AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಟಿಟಿ ವೇದಿಕೆಗಳಿಗೆ ನಿಯಂತ್ರಣ ವಿಧಿಸುವ ಯೋಚನೆ ಸರ್ಕಾರಕ್ಕಿದೆ: ಕೇಂದ್ರ ಸರ್ಕಾರ

Regulate OTT: ಕೇಂದ್ರ ಸರ್ಕಾರಕ್ಕೆ ಓಟಿಟಿ ವೇದಿಕೆಗಳನ್ನು ನಿಯಂತ್ರಿಸಲು ನಿಯಮಗಳನ್ನು ವಿಧಿಸುವ ಯೋಚನೆಯಿದೆ ಎಂದು ಸುಪ್ರೀಂ ಕೋರ್ಟ್​ಗೆ ಕೇಂದ್ರ ಸರ್ಕಾರದ ಪ್ರತಿನಿಧಿ ಸಾಲಿಟೇಟರ್ ಜನರಲ್ ಸಂಜಯ್ ಜೈನ್ ತಿಳಿಸಿದ್ದಾರೆ.

ಓಟಿಟಿ ವೇದಿಕೆಗಳಿಗೆ ನಿಯಂತ್ರಣ ವಿಧಿಸುವ ಯೋಚನೆ ಸರ್ಕಾರಕ್ಕಿದೆ: ಕೇಂದ್ರ ಸರ್ಕಾರ
ಓಟಿಟಿ ವೇದಿಕೆಗಳಿಗೆ ನಿರ್ಬಂಧ ವಿಧಿಸುವ ಯೋಚನೆ ಸರ್ಕಾರಕ್ಕಿದೆ; ಕೇಂದ್ರ ಸರ್ಕಾರ
guruganesh bhat
| Edited By: ರಶ್ಮಿ ಕಲ್ಲಕಟ್ಟ|

Updated on: Feb 16, 2021 | 6:32 PM

Share

ದೆಹಲಿ: ಓಟಿಟಿ ವೇದಿಕೆಗಳ ಮೇಲೆ ಕೆಲವು ನಿರ್ಬಂಧಗಳನ್ನು ವಿಧಿಸಲು ಯೋಚಿಸುತ್ತಿದ್ದೇವೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್​ಗೆ ತಿಳಿಸಿದೆ. ಓಟಿಟಿ ವೇದಿಕೆಗಳ ಕುರಿತು ಕೇಂದ್ರ ಸರ್ಕಾರದ ನಿಲುವು ತಿಳಿಸಲು ಸೂಚಿಸಿದ್ದ ಸುಪ್ರೀಂ ಕೋರ್ಟ್​ನ ಮುಖ್ಯ ನಾಯಮೂರ್ತಿ ಎಸ್.ಎ.ಬೋಬ್ಡೆ, ನ್ಯಾಯಮೂರ್ತಿಗಳಾದ ಎ. ಎಸ್.ಬೋಪಣ್ಣ ಮತ್ತು ವಿ.ರಾಮಸುಬ್ರಹ್ಮಣ್ಯನ್ ಅವರಿದ್ದ ತ್ರಿಸದಸ್ಯ ಪೀಠಕ್ಕೆ ಕೇಂದ್ರ ಸರ್ಕಾರ ತನ್ನ ನಿಲುವು ತಿಳಿಸಿದೆ.

ಸುಪ್ರೀಂ ಕೋರ್ಟ್​ಗೆ ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಕೋರ್ಟ್​ನಲ್ಲಿ ವಾದ ಮಂಡಿಸಿದ ಹೆಚ್ಚುವರಿ ಸಾಲಿಟೇಟರ್ ಜನರಲ್ ಸಂಜಯ್ ಜೈನ್ ಈ ವಿಷಯ ತಿಳಿಸಿದ್ದು, ಸರ್ಕಾರಕ್ಕೆ ಓಟಿಟಿ ವೇದಿಕೆಗಳನ್ನು ನಿಯಂತ್ರಿಸಲು ನಿಯಮಗಳನ್ನು ವಿಧಿಸುವ ಯೋಚನೆಯಿದೆ ಎಂದು ತಿಳಿಸಿದ್ದಾರೆ. ಅಲ್ಲದೇ 6 ವಾರಗಳ ಒಳಗೆ ತನ್ನ ನಿಲುವನ್ನು ತಿಳಿಸುವಂತೆ ಸುಪ್ರೀಂ ಕೋರ್ಟ್ ತಿಳಿಸಿದೆ.

ವಕೀಲ ಶಶಾಂಕ್ ಶೇಖರ್ ಮತ್ತು ಅಪೂರ್ವಾ ಅರ್ಹಿತಾ ಅವರುಗಳು ಸಲ್ಲಿಸಿದ್ದ ಅರ್ಜಿಯಲ್ಲಿ ಕೇಂದ್ರ ಸರ್ಕಾರ ಓಟಿಟಿ ವೇದಿಕೆಗಳ ಮೇಲೆ ನಿರ್ಬಂಧ ಹೇರಬೇಕೆಂದು ಅರ್ಜಿ ಸಲ್ಲಿಸಿದ್ದರು.  ಕಳೆದ ವರ್ಷ ಅಕ್ಟೋಬರ್ 15ಕ್ಕೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರ, ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹಾಗೂ ಇಂಟರ್​ನೆಟ್ ಆ್ಯಂಡ್ ಮೊಬೈಲ್ ಅಸೋಸಿಯೇಷನ್ ಆಫ್ ಇಂಡಿಯಾಗೆ ನೋಟಿಸ್ ನೀಡಿತ್ತು.

ಇದನ್ನೂ ಓದಿ:   OTT Platforms ‘ಮುಚ್ಚುಮರೆ ಇಲ್ಲದ’ ಆನ್​ಲೈನ್ ವೇದಿಕೆಗಳಿಗೆ ಮೂಗುದಾರ ಹಾಕಬೇಕಾ?!

ಅರ್ಜಿಯಲ್ಲಿ ಏನಿದೆ?  ದೇಶದಲ್ಲಿ ಸಿನಿಮಾ ಥಿಯೇಟರ್ ಶೀಘ್ರವೇ ತೆರೆಯುವ ಸಾಧ್ಯತೆ ಇಲ್ಲ, ಓಟಿಟಿ ಅಥವಾ ಇತರ ಡಿಜಿಟಲ್ ಮೀಡಿಯಾ ವೇದಿಕೆಗಳಲ್ಲಿ ಸಿನಿಮಾ ನಿರ್ಮಾಪಕರು ಮತ್ತು ಕಲಾವಿದರು ತಮ್ಮ ಕಲೆಯನ್ನು ಬಿಡುಗಡೆ ಮಾಡುತ್ತಾರೆ. ಸೆನ್ಸಾರ್ ಮಂಡಳಿಯಿಂದ ಸಿನಿಮಾ ಅಥವಾ ಸರಣಿಗಾಗಿ ಪ್ರಮಾಣಪತ್ರವನ್ನು ಪಡೆಯಬೇಕು ಎಂಬುದರ ಬಗ್ಗೆ ಅವರು ಯೋಚಿಸುವುದಿಲ್ಲ. ಆದಾಗ್ಯೂ, ಡಿಜಿಟಲ್ ವಿಷಯದ ಮೇಲೆ ನಿಗಾ ಇರಿಸುವ ಮತ್ತು ನಿರ್ವಹಿಸುವ ಸಂಸ್ಥೆ ಅಥವಾ ಯಾವುದೇ ಕಾನೂನು ದೇಶದಲ್ಲಿ ಇಲ್ಲ. ಯಾವುದೇ ರೀತಿಯ ಫಿಲ್ಟರ್ ಅಥವಾ ಸ್ಕ್ರೀನಿಂಗ್ ಇಲ್ಲದೆಯೇ ಈ ಮಾಧ್ಯಮಗಳು ಜನರಲ್ಲಿಗೆ ತಲುಪುತ್ತದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು