AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರಾದ್ಯಂತ ಎನ್​ಆರ್​ಸಿ ಜಾರಿ ಬಗ್ಗೆ ತೀರ್ಮಾನ ಮಾಡಿಲ್ಲ; ಸಂಸತ್​ಗೆ ಕೇಂದ್ರ ಸರ್ಕಾರ ಮಾಹಿತಿ

ಭಾರತದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಯಲ್ಲಿದೆ. ಕಾಯ್ದೆಯ ಹೊಸ ನಿಯಮಗಳು ಸಿದ್ಧವಾದ ನಂತರ ಅರ್ಹ ಜನರು ಪೌರತ್ವ ಪಡೆಯಲು ಅರ್ಜಿ ಸಲ್ಲಿಸಬಹುದು ಎಂದು ಕೇಂದ್ರ ಗೃಹ ಸಚಿವಾಲಯ ಇಂದು ಹೇಳಿದೆ.

ರಾಷ್ಟ್ರಾದ್ಯಂತ ಎನ್​ಆರ್​ಸಿ ಜಾರಿ ಬಗ್ಗೆ ತೀರ್ಮಾನ ಮಾಡಿಲ್ಲ; ಸಂಸತ್​ಗೆ ಕೇಂದ್ರ ಸರ್ಕಾರ ಮಾಹಿತಿ
ಗೃಹ ಸಚಿವ ಅಮಿತ್ ಶಾ (ಸಂಗ್ರಹ ಚಿತ್ರ)
Follow us
S Chandramohan
| Updated By: ಸುಷ್ಮಾ ಚಕ್ರೆ

Updated on:Nov 30, 2021 | 6:17 PM

ನವದೆಹಲಿ: ಭಾರತದಲ್ಲಿ ಈಗಾಗಲೇ ಪೌರತ್ವ ತಿದ್ದುಪಡಿ ಕಾಯ್ದೆಯು ಜಾರಿಯಲ್ಲಿದೆ ಎಂದು ಕೇಂದ್ರದ ಗೃಹ ಇಲಾಖೆಯು ಹೇಳಿದೆ. ಆದರೆ, ಪೌರತ್ವ ತಿದ್ದುಪಡಿ ಕಾಯ್ದೆಯ ಜಾರಿಗೆ ಅಗತ್ಯವಾದ ನಿಯಮಗಳನ್ನು ರಚಿಸುವುದು ಮಾತ್ರ ಬಾಕಿ ಇದೆ. ನಿಯಮಗಳು ರಚನೆಯಾದ ಬಳಿಕ ಅರ್ಹ ಜನರು ಭಾರತದ ಪೌರತ್ವ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ಇದೆ. ಇನ್ನೂ ರಾಷ್ಟ್ರವ್ಯಾಪಿ ಎನ್‌.ಆರ್‌.ಸಿ. ಜಾರಿಯ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಕೇಂದ್ರ ಗೃಹ ಇಲಾಖೆ ಹೇಳಿದೆ.

ಭಾರತದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಯಲ್ಲಿದೆ. ಕಾಯ್ದೆಯ ಹೊಸ ನಿಯಮಗಳು ಸಿದ್ಧವಾದ ನಂತರ ಅರ್ಹ ಜನರು ಪೌರತ್ವ ಪಡೆಯಲು ಅರ್ಜಿ ಸಲ್ಲಿಸಬಹುದು ಎಂದು ಕೇಂದ್ರ ಗೃಹ ಸಚಿವಾಲಯ ಇಂದು ಹೇಳಿದೆ. ಕೇಂದ್ರ ಗೃಹ ಸಚಿವಾಲಯವು CAA ಕುರಿತ ಪ್ರಶ್ನೆಯೊಂದಕ್ಕೆ ನೀಡಿದ ಉತ್ತರದಲ್ಲಿ ಸಿಎಎಯ ನಿಯಮಗಳು ಸಿದ್ಧವಾಗುವ ದಿನಾಂಕವನ್ನು ಸ್ಪಷ್ಟಪಡಿಸಿಲ್ಲ. ರಾಷ್ಟ್ರವ್ಯಾಪಿ ಎನ್‌ಆರ್‌ಸಿ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ.

ಪೌರತ್ವ (ತಿದ್ದುಪಡಿ) ಕಾಯ್ದೆ, 2019 (CAA) ಅನ್ನು 12 ಡಿಸೆಂಬರ್ 2019ರಂದು ಅಧಿಸೂಚನೆ ಹೊರಡಿಸಲಾಗಿದೆ. 10 ಜನವರಿ 2020ರಿಂದ ಪೌರತ್ವ ತಿದ್ದುಪಡಿ ಕಾಯ್ದೆ ದೇಶದಲ್ಲಿ ಜಾರಿಗೆ ಬಂದಿದೆ. CAA ಅಡಿಯಲ್ಲಿ ಒಳಗೊಳ್ಳುವ ವ್ಯಕ್ತಿಗಳು CAA ಅಡಿಯಲ್ಲಿ ನಿಯಮಗಳನ್ನು ರಚಿಸಿದ ನಂತರ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಬಹುದು ಎಂದು ಕೇಂದ್ರ ಗೃಹ ಸಚಿವಾಲಯ ಸಂಸತ್‌ಗೆ ತಿಳಿಸಿದೆ.

ರಾಷ್ಟ್ರೀಯವಾಗಿ ಎನ್‌ಆರ್‌ಐಸಿ ಅನುಷ್ಠಾನದ ಕುರಿತು ಕೇಂದ್ರ ಸರ್ಕಾರದ ನಿರ್ಧಾರದ ಕುರಿತು ಉತ್ತರಿಸಿದ ಕೇಂದ್ರ ಗೃಹ ಇಲಾಖೆಯು ಇಲ್ಲಿಯವರೆಗೆ ರಾಷ್ಟ್ರೀಯ ಮಟ್ಟದಲ್ಲಿ ಭಾರತೀಯ ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಐಸಿ) ತಯಾರಿಸಲು ಸರ್ಕಾರ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ. ಅಸ್ಸಾಂಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನ ನಿರ್ದೇಶನದ ಮೇರೆಗೆ ಎನ್‌ಆರ್‌ಸಿಯಲ್ಲಿ ಸೇರ್ಪಡೆಗಳ ಪೂರಕ ಪಟ್ಟಿ ಮತ್ತು ಆನ್‌ಲೈನ್ ಕುಟುಂಬವಾರು ಹೊರಗಿಡುವ ಪಟ್ಟಿಯ ಹಾರ್ಡ್ ಪ್ರತಿಗಳನ್ನು ಆಗಸ್ಟ್ 31, 2019ರಂದು ಪ್ರಕಟಿಸಲಾಗಿದೆ ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ಒಟ್ಟು 1,33,83,718 ಭಾರತೀಯ ಪ್ರಜೆಗಳು ವಿದೇಶಗಳಲ್ಲಿ ವಾಸಿಸುತ್ತಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಆನ್‌ಲೈನ್ ಪೌರತ್ವ ಮಾಡ್ಯೂಲ್‌ನಿಂದ ಪಡೆಯಲಾದ ಡೇಟಾ ಪ್ರಕಾರ ಒಟ್ಟಾರೆ 4,177 ಜನರಿಗೆ ಭಾರತೀಯ ಪೌರತ್ವವನ್ನು ನೀಡಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ.

ಇದನ್ನೂ ಓದಿ: Parliament Winter Session: ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕಾಶ್ಮೀರ, ಸಿಎಎ, ಎನ್ಆರ್‌ಸಿ ಬಗ್ಗೆ ಸಂಸದರಿಂದ ಪ್ರಶ್ನೆಗಳ ಸುರಿಮಳೆ

ಬಾಂಗ್ಲಾದೇಶಿ ಹಿಂದೂಗಳನ್ನು ರಕ್ಷಿಸಲು ಸಿಎಎಗೆ ತಿದ್ದುಪಡಿ ಮಾಡಿ: ಕಾಂಗ್ರೆಸ್ ನಾಯಕ ಮಿಲಿಂದ್ ದೆವರಾ

Published On - 6:16 pm, Tue, 30 November 21

ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ರಷ್ಯಾದಲ್ಲಿ ರೈಲು ಹಾದುಹೋಗುತ್ತಿದ್ದಂತೆ ಕುಸಿದ ಸೇತುವೆ
ರಷ್ಯಾದಲ್ಲಿ ರೈಲು ಹಾದುಹೋಗುತ್ತಿದ್ದಂತೆ ಕುಸಿದ ಸೇತುವೆ