AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿಯಾದ ಕೆಲಸದ ಹೊರೆಯಿಂದಾಗಿ ಖಾಸಗಿ ಕಂಪನಿ ಉದ್ಯೋಗಿಯ ಸಾವಿನ ಬಗ್ಗೆ ತನಿಖೆಗೆ ಮುಂದಾದ ಸರ್ಕಾರ

ಅನ್ನಾ ಸೆಬಾಸ್ಟಿಯನ್ ಪೆರಾಯಿಲ್ ಅವರ ತಾಯಿ EY ಇಂಡಿಯಾ ಬಾಸ್ ರಾಜೀವ್ ಮೆಮಾನಿಗೆ ಇಮೇಲ್‌ ಮಾಡಿದ್ದರು. ನಮ್ಮ ಮಗಳು ಕೆಲಸಕ್ಕೆ ಸಂಬಂಧಿತ ಒತ್ತಡಕ್ಕೆ ಬಲಿಯಾಗಿಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅವಳು ಕೇರಳದ ಚಾರ್ಟರ್ಡ್ ಅಕೌಂಟೆಂಟ್ (CA) ಆಗಿದ್ದಳು ಎಂದು ಬರೆದಿದ್ದರು. ಇದು ತೀವ್ರ ಚರ್ಚೆಗೆ ಕಾರಣವಾಗಿದೆ.

ಅತಿಯಾದ ಕೆಲಸದ ಹೊರೆಯಿಂದಾಗಿ ಖಾಸಗಿ ಕಂಪನಿ ಉದ್ಯೋಗಿಯ ಸಾವಿನ ಬಗ್ಗೆ ತನಿಖೆಗೆ ಮುಂದಾದ ಸರ್ಕಾರ
ಅನ್ನಾ ಸೆಬಾಸ್ಟಿಯನ್ ಪೆರಾಯಿಲ್
ಸುಷ್ಮಾ ಚಕ್ರೆ
|

Updated on: Sep 19, 2024 | 5:04 PM

Share

ಪುಣೆ: ಮಹಾರಾಷ್ಟ್ರದ ಪುಣೆಯ ಉದ್ಯೋಗಿಯ ತಾಯಿ ಅರ್ನ್ಸ್ಟ್ ಆ್ಯಂಡ್ ಯಂಗ್ ಇಂಡಿಯಾ ಮುಖ್ಯಸ್ಥರಿಗೆ ಬರೆದ ಪತ್ರವೊಂದು ವೈರಲ್ ಆದ ಬಳಿಕ ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಅತಿಯಾದ ಕೆಲಸದ ಒತ್ತಡದಿಂದಾಗಿ ಅರ್ನ್ಸ್ಟ್ ಮತ್ತು ಯಂಗ್ ಇಂಡಿಯಾದ 26 ವರ್ಷದ ಚಾರ್ಟರ್ಡ್ ಅಕೌಂಟೆಂಟ್ ಸಾವಿಗೀಡಾಗಿದ್ದಾರೆ ಎಂದು ಆಕೆಯ ತಾಯಿ ಆರೋಪಿಸಿದ್ದರು. ಇದೀಗ ಗಂಭೀರ ಸ್ವರೂಪವನ್ನು ತಾಳಿದ್ದು, ಇದಕ್ಕೆ ಕಾರಣವಾದ ಸಂದರ್ಭಗಳ ಕುರಿತು ತನಿಖೆ ನಡೆಸುತ್ತಿರುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಪುಣೆಯ ಮಹಿಳೆಯ ತಾಯಿ ಅರ್ನ್ಸ್ಟ್ ಆ್ಯಂಡ್ ಯಂಗ್ ಇಂಡಿಯಾ ಮುಖ್ಯಸ್ಥರಿಗೆ ಬರೆದ ಪತ್ರವೊಂದು ವೈರಲ್ ಆದ ಬಳಿಕ ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಅಧಿಕ ಕೆಲಸದೊತ್ತಡದಿಂದ ಆರೋಗ್ಯದ ಮೇಲಾಗುವ ಪರಿಣಾಮಗಳ ಬಗ್ಗೆ ತೀವ್ರ ಚರ್ಚೆ ಏರ್ಪಟ್ಟಿದೆ.

ಕೇಂದ್ರ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಪುಣೆಯ ಅರ್ನ್ಸ್ಟ್ ಆ್ಯಂಡ್ ಯಂಗ್ (ಇವೈ) ಕಂಪನಿಯ 26 ವರ್ಷದ ಉದ್ಯೋಗಿಯ ಸಾವಿನ ಕುರಿತು ಕಾರ್ಮಿಕ ಸಚಿವಾಲಯವು ದೂರನ್ನು ಕೈಗೆತ್ತಿಕೊಂಡಿದೆ ಮತ್ತು ತನಿಖೆ ನಡೆಸುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ: ಶೈಕ್ಷಣಿಕ ಒತ್ತಡ ತಾಳಲಾರದೇ 7ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ MBA ವಿದ್ಯಾರ್ಥಿ

ಈ ಬಗ್ಗೆ ಕಾರ್ಮಿಕ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ಅಸುರಕ್ಷಿತ ಮತ್ತು ಶೋಷಣೆಯ ಕೆಲಸದ ವಾತಾವರಣದ ಆರೋಪದ ಬಗ್ಗೆ ಕೂಲಂಕುಷ ತನಿಖೆ ನಡೆಯುತ್ತಿದೆ.

“ಅನ್ನಾ ಸೆಬಾಸ್ಟಿಯನ್ ಪೆರಾಯಿಲ್ ಅವರ ದುರಂತ ಸಾವಿನಿಂದ ತೀವ್ರ ದುಃಖವಾಗಿದೆ. ಈ ಕುರಿತು ಕಾರ್ಮಿಕ ಸಚಿವಾಲಯವು ಅಧಿಕೃತವಾಗಿ ದೂರನ್ನು ಕೈಗೆತ್ತಿಕೊಂಡಿದೆ” ಎಂದು ಶೋಭಾ ಕರಂದ್ಲಾಜೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಸಚಿವರು, ಮಹಿಳಾ ಉದ್ಯೋಗಿಯ ಸಾವು ತುಂಬಾ ದುಃಖಕರವಾಗಿದೆ. ಇದು ಹಲವು ಹಂತಗಳಲ್ಲಿ ಗೊಂದಲ ಮೂಡಿಸಿದೆ ಎಂದು ಹೇಳಿದ್ದಾರೆ. ಅರ್ನ್ಸ್ಟ್ ಮತ್ತು ಯಂಗ್ ಇಂಡಿಯಾದಲ್ಲಿ ಶೋಷಣೆಯ ಕೆಲಸದ ವಾತಾವರಣದ ಬಗ್ಗೆ ಮೃತ ಯುವತಿಯ ಕುಟುಂಬದ ಆರೋಪಗಳ ಬಗ್ಗೆ ತನಿಖೆ ನಡೆಸಬೇಕೆಂದು ಕೋರಿದ್ದಾರೆ.

ಇದನ್ನೂ ಓದಿ: ಕೆಲಸದ ಒತ್ತಡದಿಂದಾಗಿ ಮೆಂಟಲ್ ಹೆಲ್ತ್ ಸಮಸ್ಯೆ; ಸಾವಿನ ಸಂಖ್ಯೆಯಲ್ಲೂ ಹೆಚ್ಚಳ

ಪುಣೆ ಮಹಿಳೆ ಈ ಬಗ್ಗೆ ಇಮೇಲ್ ಮಾಡಿದ್ದು, ನನ್ನ ಮಗಳು ಹೇಗೆ ತೀವ್ರ ಕೆಲಸದ ಒತ್ತಡದಲ್ಲಿದ್ದಳು, ಅದು ಹೇಗೆ ಅವಳ ಆರೋಗ್ಯದ ಮೇಲೆ ಪರಿಣಾಮ ಬೀರಿತು ಮತ್ತು ಅಂತಿಮವಾಗಿ ಅವಳ ಸಾವಿಗೆ ಕಾರಣವಾಯಿತು ಎಂದು ವಿವರಿಸಿದ್ದರು. ತನ್ನ ಮಗಳ ಅಂತ್ಯಕ್ರಿಯೆಯಲ್ಲಿ ಆಕೆಯ ಕಂಪನಿಯಿಂದ ಯಾರೂ ಭಾಗವಹಿಸಲಿಲ್ಲ ಎಂದು ಅವರು ಉಲ್ಲೇಖಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು