AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇತಿಹಾಸ ರಚಿಸಲು ಪ್ರಧಾನಿ ಮೋದಿ ಸಮರ್ಥರಲ್ಲ: ಮ್ಯೂಸಿಯಂ ಹೆಸರು ಬದಲಾಯಿಸಿದ್ದಕ್ಕೆ ಪ್ರತಿಪಕ್ಷಗಳ ಟೀಕೆ

ಜೂನ್‌ನಲ್ಲಿ ನಡೆದ ವಿಶೇಷ ಸಭೆಯಲ್ಲಿ ಎನ್‌ಎಂಎಂಎಲ್ ಸೊಸೈಟಿ ತನ್ನ ಹೆಸರನ್ನು ಪಿಎಂಎಂಎಲ್ ಸೊಸೈಟಿ ಎಂದು ಬದಲಾಯಿಸುವ ನಿರ್ಧಾರೆ ತೆಗೆದುಕೊಳ್ಳಲಾಗಿತ್ತು. ಇದಾದ ನಂತರ ವಸ್ತುಸಂಗ್ರಹಾಲಯವನ್ನು ಅಧಿಕೃತವಾಗಿ ಆಗಸ್ಟ್ 14 ರಂದು ಮರುನಾಮಕರಣ ಮಾಡಲಾಯಿತು. ಈ ವಸ್ತುಸಂಗ್ರಹಾಲಯವು ತೀನ್ ಮೂರ್ತಿ ಭವನದಲ್ಲಿದೆ. ಇದು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಅಧಿಕೃತ ನಿವಾಸವಾಗಿದೆ.

ಇತಿಹಾಸ ರಚಿಸಲು ಪ್ರಧಾನಿ ಮೋದಿ ಸಮರ್ಥರಲ್ಲ: ಮ್ಯೂಸಿಯಂ ಹೆಸರು ಬದಲಾಯಿಸಿದ್ದಕ್ಕೆ ಪ್ರತಿಪಕ್ಷಗಳ ಟೀಕೆ
ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ
Follow us
ರಶ್ಮಿ ಕಲ್ಲಕಟ್ಟ
|

Updated on:Aug 16, 2023 | 6:45 PM

ದೆಹಲಿ ಆಗಸ್ಟ್ 16: ಇತಿಹಾಸ ರಚಿಸುವ ಅಗತ್ಯವಿದೆ, ಪ್ರಧಾನಿ ನರೇಂದ್ರ ಮೋದಿಯವರಿಗೆ (Narendra Modi) ಅದನ್ನು ರಚಿಸಲು ಸಾಧ್ಯವಾಗುತ್ತಿಲ್ಲ ಎಂದು ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಥೆ ಹೇಳಿದ್ದಾರೆ. ಕೇಂದ್ರ ಸರ್ಕಾರವು ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯವನ್ನು (NMML) ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ (PMML) ಎಂದು ಮರುನಾಮಕರಣ ಮಾಡಿದ ನಂತರ ಸುಪ್ರಿಯಾ ಈ ರೀತಿ ಪ್ರತಿಕ್ರಿಯಿಸಿದ್ದಾರೆ. ಅದೇ ವೇಳೆ ನೆಹರೂಗೆ ಸಮರ್ಪಿತವಾದ ಯಾವುದನ್ನಾದರೂ ಕೀಳಾಗಿ ನೋಡುವುದು ಅಥವಾ ಹೆಸರು ಬದಲಾಯಿಸುವ ರಾಜಕೀಯ ಮಾಡುವುದನ್ನು ಬಿಡಿ ಎಂದು ಅವರು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಪಂಡಿತ್ ನೆಹರು ಆಧುನಿಕ ಭಾರತವನ್ನು ನಿರ್ಮಿಸಿದರು ಮತ್ತು ಅಡಿಪಾಯ ಹಾಕಿದರು. ಅವರು ಈ ದೇಶದಲ್ಲಿ ಉದಾರವಾದಿ ಪ್ರಜಾಪ್ರಭುತ್ವವನ್ನು ಜೀವಂತವಾಗಿಟ್ಟ ಐಐಎಂಗಳು, ಏಮ್ಸ್, ಐಐಟಿಗಳು, ಇಸ್ರೋ ಮತ್ತು ಸಂಸ್ಥೆಗಳನ್ನು ನಿರ್ಮಿಸಿದರು. ಆದರೆ ಪ್ರಧಾನಿ ಮೋದಿ ಇತಿಹಾಸದಲ್ಲಿ ಬಹಳ ನಕಾರಾತ್ಮಕವಾಗಿ ನೆನಪಿಸಿಕೊಳ್ಳುತ್ತಾರೆ ಎಂದು ಅವರು ಸುದ್ದಿ ಸಂಸ್ಥೆ ಪಿಟಿಐ ಜತೆ ಮಾತನಾಡಿದ ಸುಪ್ರಿಯಾ ಹೇಳಿದ್ದಾರೆ.

ಜೂನ್‌ನಲ್ಲಿ ನಡೆದ ವಿಶೇಷ ಸಭೆಯಲ್ಲಿ ಎನ್‌ಎಂಎಂಎಲ್ ಸೊಸೈಟಿ ತನ್ನ ಹೆಸರನ್ನು ಪಿಎಂಎಂಎಲ್ ಸೊಸೈಟಿ ಎಂದು ಬದಲಾಯಿಸುವ ನಿರ್ಧಾರೆ ತೆಗೆದುಕೊಳ್ಳಲಾಗಿತ್ತು. ಇದಾದ ನಂತರ ವಸ್ತುಸಂಗ್ರಹಾಲಯವನ್ನು ಅಧಿಕೃತವಾಗಿ ಆಗಸ್ಟ್ 14 ರಂದು ಮರುನಾಮಕರಣ ಮಾಡಲಾಯಿತು. ಈ ವಸ್ತುಸಂಗ್ರಹಾಲಯವು ತೀನ್ ಮೂರ್ತಿ ಭವನದಲ್ಲಿದೆ. ಇದು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಅಧಿಕೃತ ನಿವಾಸವಾಗಿದೆ.

ಮ್ಯೂಸಿಯಂ ಹೆಸರನ್ನು ಅಧಿಕೃತವಾಗಿ ಬದಲಾಯಿಸಿದ ನಂತರ ರಾಜಕೀಯ ಪಕ್ಷಗಳು, ವಿಶೇಷವಾಗಿ ಕಾಂಗ್ರೆಸ್, ಕೇಂದ್ರ ಸರ್ಕಾರದ ಕ್ರಮವನ್ನು ಟೀಕಿಸಿವೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ನೆಹರೂ ಪರಂಪರೆಯನ್ನು ನಿರಾಕರಿಸುವ, ವಿರೂಪಗೊಳಿಸುವ, ಮಾನಹಾನಿ ಮಾಡುವ ಮತ್ತು ನಾಶಪಡಿಸುವ ಕಾರ್ಯಸೂಚಿಯನ್ನು ಮಾತ್ರ ಹೊಂದಿದೆ ಎಂದು ಕಾಂಗ್ರೆಸ್ ಹೇಳಿದೆ.

ತೀನ್ ಮೂರ್ತಿ ಭವನ ಇತರ ಪ್ರಧಾನಿಗಳ ನಿವಾಸವಾಗಿರಲಿಲ್ಲ. ಇದು ಒಂದು ಐತಿಹಾಸಿಕ ಸ್ಥಳವಾಗಿದ್ದು, ನೆಹರೂ ಅವರು ದೇಶ ವಿಭಜನೆಯಿಂದ ಅವರು ಸಾಯುವವರೆಗೂ ಅಲ್ಲೇ ಇದ್ದರು. ಜವಾಹರಲಾಲ್ ನೆಹರು ಅವರು ದೇಶದ ಮಣ್ಣಿನಲ್ಲಿರುವುದರಿಂದ ಕೇಂದ್ರ ಸರ್ಕಾರಕ್ಕೆ ಅವರನ್ನು ಅಳಿಸಲು ಸಾಧ್ಯವಿಲ್ಲ ಎಂದು ಆರ್‌ಜೆಡಿ ನಾಯಕ ಮನೋಜ್ ಝಾ ಹೇಳಿದ್ದಾರೆ.

ಇದಕ್ಕೂ ಮೊದಲು, ಮ್ಯೂಸಿಯಂನ ಉನ್ನತ ಅಧಿಕಾರಿಗಳು ನೆಹರೂ ಪ್ರಶ್ನೆಯನ್ನು ಹೇಗೆ ನಿರ್ವಹಿಸಿದ್ದಾರೆ ಎಂಬುದನ್ನು ನೋಡಲು ಈ ಕ್ರಮವನ್ನು ಟೀಕಿಸಿದವರಿಗೆ ಸ್ಥಳಕ್ಕೆ ಭೇಟಿ ನೀಡುವಂತೆ ಸೂಚಿಸಿದರು. ಮ್ಯೂಸಿಯಂನ ಕಾರ್ಯಕಾರಿ ಮಂಡಳಿಯ ಉಪಾಧ್ಯಕ್ಷ ಎ ಸೂರ್ಯ ಪ್ರಕಾಶ್ ಅವರು NMML ಮತ್ತು PMML ನಡುವೆ ವ್ಯತ್ಯಾಸವನ್ನು ತೋರಿಸಿದ್ದಾರೆ.

ಇದನ್ನೂ ಓದಿ: ನ್ಯಾಯಾಲಯದ ಆದೇಶಗಳಲ್ಲಿ ಮಹಿಳೆಯರನ್ನು ಯಾವ ರೀತಿಯಲ್ಲಿ ಉಲ್ಲೇಖಿಸಬಾರದು ಎಂದು ನ್ಯಾಯಾಧೀಶರಿಗೆ ಸುಪ್ರೀಂಕೋರ್ಟ್ ಕೈಪಿಡಿ

ನೀವು ನೆಹರೂ ಮ್ಯೂಸಿಯಂ ಅನ್ನು ಈ ಹಿಂದೆ ನೋಡಿದ್ದರೆ, ಹಲವು ವರ್ಷಗಳ ಕಾಲ ಸಂಸ್ಥೆಯ ಉಸ್ತುವಾರಿ ವಹಿಸಿದ್ದ ನೆಹರು-ಗಾಂಧಿ ಕುಟುಂಬವು ಆ ವಸ್ತುಸಂಗ್ರಹಾಲಯವನ್ನು ಹೇಗೆ ನಿರ್ವಹಿಸಿದ್ದರು ಎಂಬ ಕಲ್ಪನೆ ನಿಮಗೆ ಬರುತ್ತದೆ. ನಾವು ಅದರ ಬಗ್ಗೆ ಯೋಚಿಸಿದರೆ, ಅವರು ನೆಹರೂ ಜಿಯನ್ನು ಯಾವ ರೀತಿಯ ಚಿಂತನೆಯನ್ನು ಹೊಂದಿದ್ದಾರೆ ಎಂಬುದಕ್ಕೆ ಇದು ನಿಮಗೆ ಕಲ್ಪನೆಯನ್ನು ನೀಡುತ್ತದೆ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:39 pm, Wed, 16 August 23

ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್