AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ಲಕ್ಷ ಕೋಟಿ ರೂ. ಮೌಲ್ಯದ ಆಸ್ತಿ ಮಾರಾಟಕ್ಕೆ ನಿರ್ಧಾರ; ವಿತ್ತೀಯ ಕೊರತೆ ನೀಗಿಸಲು ಕೇಂದ್ರ ಚಿಂತನೆ

ಮೂಲಸೌಕರ್ಯ ಯೋಜನೆಗಳ ಮಾರಾಟಕ್ಕೆ ಕೇಂದ್ರ ನಿರ್ಧಾರ ಮಾಡಿದ್ದು ಈ ಬಗ್ಗೆ ಸೋಮವಾರ (ಆಗಸ್ಟ್ 23) ದೆಹಲಿಯಲ್ಲಿ ಕೇಂದ್ರದ ಹಣಕಾಸು ಇಲಾಖೆ ಸುದ್ದಿಗೋಷ್ಠಿಯಲ್ಲಿ ನೀತಿ ಆಯೋಗದ ಸಿಇಒ ಅಮಿತಾಭ್ ಕಾಂತ್ ಹೇಳಿಕೆ ನೀಡಿದ್ದಾರೆ.

6 ಲಕ್ಷ ಕೋಟಿ ರೂ. ಮೌಲ್ಯದ ಆಸ್ತಿ ಮಾರಾಟಕ್ಕೆ ನಿರ್ಧಾರ; ವಿತ್ತೀಯ ಕೊರತೆ ನೀಗಿಸಲು ಕೇಂದ್ರ ಚಿಂತನೆ
ನಿರ್ಮಲಾ ಸೀತಾರಾಮನ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Aug 23, 2021 | 6:11 PM

Share

ದೆಹಲಿ: 6 ಲಕ್ಷ ಕೋಟಿ ರೂಪಾಯಿ ಮೌಲ್ಯದ ಆಸ್ತಿ ಮಾರಾಟಕ್ಕೆ ಕೇಂದ್ರ ಸರ್ಕಾರ (Central Government) ನಿರ್ಧಾರ ಮಾಡಿದೆ. ವಿತ್ತೀಯ ಕೊರತೆ ನೀಗಿಸಲು ಮಾರಾಟಕ್ಕೆ ಕೇಂದ್ರ ಈ ಚಿಂತನೆ ನಡೆಸಿದೆ. ಮೂಲಸೌಕರ್ಯ ಯೋಜನೆಗಳ ಮಾರಾಟಕ್ಕೆ ಕೇಂದ್ರ ನಿರ್ಧಾರ ಮಾಡಿದ್ದು ಈ ಬಗ್ಗೆ ಸೋಮವಾರ (ಆಗಸ್ಟ್ 23) ದೆಹಲಿಯಲ್ಲಿ ಕೇಂದ್ರದ ಹಣಕಾಸು ಇಲಾಖೆ (Finance Ministry) ಸುದ್ದಿಗೋಷ್ಠಿಯಲ್ಲಿ ನೀತಿ ಆಯೋಗದ ಸಿಇಒ ಅಮಿತಾಭ್ ಕಾಂತ್ ಹೇಳಿಕೆ ನೀಡಿದ್ದಾರೆ.

ಈ ಆಸ್ತಿಯ ಮಾಲೀಕತ್ವ ಸರ್ಕಾರದ ಬಳಿಯೇ ಇರುತ್ತದೆ. ಅವಧಿ ಮುಗಿದ ಬಳಿಕ ಸರ್ಕಾರಕ್ಕೆ ಆಸ್ತಿ ಹಿಂತಿರುಗಿಸಬೇಕು. ಬಿಡ್ಡಿಂಗ್ ಮೂಲಕ ಆಸ್ತಿಗಳ ಮಾರಾಟ ಮಾಡಲಾಗುವುದು. ಇದು ಆಪರೇಟ್ ಮೇಂಟೇನ್​​ ಅಂಡ್ ಟ್ರಾನ್ಸ್​​ಫರ್ ಸ್ಕೀಮ್ ಎಂದು ಯೋಜನೆಯ ಬಗ್ಗೆ ಅಮಿತಾಭ್ ಕಾಂತ್ ಮಾಹಿತಿ ನೀಡಿ್ದ್ದಾರೆ. 2022- 2025 ರ ಅವಧಿಯಲ್ಲಿ ಆಸ್ತಿಗಳ ಮಾರಾಟ ಮಾಡಲಾಗುವ ಬಗ್ಗೆ ತಿಳಿಸಿದ್ದಾರೆ.

ನ್ಯಾಷನಲ್ ಮಾನಿಟೈಸೇಷನ್ ಪೈಪ್​​ಲೈನ್ ಪ್ಲ್ಯಾನ್​ನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಬಿಡುಗಡೆ ಮಾಡಿದ್ದಾರೆ. ಬಳಿಕ, ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಮಾತನಾಡಿದ್ದಾರೆ. ಇದರಲ್ಲಿ ಖಾಸಗಿ ವಲಯದ ಭಾಗವಹಿಸುವಿಕೆಗೆ ಅವಕಾಶ ನೀಡಲಾಗಿದೆ. ಆಸ್ತಿ ನಗದೀಕರಣದ ಮೂಲಕ ಆಸ್ತಿ ಮಾರಾಟ ಮಾಡುತ್ತಿಲ್ಲ. ಅಂತಿಮವಾಗಿ ಆಸ್ತಿಯನ್ನು ಸರ್ಕಾರಕ್ಕೆ ವಾಪಸ್ ನೀಡಬೇಕು. ರಾಜ್ಯಗಳು ಕೂಡ ಇದರಲ್ಲಿ ಭಾಗವಹಿಸುತ್ತವೆ ಎಂದು ಅವರು ಹೇಳಿದ್ದಾರೆ.

ನ್ಯಾಷನಲ್ ಮಾನಿಟೈಸೇಷನ್ ಪೈಪ್​​ಲೈನ್ ಪ್ಲ್ಯಾನ್ ಬಿಡುಗಡೆ ಮಾಡಲಾಗಿದೆ. ಇದರ ಮೂಲಕ ಸರ್ಕಾರಿ- ಖಾಸಗಿ ವಲಯಗಳು ಭಾಗಿ ಆಗಬಹುದು. ಖಾಸಗಿ ವಲಯ ಭಾಗಿ ಹಿನ್ನೆಲೆ ಹಣವನ್ನು ಹೊಸ ಮೂಲಸೌಕರ್ಯಕ್ಕೆ ಹೂಡಿಕೆ ಮಾಡಲಾಗುತ್ತದೆ. ಆಸ್ತಿಯನ್ನು ಮಾರಾಟ ಮಾಡುತ್ತಿಲ್ಲ. ಆಸ್ತಿಯ ಮಾಲೀಕತ್ವ ಸರ್ಕಾರದ ಬಳಿಯೇ ಇರುತ್ತದೆ. ಕಡ್ಡಾಯವಾಗಿ ಆಸ್ತಿಯನ್ನು ಸರ್ಕಾರಕ್ಕೆ ವಾಪಸ್ ನೀಡಬೇಕು. ಬಳಸಿಕೊಳ್ಳದಿರುವ ಆಸ್ತಿ ನಗದೀಕರಣದ ಮೂಲಕ ಬಳಕೆ ಮಾಡುತ್ತೇವೆ. ರಾಜ್ಯ ಸರ್ಕಾರಗಳಿಗೆ 12 ಸಾವಿರ ಕೋಟಿ ರೂಪಾಯಿ ಬಡ್ಡಿ ರಹಿತವಾಗಿ ನೀಡಿದ್ದೇವೆ. 50 ವರ್ಷಗಳಿಗೆ ಹಣವನ್ನು ಬಡ್ಡಿ ರಹಿತವಾಗಿ ನೀಡಿದ್ದೇವೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಹೇಳಿಕೆ ನೀಡಿದ್ದಾರೆ.

ಕೇಂದ್ರದ 11 ಇಲಾಖೆಗಳ ಮೂಲಸೌಕರ್ಯ ಯೋಜನೆ ಮಾರಾಟಕ್ಕೆ ನಿರ್ಧಾರ ಮಾಡಲಾಗಿದೆ ಎಂದು ಹೇಳಲಾಗಿತ್ತು. ರಸ್ತೆ, ಹೆದ್ದಾರಿ ಮಾರಾಟದಿಂದ 1.6 ಲಕ್ಷ ಕೋಟಿ ರೂಪಾಯಿ, ರೈಲ್ವೆ ಆಸ್ತಿ ಮಾರಾಟದಿಂದ 1.5 ಲಕ್ಷ ಕೋಟಿ ರೂಪಾಯಿ, ಇಂಧನ ಕ್ಷೇತ್ರದ ಆಸ್ತಿ ಮಾರಾಟದಿಂದ 1 ಲಕ್ಷ ಕೋಟಿ ರೂಪಾಯಿ ಹಾಗೂ ಗ್ಯಾಸ್ ಪೈಪ್ ಲೈನ್ ಮಾರಾಟದಿಂದ 590 ಬಿಲಿಯನ್ ಸಂಗ್ರಹದ ಗುರಿ ಹೊಂದಲಾಗಿದೆ ಎಂದು ಮಾಹಿತಿ ಹೇಳಲಾಗಿತ್ತು.

ಇದನ್ನೂ ಓದಿ: Petrol-Diesel price: ಮನಮೋಹನ್​ ಸಿಂಗ್​ ಸರ್ಕಾರ ತಪ್ಪಿಗೆ ಪೆಟ್ರೋಲ್​ಗೆ ನಾವು ಬೆಲೆ ತೆರುತ್ತಿದ್ದೇವೆ ಎಂದ ನಿರ್ಮಲಾ

ಹಣಕಾಸು ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗುವ ಸಾಮಾನ್ಯ ವಿಮಾ ಮಸೂದೆಗೆ ರಾಜ್ಯಸಭೆ ಅನುಮೋದನೆ

Published On - 5:28 pm, Mon, 23 August 21

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ