AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಕೇಂದ್ರ ಗುಡ್​​ ನ್ಯೂಸ್​​: ವೇತನ ಪರಿಷ್ಕರಣೆಗೆ ಅಸ್ತು

ಕೇಂದ್ರ ಸರ್ಕಾರ ಸಾರ್ವಜನಿಕ ವಲಯದ ವಿಮಾ ಕಂಪನಿ, ನಬಾರ್ಡ್ ಹಾಗೂ ಆರ್‌ಬಿಐ ಉದ್ಯೋಗಿಗಳು ಮತ್ತು ಪಿಂಚಣಿದಾರರಿಗೆ ಬಹುನಿರೀಕ್ಷಿತ ವೇತನ ಹಾಗೂ ಪಿಂಚಣಿ ಪರಿಷ್ಕರಣೆಗೆ ಅನುಮೋದನೆ ನೀಡಿದೆ. ಆ ಮೂಲಕ ಕೇಂದ್ರ ಸರ್ಕಾರ ಗುಡ್​ ನ್ಯೂಸ್​ ನೀಡಿದೆ. ಕೇಂದ್ರ ಸರ್ಕಾರದ ಈ ನಿರ್ಧಾರ ಲಕ್ಷಾಂತರ ನೌಕರರು ಹಾಗೂ ನಿವೃತ್ತ ಪಿಂಚಣಿದಾರರಿಗೆ ಸಹಕಾರಿಯಾಗಲಿದೆ.

ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಕೇಂದ್ರ ಗುಡ್​​ ನ್ಯೂಸ್​​: ವೇತನ ಪರಿಷ್ಕರಣೆಗೆ ಅಸ್ತು
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Jan 24, 2026 | 10:07 PM

Share

ದೆಹಲಿ, ಜನವರಿ 24: ಬಹುಕಾಲದಿಂದ ಬಾಕಿ ಉಳಿದಿದ್ದ ವೇತನ ಪರಿಷ್ಕರಣೆಗೆ (Wage Revision) ಕೇಂದ್ರ ಸರ್ಕಾರ ಶುಕ್ರವಾರ ಅನುಮೋದನೆ ನೀಡಿದೆ. ಆ ಮೂಲಕ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಸರ್ಕಾರ ಗುಡ್​ ನ್ಯೂಸ್ ನೀಡಿದೆ. ಸಾರ್ವಜನಿಕ ವಲಯದ ವಿಮಾ ಕಂಪನಿ, ನಬಾರ್ಡ್​​ ಉದ್ಯೋಗಿಗಳು, ಭಾರತೀಯ ರಿಸರ್ವ್​​ ಬ್ಯಾಂಕ್ ಮತ್ತು ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್​​​ನಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಪಿಂಚಣಿದಾರರಿಗೆ ಪಿಂಚಣಿ ಹೆಚ್ಚಳವಾಗಲಿದೆ.​​​

ಈ ಬಗ್ಗೆ ಕೇಂದ್ರ ಸರ್ಕಾರ ಅಧಿಕೃತ ಮಾಧ್ಯಮ ಪ್ರಕರಟಣೆ ಹೊರಡಿಸಿದೆ. ಈ ನಿರ್ಧಾರವು ಪಿಂಚಣಿದಾರರ ದೀರ್ಘ ಮತ್ತು ಸಮರ್ಪಿತ ವೃತ್ತಿಪರ ಸೇವೆಯನ್ನು ಗುರುತಿಸಿ, ಸರ್ಕಾರದ ಸಾಮಾಜಿಕ ಭದ್ರತೆ ಮತ್ತು ಆರ್ಥಿಕ ಯೋಗಕ್ಷೇಮದ ಮೇಲಿನ ನಿರಂತರ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಒತ್ತಿ ಹೇಳಿದೆ.

ನಿರ್ಮಲಾ ಸೀತಾರಾಮನ್ ಟ್ವೀಟ್​

ಸಾರ್ವಜನಿಕ ವಲಯದ ವಿಮಾ ಸಂಸ್ಥೆಗಳ ಉದ್ಯೋಗಿಗಳಿಗೆ ವೇತನ ಪರಿಷ್ಕರಣೆ ಘೋಷಣೆಯಾಗಿದ್ದು, ಈ ಪರಿಷ್ಕರಣೆಯಿಂದ ಒಟ್ಟಾರೆ ವೇತನ ವೆಚ್ಚದಲ್ಲಿ 12.41 ಶೇಕಡಾ ಹೆಚ್ಚಳವಾಗಲಿದೆ. ಇದರ ಭಾಗವಾಗಿ, ಪ್ರಸ್ತುತ ಮೂಲ ವೇತನ ಮತ್ತು ಡಿಯರ್ನೆಸ್ ಅಲೌನ್ಸ್ ಮೇಲೆ 14 ಶೇಕಡಾ ಹೆಚ್ಚಳ ನೀಡಲಾಗುತ್ತದೆ.

ಇದನ್ನೂ ಓದಿ: ಗುಜರಾತ್​ನಲ್ಲಿ ಗೆಲುವು ಹೀಗೆಯೇ ಆರಂಭವಾಗಿತ್ತು, ಮುಂದೆ ಕೇರಳದಲ್ಲೂ ಗೆಲ್ತೀವಿ: ಪ್ರಧಾನಿ ಮೋದಿ

ಈ ವೇತನ ಪರಿಷ್ಕರಣೆಯಿಂದ ಒಟ್ಟು 43,247 ಪಿಎಸ್‌ಜಿಐಸಿ ಉದ್ಯೋಗಿಗಳು ಲಾಭ ಪಡೆಯಲಿದ್ದಾರೆ. ಜೊತೆಗೆ, 01 ಏಪ್ರಿಲ್ 2010ರ ನಂತರ ಸೇವೆಗೆ ಸೇರಿದ ಉದ್ಯೋಗಿಗಳ ಭವಿಷ್ಯ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು, ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್)ಗೆ ನೀಡುವ ಕೊಡುಗೆಯನ್ನು 10 ಶೇಕಡೆಯಿಂದ 14 ಶೇಕಡಕ್ಕೆ ಹೆಚ್ಚಿಸಲು ತೀರ್ಮಾನಿಸಲಾಗಿದೆ. ಈ ವೇತನ ಪರಿಷ್ಕರಣೆಯಿಂದ ಸರ್ಕಾರಕ್ಕೆ ಒಟ್ಟು ರೂ. 8,170.30 ಕೋಟಿ ರೂ ವೆಚ್ಚವಾಗಲಿದೆ. ಇದರಲ್ಲಿ ವೇತನ ಪರಿಷ್ಕರಣೆ ಬಾಕಿ ಹಣ (ಅರಿಯರ್ಸ್) ಪಾವತಿಗೆ ರೂ. 5,822.68 ಕೋಟಿ ಮೀಸಲಿಡಲಾಗಿದೆ. ಜೊತೆಗೆ, ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್)ಗಾಗಿ ರೂ. 250.15 ಕೋಟಿ ರೂ ಹಾಗೂ ಕುಟುಂಬ ಪಿಂಚಣಿಗೆ ರೂ. 2,097.47 ಕೋಟಿ ರೂ ವೆಚ್ಚವಾಗಲಿದೆ.

ನಬಾರ್ಡ್‌ನ ಗ್ರೂಪ್ ‘ಎ’, ‘ಬಿ’ ಮತ್ತು ‘ಸಿ’ ವರ್ಗದ ಎಲ್ಲಾ ಉದ್ಯೋಗಿಗಳಿಗೆ ವೇತನ ಹಾಗೂ ಭತ್ಯೆಗಳಲ್ಲಿ  ಶೇಕಡಾ 20ರಷ್ಟು ಹೆಚ್ಚಳ ನೀಡಲು ತೀರ್ಮಾನಿಸಲಾಗಿದೆ. ಈ ನಿರ್ಧಾರದಿಂದ ಸುಮಾರು 3,800 ಸೇವೆಯಲ್ಲಿರುವ ಹಾಗೂ ನಿವೃತ್ತ ಉದ್ಯೋಗಿಗಳು ಲಾಭ ಪಡೆಯಲಿದ್ದಾರೆ. ಈ ವೇತನ ಪರಿಷ್ಕರಣೆಯಿಂದ ನಬಾರ್ಡ್‌ಗೆ ವರ್ಷಕ್ಕೆ ಹೆಚ್ಚುವರಿ ಸುಮಾರು ರೂ. 170 ಕೋಟಿ ರೂ ವೇತನ ವೆಚ್ಚವಾಗಲಿದೆ. ಅಲ್ಲದೆ, ಬಾಕಿ ಹಣ (ಅರಿಯರ್ಸ್) ಪಾವತಿಗೆ ಒಟ್ಟು ಸುಮಾರು ರೂ. 510 ಕೋಟಿ ವೆಚ್ಚವಾಗಲಿದೆ.

ಪಿಂಚಣಿ ಪರಿಷ್ಕರಣೆ ಹಿನ್ನೆಲೆಯಲ್ಲಿ ಒಮ್ಮೆ ಮಾತ್ರ ನೀಡಲಾಗುವ ಬಾಕಿ ಪಾವತಿಗೆ ರೂ. 50.82 ಕೋಟಿ ರೂ ಖರ್ಚಾಗಲಿದ್ದು, ಪ್ರತೀ ತಿಂಗಳು ಪಿಂಚಣಿ ಪಾವತಿಗಾಗಿ ಹೆಚ್ಚುವರಿಯಾಗಿ ರೂ. 3.55 ಕೋಟಿ ರೂ ವೆಚ್ಚವಾಗಲಿದೆ. ಇದರಿಂದ ನಬಾರ್ಡ್‌ನ 269 ಪಿಂಚಣಿದಾರರು ಹಾಗೂ 457 ಕುಟುಂಬ ಪಿಂಚಣಿದಾರರು ಲಾಭ ಪಡೆಯಲಿದ್ದಾರೆ.

ಇದನ್ನೂ ಓದಿ: ಕ್ಷಮೆ ಕೇಳುವುದಿಲ್ಲ, ಕಾಂಗ್ರೆಸ್​​​​​ ನಿಯಮವನ್ನು ಉಲ್ಲಂಘಿಸಿಲ್ಲ: ಈ ವಿಚಾರದಲ್ಲಿ ಕೇಂದ್ರವನ್ನು ಬೆಂಬಲಿಸುವೆ ಎಂದ ಶಶಿ ತರೂರ್

ಇನ್ನು ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ) ನಿವೃತ್ತ ಉದ್ಯೋಗಿಗಳಿಗೆ ಪಿಂಚಣಿ ಹಾಗೂ ಕುಟುಂಬ ಪಿಂಚಣಿ ಪರಿಷ್ಕರಣೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಹಿರಿಯ ನಾಗರಿಕರು ಹಾಗೂ ಅವಲಂಬಿತರಿಗಾಗಿ ನ್ಯಾಯಸಮ್ಮತ, ಸಮರ್ಪಕ ಮತ್ತು ದೀರ್ಘಕಾಲಿಕ ನಿವೃತ್ತಿ ಭದ್ರತಾ ಸೌಲಭ್ಯಗಳನ್ನು ಒದಗಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ.

ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ಸುಮಾರು 46,322 ಉದ್ಯೋಗಿಗಳು, 23,570 ಪಿಂಚಣಿದಾರರು ಹಾಗೂ 23,260 ಕುಟುಂಬ ಪಿಂಚಣಿದಾರರು ಲಾಭ ಪಡೆಯಲಿದ್ದಾರೆ. ಈ ನಿರ್ಧಾರವು ಪಿಎಸ್‌ಜಿಐಸಿ ಮತ್ತು ನಬಾರ್ಡ್ ಸಂಸ್ಥೆಗಳ ಉದ್ಯೋಗಿಗಳು, ಆರ್‌ಬಿಐ ಹಾಗೂ ನಬಾರ್ಡ್‌ನ ಪಿಂಚಣಿದಾರರು ಮತ್ತು ಕುಟುಂಬ ಪಿಂಚಣಿದಾರರಿಗೆ ಮಹತ್ವದ ಪರಿಹಾರವನ್ನು ಒದಗಿಸಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ