AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi chalo: ನಾಳೆ ಕೇಂದ್ರ ಸರ್ಕಾರದ ಜತೆ ರೈತ ಒಕ್ಕೂಟಗಳ ಇನ್ನೊಂದು ಸುತ್ತಿನ ಸಭೆ

ಕೇಂದ್ರ ಸರ್ಕಾರ ರೈತ ನಾಯಕರ ಜತೆ ಮುಕ್ತ ಮನಸ್ಸಿನಿಂದ ಚರ್ಚಿಸಲು ಸಿದ್ಧವಿದೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.

Delhi chalo: ನಾಳೆ ಕೇಂದ್ರ ಸರ್ಕಾರದ ಜತೆ ರೈತ ಒಕ್ಕೂಟಗಳ ಇನ್ನೊಂದು ಸುತ್ತಿನ ಸಭೆ
ಪಂಜಾಬ್ ರೈತರ ಘೋಷಣೆಯ ಭಂಗಿ ಭಾವ
guruganesh bhat
| Edited By: |

Updated on:Jan 14, 2021 | 7:54 PM

Share

ದೆಹಲಿ: ಕೇಂದ್ರ ಸರ್ಕಾರ ಮತ್ತು ರೈತ ಒಕ್ಕೂಟಗಳ ನಡುವೆ ನಾಳೆ ಸಭೆ ನಡೆಯಲಿದ್ದು, ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯುವ ಕುರಿತು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರ ರೈತ ನಾಯಕರ ಜತೆ ಮುಕ್ತ ಮನಸ್ಸಿನಿಂದ ಚರ್ಚಿಸಲು ಸಿದ್ಧವಿದೆ ಎಂದು ಅವರು ಪುನರುಚ್ಛರಿಸಿದ್ದಾರೆ. ನಾಳೆಯ ಸಭೆಗೆ ರೈತ ಸಂಘಟನೆಗಳು ಸಹ ಹಾಜರಾಗಲಿವೆ ಎಂದು ತಿಳಿದುಬಂದಿದೆ. ಸರ್ವೋಚ್ಛ ನ್ಯಾಯಾಲಯ ರಚಿಸಿದ ಸಮಿತಿಯೆದುರು ಹಾಜರಾಗುವ ಕುರಿತು ಅಪಸ್ವರ ತಳೆದಿರುವ ರೈತ ಒಕ್ಕೂಟಗಳು ಕೇಂದ್ರ ಸರ್ಕಾರದ ಜತೆ ಸಮಾಲೋಚನೆ ನಡೆಸುವ ಸಾಧ್ಯತೆ ಹೆಚ್ಚಿದೆ.

ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಏಕೆ ಪ್ರತಿಷ್ಠೆಯ ವಿಷಯವಾಗಿಸಿಕೊಂಡಿದೆ ಎಂದು ಅರ್ಥವಾಗುತ್ತಿಲ್ಲ. ಸರ್ಕಾರ ಕಾಯ್ದೆ ತಡೆಹಿಡಿಯದಿದ್ದರೇ, ನ್ಯಾಯಾಲಯವೇ ಕಾಯ್ದೆಗಳಿಗೆ ತಡೆಯಾಜ್ಞೆ ನೀಡಲಿದೆ ಎಂದು ಸುಪ್ರೀಂ ಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೋಬಡೆ ನೇತೃತ್ವದ ಸುಪ್ರೀಂ ನ್ಯಾಯಪೀಠ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಪ್ರತಿಭಟನೆಯಲ್ಲಿ ಹಿರಿಯ ನಾಗರಿಕರು ಮತ್ತು ಮಹಿಳೆಯರು ಸಹ ಭಾಗವಹಿಸುತ್ತಿದ್ದಾರೆ. ಕಳೆದ ಬಾರಿ ಸರ್ಕಾರವನ್ನು ಇದೇ ವಿಷಯದ ಕುರಿತು ಪ್ರಶ್ನಿಸಿದರೂ ಉತ್ತರ ಬಂದಿಲ್ಲ. ಈಗ ಪರಿಸ್ಥಿತಿ ಬಿಗಡಾಯಿಸುತ್ತಿದೆ, ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಚಳಿಯಿಂದ ತೊಂದರೆ ಅನುಭವಿಸುತ್ತಿದ್ದಾರೆ. ಕಾನೂನು ಜಾರಿಗೊಳಿಸದೇ ಇದ್ದರೆ ಏನಾಗಲಿದೆ ಎಂದು ನ್ಯಾಯಾಲಯಕ್ಕೂ ಅರ್ಥವಾಗಿಲ್ಲ ಎಂದು ನ್ಯಾಯಾಲಯ ಕೇಂದ್ರ ಸರ್ಕಾರದ ಕಿವಿ ಹಿಂಡಿತ್ತು.

ಸಭೆ ನಡೆಯಲಿರುವ ಹಿಂದಿನ ದಿನ ಸರ್ವೋಚ್ಛ ನ್ಯಾಯಾಲಯ ರೂಪಿಸಿದ್ದ ಸಮಿತಿಗೆ ಭೂಪೇಂದರ್ ಸಿಂಗ್ ರಾಜೀನಾಮೆ ಸಲ್ಲಿಸಿದ್ದಾರೆ.

ಕೃಷಿ ಕಾಯ್ದೆಗಳ ವಿರುದ್ಧ ಜನವರಿ 20ಕ್ಕೆ ಬೃಹತ್ ಚಳುವಳಿ ನಡೆಸಲಾಗುವುದು : ಡಿ.ಕೆ.ಶಿವಕುಮಾರ್​

Published On - 7:49 pm, Thu, 14 January 21

Follow Us
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!