AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಟಿಟಿ ವೇದಿಕೆಗಳಿಗೆ ನಿಯಂತ್ರಣ ವಿಧಿಸುವ ಯೋಚನೆ ಸರ್ಕಾರಕ್ಕಿದೆ: ಕೇಂದ್ರ ಸರ್ಕಾರ

Regulate OTT: ಕೇಂದ್ರ ಸರ್ಕಾರಕ್ಕೆ ಓಟಿಟಿ ವೇದಿಕೆಗಳನ್ನು ನಿಯಂತ್ರಿಸಲು ನಿಯಮಗಳನ್ನು ವಿಧಿಸುವ ಯೋಚನೆಯಿದೆ ಎಂದು ಸುಪ್ರೀಂ ಕೋರ್ಟ್​ಗೆ ಕೇಂದ್ರ ಸರ್ಕಾರದ ಪ್ರತಿನಿಧಿ ಸಾಲಿಟೇಟರ್ ಜನರಲ್ ಸಂಜಯ್ ಜೈನ್ ತಿಳಿಸಿದ್ದಾರೆ.

ಓಟಿಟಿ ವೇದಿಕೆಗಳಿಗೆ ನಿಯಂತ್ರಣ ವಿಧಿಸುವ ಯೋಚನೆ ಸರ್ಕಾರಕ್ಕಿದೆ: ಕೇಂದ್ರ ಸರ್ಕಾರ
ಓಟಿಟಿ ವೇದಿಕೆಗಳಿಗೆ ನಿರ್ಬಂಧ ವಿಧಿಸುವ ಯೋಚನೆ ಸರ್ಕಾರಕ್ಕಿದೆ; ಕೇಂದ್ರ ಸರ್ಕಾರ
guruganesh bhat
| Edited By: |

Updated on: Feb 16, 2021 | 6:32 PM

Share

ದೆಹಲಿ: ಓಟಿಟಿ ವೇದಿಕೆಗಳ ಮೇಲೆ ಕೆಲವು ನಿರ್ಬಂಧಗಳನ್ನು ವಿಧಿಸಲು ಯೋಚಿಸುತ್ತಿದ್ದೇವೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್​ಗೆ ತಿಳಿಸಿದೆ. ಓಟಿಟಿ ವೇದಿಕೆಗಳ ಕುರಿತು ಕೇಂದ್ರ ಸರ್ಕಾರದ ನಿಲುವು ತಿಳಿಸಲು ಸೂಚಿಸಿದ್ದ ಸುಪ್ರೀಂ ಕೋರ್ಟ್​ನ ಮುಖ್ಯ ನಾಯಮೂರ್ತಿ ಎಸ್.ಎ.ಬೋಬ್ಡೆ, ನ್ಯಾಯಮೂರ್ತಿಗಳಾದ ಎ. ಎಸ್.ಬೋಪಣ್ಣ ಮತ್ತು ವಿ.ರಾಮಸುಬ್ರಹ್ಮಣ್ಯನ್ ಅವರಿದ್ದ ತ್ರಿಸದಸ್ಯ ಪೀಠಕ್ಕೆ ಕೇಂದ್ರ ಸರ್ಕಾರ ತನ್ನ ನಿಲುವು ತಿಳಿಸಿದೆ.

ಸುಪ್ರೀಂ ಕೋರ್ಟ್​ಗೆ ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಕೋರ್ಟ್​ನಲ್ಲಿ ವಾದ ಮಂಡಿಸಿದ ಹೆಚ್ಚುವರಿ ಸಾಲಿಟೇಟರ್ ಜನರಲ್ ಸಂಜಯ್ ಜೈನ್ ಈ ವಿಷಯ ತಿಳಿಸಿದ್ದು, ಸರ್ಕಾರಕ್ಕೆ ಓಟಿಟಿ ವೇದಿಕೆಗಳನ್ನು ನಿಯಂತ್ರಿಸಲು ನಿಯಮಗಳನ್ನು ವಿಧಿಸುವ ಯೋಚನೆಯಿದೆ ಎಂದು ತಿಳಿಸಿದ್ದಾರೆ. ಅಲ್ಲದೇ 6 ವಾರಗಳ ಒಳಗೆ ತನ್ನ ನಿಲುವನ್ನು ತಿಳಿಸುವಂತೆ ಸುಪ್ರೀಂ ಕೋರ್ಟ್ ತಿಳಿಸಿದೆ.

ವಕೀಲ ಶಶಾಂಕ್ ಶೇಖರ್ ಮತ್ತು ಅಪೂರ್ವಾ ಅರ್ಹಿತಾ ಅವರುಗಳು ಸಲ್ಲಿಸಿದ್ದ ಅರ್ಜಿಯಲ್ಲಿ ಕೇಂದ್ರ ಸರ್ಕಾರ ಓಟಿಟಿ ವೇದಿಕೆಗಳ ಮೇಲೆ ನಿರ್ಬಂಧ ಹೇರಬೇಕೆಂದು ಅರ್ಜಿ ಸಲ್ಲಿಸಿದ್ದರು.  ಕಳೆದ ವರ್ಷ ಅಕ್ಟೋಬರ್ 15ಕ್ಕೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರ, ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹಾಗೂ ಇಂಟರ್​ನೆಟ್ ಆ್ಯಂಡ್ ಮೊಬೈಲ್ ಅಸೋಸಿಯೇಷನ್ ಆಫ್ ಇಂಡಿಯಾಗೆ ನೋಟಿಸ್ ನೀಡಿತ್ತು.

ಇದನ್ನೂ ಓದಿ:   OTT Platforms ‘ಮುಚ್ಚುಮರೆ ಇಲ್ಲದ’ ಆನ್​ಲೈನ್ ವೇದಿಕೆಗಳಿಗೆ ಮೂಗುದಾರ ಹಾಕಬೇಕಾ?!

ಅರ್ಜಿಯಲ್ಲಿ ಏನಿದೆ?  ದೇಶದಲ್ಲಿ ಸಿನಿಮಾ ಥಿಯೇಟರ್ ಶೀಘ್ರವೇ ತೆರೆಯುವ ಸಾಧ್ಯತೆ ಇಲ್ಲ, ಓಟಿಟಿ ಅಥವಾ ಇತರ ಡಿಜಿಟಲ್ ಮೀಡಿಯಾ ವೇದಿಕೆಗಳಲ್ಲಿ ಸಿನಿಮಾ ನಿರ್ಮಾಪಕರು ಮತ್ತು ಕಲಾವಿದರು ತಮ್ಮ ಕಲೆಯನ್ನು ಬಿಡುಗಡೆ ಮಾಡುತ್ತಾರೆ. ಸೆನ್ಸಾರ್ ಮಂಡಳಿಯಿಂದ ಸಿನಿಮಾ ಅಥವಾ ಸರಣಿಗಾಗಿ ಪ್ರಮಾಣಪತ್ರವನ್ನು ಪಡೆಯಬೇಕು ಎಂಬುದರ ಬಗ್ಗೆ ಅವರು ಯೋಚಿಸುವುದಿಲ್ಲ. ಆದಾಗ್ಯೂ, ಡಿಜಿಟಲ್ ವಿಷಯದ ಮೇಲೆ ನಿಗಾ ಇರಿಸುವ ಮತ್ತು ನಿರ್ವಹಿಸುವ ಸಂಸ್ಥೆ ಅಥವಾ ಯಾವುದೇ ಕಾನೂನು ದೇಶದಲ್ಲಿ ಇಲ್ಲ. ಯಾವುದೇ ರೀತಿಯ ಫಿಲ್ಟರ್ ಅಥವಾ ಸ್ಕ್ರೀನಿಂಗ್ ಇಲ್ಲದೆಯೇ ಈ ಮಾಧ್ಯಮಗಳು ಜನರಲ್ಲಿಗೆ ತಲುಪುತ್ತದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

Follow Us
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK