Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ವರ್ಷ ಕೇಂದ್ರ ಸರ್ಕಾರದಿಂದ ಜನಗಣತಿ; 2028ರ ವೇಳೆಗೆ ಲೋಕಸಭೆ ಸ್ಥಾನಗಳ ವಿಂಗಡಣೆ

ಜನಗಣತಿಯನ್ನು ಸಾಂಪ್ರದಾಯಿಕವಾಗಿ ಪ್ರತಿ ದಶಕದ ಮೊದಲ ವರ್ಷದಲ್ಲಿ ನಡೆಸಲಾಗುತ್ತಿತ್ತು. ಆದರೆ, ಕೊವಿಡ್-19 ಸಾಂಕ್ರಾಮಿಕ ರೋಗದಿಂದಾಗಿ 2021ರ ಜನಗಣತಿಯನ್ನು ಮುಂದೂಡಲಾಗಿತ್ತು. ಕೇಂದ್ರ ಸರ್ಕಾರ 2025ರಲ್ಲಿ ಜನಗಣತಿ ನಡೆಸುವ ಸಾಧ್ಯತೆಯಿದೆ.

ಮುಂದಿನ ವರ್ಷ ಕೇಂದ್ರ ಸರ್ಕಾರದಿಂದ ಜನಗಣತಿ; 2028ರ ವೇಳೆಗೆ ಲೋಕಸಭೆ ಸ್ಥಾನಗಳ ವಿಂಗಡಣೆ
ಜನಗಣತಿ
Follow us
ಸುಷ್ಮಾ ಚಕ್ರೆ
|

Updated on: Oct 28, 2024 | 3:52 PM

ನವದೆಹಲಿ: ಕೊರೊನಾದಿಂದ 2021ರಲ್ಲಿ ಮುಂದೂಡಲ್ಪಟ್ಟಿದ್ದ ಜನಗಣತಿಯನ್ನು ಮುಂದಿನ ವರ್ಷ ನಡೆಸಲು ಮತ್ತು 2026ರ ವೇಳೆಗೆ ಜನಗಣತಿಯ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸರ್ಕಾರವು ಸಜ್ಜಾಗಿದೆ. ಜನಗಣತಿ ಪೂರ್ಣಗೊಂಡ ನಂತರ, ಕ್ಷೇತ್ರಗಳ ಪುನರ್​ರಚನೆಗೆ ಸರ್ಕಾರವು ಡಿಲಿಮಿಟೇಶನ್‌ಗೆ ಮುಂದುವರಿಯುತ್ತದೆ. ನಂತರ ಮಹಿಳಾ ಮೀಸಲಾತಿ ಜಾರಿಯಾಗಲಿದೆ ಎಂದು ಮೂಲಗಳು ತಿಳಿಸಿವೆ. ಇದು ಜನಗಣತಿಗೆ ಸಂಬಂಧಿಸಿದೆ.

2002ರಲ್ಲಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಆಗಿನ ಎನ್‌ಡಿಎ ಸರ್ಕಾರವು 84ನೇ ತಿದ್ದುಪಡಿಯ ಮೂಲಕ 25 ವರ್ಷಗಳ ಕಾಲ ಡಿಲಿಮಿಟೇಶನ್ ಅನ್ನು ವಿಳಂಬಗೊಳಿಸಿತು. 2031ರ ಜನಗಣತಿಯ ನಂತರ ಡಿಲಿಮಿಟೇಶನ್ ಅನ್ನು ಕೈಗೊಳ್ಳಲಾಗುವುದು. ಮೂಲಗಳ ಪ್ರಕಾರ, ಸರ್ಕಾರವು ಈಗ 2027ರ ವೇಳೆಗೆ ಡಿಲಿಮಿಟೇಶನ್ ಪ್ರಕ್ರಿಯೆಯನ್ನು ಪ್ರಾರಂಭಿಸಲು ಮತ್ತು ಒಂದು ವರ್ಷದೊಳಗೆ ಅದನ್ನು ಪೂರ್ಣಗೊಳಿಸಲು ಯೋಜಿಸಿದೆ.

ಇದನ್ನೂ ಓದಿ: ವ್ಹೀಲ್​ಚೇರ್​ನಲ್ಲಿದ್ದ ಮಹಿಳೆ ಕಂಡು ಕಾರಿನಿಂದ ಕೆಳಗಿಳಿದು ಬಂದು ಮಾತನಾಡಿಸಿದ ಪ್ರಧಾನಿ ಮೋದಿ

ಇತ್ತೀಚೆಗೆ, ಭಾರತದ ರಿಜಿಸ್ಟ್ರಾರ್ ಜನರಲ್ ಮತ್ತು ಸೆನ್ಸಸ್ ಕಮಿಷನರ್ ಆಗಿ ಮೃತ್ಯುಂಜಯ್ ಕುಮಾರ್ ನಾರಾಯಣ್ ಅವರ ಅಧಿಕಾರಾವಧಿಯನ್ನು ಈ ಡಿಸೆಂಬರ್‌ನ ನಂತರ ಆಗಸ್ಟ್ 2026ರವರೆಗೆ ವಿಸ್ತರಿಸಲಾಯಿತು.

ಈ ಜನಗಣತಿಯ ನಂತರ ಮುಂದಿನ ಜನಗಣತಿಯನ್ನು 2035, 20245, 2025ರಂದು ನಡೆಸಲಾಗುವುದು. ಹಲವು ವಿರೋಧ ಪಕ್ಷಗಳು ಜಾತಿ ಗಣತಿಗೆ ಬೇಡಿಕೆ ಇಟ್ಟಿರುವ ನಡುವೆಯೇ ಈ ಬೆಳವಣಿಗೆ ನಡೆದಿದೆ. ಆದರೆ, ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ವರದಿಗಳು ತಿಳಿಸಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?
ಮಾಜಿ ಪ್ರಧಾನಿಯ ಮಗನಾಗಿ ಸರ್ಕಾರಿ ಜಮೀನು ಒತ್ತುವರಿ ಮಾಡ್ತೀನಾ? ಕುಮಾರಸ್ವಾಮಿ
ಮಾಜಿ ಪ್ರಧಾನಿಯ ಮಗನಾಗಿ ಸರ್ಕಾರಿ ಜಮೀನು ಒತ್ತುವರಿ ಮಾಡ್ತೀನಾ? ಕುಮಾರಸ್ವಾಮಿ
ಪಂದ್ಯವಾಡು ಫೈನ್ ಕಟ್ಟು: ಬ್ಯಾಕ್ ಟು ಬ್ಯಾಕ್ ದಂಡ ಕಟ್ಟಿದ ದಿಗ್ವೇಶ್ ರಾಠಿ
ಪಂದ್ಯವಾಡು ಫೈನ್ ಕಟ್ಟು: ಬ್ಯಾಕ್ ಟು ಬ್ಯಾಕ್ ದಂಡ ಕಟ್ಟಿದ ದಿಗ್ವೇಶ್ ರಾಠಿ
ಪೊಲೀಸರನ್ನು ಸ್ವತಂತ್ರವಾಗಿ ಕೆಲಸ ಮಾಡಲು ಬಿಡಿ: ಪ್ರತಾಪ್ ಸಿಂಹ
ಪೊಲೀಸರನ್ನು ಸ್ವತಂತ್ರವಾಗಿ ಕೆಲಸ ಮಾಡಲು ಬಿಡಿ: ಪ್ರತಾಪ್ ಸಿಂಹ