AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿಯಾದ ಕೆಲಸದ ಹೊರೆಯಿಂದಾಗಿ ಖಾಸಗಿ ಕಂಪನಿ ಉದ್ಯೋಗಿಯ ಸಾವಿನ ಬಗ್ಗೆ ತನಿಖೆಗೆ ಮುಂದಾದ ಸರ್ಕಾರ

ಅನ್ನಾ ಸೆಬಾಸ್ಟಿಯನ್ ಪೆರಾಯಿಲ್ ಅವರ ತಾಯಿ EY ಇಂಡಿಯಾ ಬಾಸ್ ರಾಜೀವ್ ಮೆಮಾನಿಗೆ ಇಮೇಲ್‌ ಮಾಡಿದ್ದರು. ನಮ್ಮ ಮಗಳು ಕೆಲಸಕ್ಕೆ ಸಂಬಂಧಿತ ಒತ್ತಡಕ್ಕೆ ಬಲಿಯಾಗಿಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅವಳು ಕೇರಳದ ಚಾರ್ಟರ್ಡ್ ಅಕೌಂಟೆಂಟ್ (CA) ಆಗಿದ್ದಳು ಎಂದು ಬರೆದಿದ್ದರು. ಇದು ತೀವ್ರ ಚರ್ಚೆಗೆ ಕಾರಣವಾಗಿದೆ.

ಅತಿಯಾದ ಕೆಲಸದ ಹೊರೆಯಿಂದಾಗಿ ಖಾಸಗಿ ಕಂಪನಿ ಉದ್ಯೋಗಿಯ ಸಾವಿನ ಬಗ್ಗೆ ತನಿಖೆಗೆ ಮುಂದಾದ ಸರ್ಕಾರ
ಅನ್ನಾ ಸೆಬಾಸ್ಟಿಯನ್ ಪೆರಾಯಿಲ್
ಸುಷ್ಮಾ ಚಕ್ರೆ
|

Updated on: Sep 19, 2024 | 5:04 PM

Share

ಪುಣೆ: ಮಹಾರಾಷ್ಟ್ರದ ಪುಣೆಯ ಉದ್ಯೋಗಿಯ ತಾಯಿ ಅರ್ನ್ಸ್ಟ್ ಆ್ಯಂಡ್ ಯಂಗ್ ಇಂಡಿಯಾ ಮುಖ್ಯಸ್ಥರಿಗೆ ಬರೆದ ಪತ್ರವೊಂದು ವೈರಲ್ ಆದ ಬಳಿಕ ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಅತಿಯಾದ ಕೆಲಸದ ಒತ್ತಡದಿಂದಾಗಿ ಅರ್ನ್ಸ್ಟ್ ಮತ್ತು ಯಂಗ್ ಇಂಡಿಯಾದ 26 ವರ್ಷದ ಚಾರ್ಟರ್ಡ್ ಅಕೌಂಟೆಂಟ್ ಸಾವಿಗೀಡಾಗಿದ್ದಾರೆ ಎಂದು ಆಕೆಯ ತಾಯಿ ಆರೋಪಿಸಿದ್ದರು. ಇದೀಗ ಗಂಭೀರ ಸ್ವರೂಪವನ್ನು ತಾಳಿದ್ದು, ಇದಕ್ಕೆ ಕಾರಣವಾದ ಸಂದರ್ಭಗಳ ಕುರಿತು ತನಿಖೆ ನಡೆಸುತ್ತಿರುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಪುಣೆಯ ಮಹಿಳೆಯ ತಾಯಿ ಅರ್ನ್ಸ್ಟ್ ಆ್ಯಂಡ್ ಯಂಗ್ ಇಂಡಿಯಾ ಮುಖ್ಯಸ್ಥರಿಗೆ ಬರೆದ ಪತ್ರವೊಂದು ವೈರಲ್ ಆದ ಬಳಿಕ ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಅಧಿಕ ಕೆಲಸದೊತ್ತಡದಿಂದ ಆರೋಗ್ಯದ ಮೇಲಾಗುವ ಪರಿಣಾಮಗಳ ಬಗ್ಗೆ ತೀವ್ರ ಚರ್ಚೆ ಏರ್ಪಟ್ಟಿದೆ.

ಕೇಂದ್ರ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಪುಣೆಯ ಅರ್ನ್ಸ್ಟ್ ಆ್ಯಂಡ್ ಯಂಗ್ (ಇವೈ) ಕಂಪನಿಯ 26 ವರ್ಷದ ಉದ್ಯೋಗಿಯ ಸಾವಿನ ಕುರಿತು ಕಾರ್ಮಿಕ ಸಚಿವಾಲಯವು ದೂರನ್ನು ಕೈಗೆತ್ತಿಕೊಂಡಿದೆ ಮತ್ತು ತನಿಖೆ ನಡೆಸುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ: ಶೈಕ್ಷಣಿಕ ಒತ್ತಡ ತಾಳಲಾರದೇ 7ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ MBA ವಿದ್ಯಾರ್ಥಿ

ಈ ಬಗ್ಗೆ ಕಾರ್ಮಿಕ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ಅಸುರಕ್ಷಿತ ಮತ್ತು ಶೋಷಣೆಯ ಕೆಲಸದ ವಾತಾವರಣದ ಆರೋಪದ ಬಗ್ಗೆ ಕೂಲಂಕುಷ ತನಿಖೆ ನಡೆಯುತ್ತಿದೆ.

“ಅನ್ನಾ ಸೆಬಾಸ್ಟಿಯನ್ ಪೆರಾಯಿಲ್ ಅವರ ದುರಂತ ಸಾವಿನಿಂದ ತೀವ್ರ ದುಃಖವಾಗಿದೆ. ಈ ಕುರಿತು ಕಾರ್ಮಿಕ ಸಚಿವಾಲಯವು ಅಧಿಕೃತವಾಗಿ ದೂರನ್ನು ಕೈಗೆತ್ತಿಕೊಂಡಿದೆ” ಎಂದು ಶೋಭಾ ಕರಂದ್ಲಾಜೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಸಚಿವರು, ಮಹಿಳಾ ಉದ್ಯೋಗಿಯ ಸಾವು ತುಂಬಾ ದುಃಖಕರವಾಗಿದೆ. ಇದು ಹಲವು ಹಂತಗಳಲ್ಲಿ ಗೊಂದಲ ಮೂಡಿಸಿದೆ ಎಂದು ಹೇಳಿದ್ದಾರೆ. ಅರ್ನ್ಸ್ಟ್ ಮತ್ತು ಯಂಗ್ ಇಂಡಿಯಾದಲ್ಲಿ ಶೋಷಣೆಯ ಕೆಲಸದ ವಾತಾವರಣದ ಬಗ್ಗೆ ಮೃತ ಯುವತಿಯ ಕುಟುಂಬದ ಆರೋಪಗಳ ಬಗ್ಗೆ ತನಿಖೆ ನಡೆಸಬೇಕೆಂದು ಕೋರಿದ್ದಾರೆ.

ಇದನ್ನೂ ಓದಿ: ಕೆಲಸದ ಒತ್ತಡದಿಂದಾಗಿ ಮೆಂಟಲ್ ಹೆಲ್ತ್ ಸಮಸ್ಯೆ; ಸಾವಿನ ಸಂಖ್ಯೆಯಲ್ಲೂ ಹೆಚ್ಚಳ

ಪುಣೆ ಮಹಿಳೆ ಈ ಬಗ್ಗೆ ಇಮೇಲ್ ಮಾಡಿದ್ದು, ನನ್ನ ಮಗಳು ಹೇಗೆ ತೀವ್ರ ಕೆಲಸದ ಒತ್ತಡದಲ್ಲಿದ್ದಳು, ಅದು ಹೇಗೆ ಅವಳ ಆರೋಗ್ಯದ ಮೇಲೆ ಪರಿಣಾಮ ಬೀರಿತು ಮತ್ತು ಅಂತಿಮವಾಗಿ ಅವಳ ಸಾವಿಗೆ ಕಾರಣವಾಯಿತು ಎಂದು ವಿವರಿಸಿದ್ದರು. ತನ್ನ ಮಗಳ ಅಂತ್ಯಕ್ರಿಯೆಯಲ್ಲಿ ಆಕೆಯ ಕಂಪನಿಯಿಂದ ಯಾರೂ ಭಾಗವಹಿಸಲಿಲ್ಲ ಎಂದು ಅವರು ಉಲ್ಲೇಖಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ