿಯು ವೈದ್ಯರನ್ನು ಸಂಪರ್ಕಿಸಬೇಕು ಎಂಬ ಷರತ್ತನ್ನೂ ವಿಧಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:46 pm, Tue, 7 June 22

ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ರಷ್ಯಾದಲ್ಲಿ ರೈಲು ಹಾದುಹೋಗುತ್ತಿದ್ದಂತೆ ಕುಸಿದ ಸೇತುವೆ
ರಷ್ಯಾದಲ್ಲಿ ರೈಲು ಹಾದುಹೋಗುತ್ತಿದ್ದಂತೆ ಕುಸಿದ ಸೇತುವೆ