AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಕೆಜಿಗೆ 65 ರೂ. ಸಬ್ಸಿಡಿ ದರದಲ್ಲಿ ಟೊಮ್ಯಾಟೊ ಮಾರಾಟ ಆರಂಭಿಸಿದ ಕೇಂದ್ರ ಸರ್ಕಾರ

ಸಾಮಾನ್ಯ ಜನರಿಗೆ ಪರಿಹಾರ ನೀಡಲು ಮತ್ತು ಮಧ್ಯವರ್ತಿಗಳ ಕಾಟವನ್ನು ತಡೆಯಲು ಕೇಂದ್ರ ಸರ್ಕಾರವು ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಕೆಜಿಗೆ 65 ರೂ.ಗೆ ಟೊಮ್ಯಾಟೊವನ್ನು ಸಬ್ಸಿಡಿ ದರದಲ್ಲಿ ಮಾರಾಟ ಮಾಡಲು ಪ್ರಾರಂಭಿಸಿದೆ. ದೆಹಲಿಯಲ್ಲಿ ಟೊಮ್ಯಾಟೊ ಕೆಜಿಗೆ ಸರಾಸರಿ 90 ರೂ.ಗೆ ಮಾರಾಟವಾಗುತ್ತಿದೆ.

ದೆಹಲಿಯಲ್ಲಿ ಕೆಜಿಗೆ 65 ರೂ. ಸಬ್ಸಿಡಿ ದರದಲ್ಲಿ ಟೊಮ್ಯಾಟೊ ಮಾರಾಟ ಆರಂಭಿಸಿದ ಕೇಂದ್ರ ಸರ್ಕಾರ
ಟೊಮ್ಯಾಟೊ
ಸುಷ್ಮಾ ಚಕ್ರೆ
|

Updated on: Oct 07, 2024 | 8:20 PM

Share

ನವದೆಹಲಿ: ಗ್ರಾಹಕರ ಮೇಲಿನ ಹೊರೆಯನ್ನು ತಗ್ಗಿಸುವ ಮತ್ತು ಮಧ್ಯವರ್ತಿಗಳಿಂದ ಅಧಿಕ ಲಾಭವನ್ನು ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರವು ಇಂದು ದೆಹಲಿಯಲ್ಲಿ ಪ್ರತಿ ಕೆಜಿಗೆ 65 ರೂ.ಗಳ ಸಬ್ಸಿಡಿ ದರದಲ್ಲಿ ಟೊಮ್ಯಾಟೊ ಹಣ್ಣಿನ ಮಾರಾಟವನ್ನು ಪ್ರಾರಂಭಿಸಿದೆ. ರಾಷ್ಟ್ರ ರಾಜಧಾನಿಯಲ್ಲಿ ಟೊಮ್ಯಾಟೊ ಬೆಲೆ ಏರಿಕೆಯಾಗಿದ್ದು, ಮಾರುಕಟ್ಟೆಯಲ್ಲಿ ಪ್ರತಿ ಕೆಜಿಗೆ ಸರಾಸರಿ 90 ರೂ.ಗೆ ಮಾರಾಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗ್ರಾಹಕರಿಗೆ ತಲೆಬಿಸಿಯಾಗಿತ್ತು.

ಕಡಿಮೆ ದರದಲ್ಲಿ ಟೊಮ್ಯಾಟೊ ಮಾರಾಟಕ್ಕೆ ಅನುಕೂಲವಾಗುವಂತೆ ನ್ಯಾಷನಲ್ ಕೋಆಪರೇಟಿವ್ ಕನ್ಸ್ಯೂಮರ್ಸ್ ಫೆಡರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಎನ್‌ಸಿಸಿಎಫ್) ನಗರದಾದ್ಯಂತ ಮೊಬೈಲ್ ವ್ಯಾನ್‌ಗಳನ್ನು ನಿಯೋಜಿಸಿದೆ. ಈ ಯೋಜನೆಯನ್ನು ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ನಿಧಿ ಖರೆ ಅವರು ಅಧಿಕೃತವಾಗಿ ಪ್ರಾರಂಭಿಸಿದರು. ಅವರು NCCF ವ್ಯಾನ್‌ಗಳನ್ನು ಫ್ಲ್ಯಾಗ್‌ಆಫ್ ಮಾಡಿದರು.

“ನಾವು ಟೊಮ್ಯಾಟೊ ಬೆಲೆಯನ್ನು ತಗ್ಗಿಸಲು ಪ್ರಯತ್ನಿಸುತ್ತಿದ್ದೇವೆ. ಈ ಮಾರುಕಟ್ಟೆ ಮಧ್ಯಸ್ಥಿಕೆಯೊಂದಿಗೆ ಮುಂದಿನ 3-4 ದಿನಗಳಲ್ಲಿ ಟೊಮ್ಯಾಟೊ ಬೆಲೆಗಳು ಕಡಿಮೆಯಾಗುತ್ತವೆ” ಎಂದು ನಿಧಿ ಖರೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

NCCF ನೇರವಾಗಿ ಮಂಡಿಗಳಿಂದ ಟೊಮ್ಯಾಟೊಗಳನ್ನು ಖರೀದಿಸಿ ಮತ್ತು ಪ್ರತಿ ಕೆಜಿಗೆ 65 ರೂಪಾಯಿಗಳ ಸಬ್ಸಿಡಿ ದರದಲ್ಲಿ ಮಾರಾಟ ಮಾಡುವ ಮೂಲಕ ಮಾರುಕಟ್ಟೆ ಹಸ್ತಕ್ಷೇಪವನ್ನು ಪ್ರಾರಂಭಿಸಿದೆ. ಮೊಬೈಲ್ ವ್ಯಾನ್‌ಗಳು ರಾಷ್ಟ್ರ ರಾಜಧಾನಿಯ 50 ಕಾಲೋನಿಗಳಲ್ಲಿ ಟೊಮ್ಯಾಟೊಗಳನ್ನು ಮಾರಾಟ ಮಾಡುತ್ತವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ