AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ಲಕ್ಷ ಕೋಟಿ ರೂ. ಮೌಲ್ಯದ ಆಸ್ತಿ ಮಾರಾಟಕ್ಕೆ ನಿರ್ಧಾರ; ವಿತ್ತೀಯ ಕೊರತೆ ನೀಗಿಸಲು ಕೇಂದ್ರ ಚಿಂತನೆ

ಮೂಲಸೌಕರ್ಯ ಯೋಜನೆಗಳ ಮಾರಾಟಕ್ಕೆ ಕೇಂದ್ರ ನಿರ್ಧಾರ ಮಾಡಿದ್ದು ಈ ಬಗ್ಗೆ ಸೋಮವಾರ (ಆಗಸ್ಟ್ 23) ದೆಹಲಿಯಲ್ಲಿ ಕೇಂದ್ರದ ಹಣಕಾಸು ಇಲಾಖೆ ಸುದ್ದಿಗೋಷ್ಠಿಯಲ್ಲಿ ನೀತಿ ಆಯೋಗದ ಸಿಇಒ ಅಮಿತಾಭ್ ಕಾಂತ್ ಹೇಳಿಕೆ ನೀಡಿದ್ದಾರೆ.

6 ಲಕ್ಷ ಕೋಟಿ ರೂ. ಮೌಲ್ಯದ ಆಸ್ತಿ ಮಾರಾಟಕ್ಕೆ ನಿರ್ಧಾರ; ವಿತ್ತೀಯ ಕೊರತೆ ನೀಗಿಸಲು ಕೇಂದ್ರ ಚಿಂತನೆ
ನಿರ್ಮಲಾ ಸೀತಾರಾಮನ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Aug 23, 2021 | 6:11 PM

Share

ದೆಹಲಿ: 6 ಲಕ್ಷ ಕೋಟಿ ರೂಪಾಯಿ ಮೌಲ್ಯದ ಆಸ್ತಿ ಮಾರಾಟಕ್ಕೆ ಕೇಂದ್ರ ಸರ್ಕಾರ (Central Government) ನಿರ್ಧಾರ ಮಾಡಿದೆ. ವಿತ್ತೀಯ ಕೊರತೆ ನೀಗಿಸಲು ಮಾರಾಟಕ್ಕೆ ಕೇಂದ್ರ ಈ ಚಿಂತನೆ ನಡೆಸಿದೆ. ಮೂಲಸೌಕರ್ಯ ಯೋಜನೆಗಳ ಮಾರಾಟಕ್ಕೆ ಕೇಂದ್ರ ನಿರ್ಧಾರ ಮಾಡಿದ್ದು ಈ ಬಗ್ಗೆ ಸೋಮವಾರ (ಆಗಸ್ಟ್ 23) ದೆಹಲಿಯಲ್ಲಿ ಕೇಂದ್ರದ ಹಣಕಾಸು ಇಲಾಖೆ (Finance Ministry) ಸುದ್ದಿಗೋಷ್ಠಿಯಲ್ಲಿ ನೀತಿ ಆಯೋಗದ ಸಿಇಒ ಅಮಿತಾಭ್ ಕಾಂತ್ ಹೇಳಿಕೆ ನೀಡಿದ್ದಾರೆ.

ಈ ಆಸ್ತಿಯ ಮಾಲೀಕತ್ವ ಸರ್ಕಾರದ ಬಳಿಯೇ ಇರುತ್ತದೆ. ಅವಧಿ ಮುಗಿದ ಬಳಿಕ ಸರ್ಕಾರಕ್ಕೆ ಆಸ್ತಿ ಹಿಂತಿರುಗಿಸಬೇಕು. ಬಿಡ್ಡಿಂಗ್ ಮೂಲಕ ಆಸ್ತಿಗಳ ಮಾರಾಟ ಮಾಡಲಾಗುವುದು. ಇದು ಆಪರೇಟ್ ಮೇಂಟೇನ್​​ ಅಂಡ್ ಟ್ರಾನ್ಸ್​​ಫರ್ ಸ್ಕೀಮ್ ಎಂದು ಯೋಜನೆಯ ಬಗ್ಗೆ ಅಮಿತಾಭ್ ಕಾಂತ್ ಮಾಹಿತಿ ನೀಡಿ್ದ್ದಾರೆ. 2022- 2025 ರ ಅವಧಿಯಲ್ಲಿ ಆಸ್ತಿಗಳ ಮಾರಾಟ ಮಾಡಲಾಗುವ ಬಗ್ಗೆ ತಿಳಿಸಿದ್ದಾರೆ.

ನ್ಯಾಷನಲ್ ಮಾನಿಟೈಸೇಷನ್ ಪೈಪ್​​ಲೈನ್ ಪ್ಲ್ಯಾನ್​ನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಬಿಡುಗಡೆ ಮಾಡಿದ್ದಾರೆ. ಬಳಿಕ, ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಮಾತನಾಡಿದ್ದಾರೆ. ಇದರಲ್ಲಿ ಖಾಸಗಿ ವಲಯದ ಭಾಗವಹಿಸುವಿಕೆಗೆ ಅವಕಾಶ ನೀಡಲಾಗಿದೆ. ಆಸ್ತಿ ನಗದೀಕರಣದ ಮೂಲಕ ಆಸ್ತಿ ಮಾರಾಟ ಮಾಡುತ್ತಿಲ್ಲ. ಅಂತಿಮವಾಗಿ ಆಸ್ತಿಯನ್ನು ಸರ್ಕಾರಕ್ಕೆ ವಾಪಸ್ ನೀಡಬೇಕು. ರಾಜ್ಯಗಳು ಕೂಡ ಇದರಲ್ಲಿ ಭಾಗವಹಿಸುತ್ತವೆ ಎಂದು ಅವರು ಹೇಳಿದ್ದಾರೆ.

ನ್ಯಾಷನಲ್ ಮಾನಿಟೈಸೇಷನ್ ಪೈಪ್​​ಲೈನ್ ಪ್ಲ್ಯಾನ್ ಬಿಡುಗಡೆ ಮಾಡಲಾಗಿದೆ. ಇದರ ಮೂಲಕ ಸರ್ಕಾರಿ- ಖಾಸಗಿ ವಲಯಗಳು ಭಾಗಿ ಆಗಬಹುದು. ಖಾಸಗಿ ವಲಯ ಭಾಗಿ ಹಿನ್ನೆಲೆ ಹಣವನ್ನು ಹೊಸ ಮೂಲಸೌಕರ್ಯಕ್ಕೆ ಹೂಡಿಕೆ ಮಾಡಲಾಗುತ್ತದೆ. ಆಸ್ತಿಯನ್ನು ಮಾರಾಟ ಮಾಡುತ್ತಿಲ್ಲ. ಆಸ್ತಿಯ ಮಾಲೀಕತ್ವ ಸರ್ಕಾರದ ಬಳಿಯೇ ಇರುತ್ತದೆ. ಕಡ್ಡಾಯವಾಗಿ ಆಸ್ತಿಯನ್ನು ಸರ್ಕಾರಕ್ಕೆ ವಾಪಸ್ ನೀಡಬೇಕು. ಬಳಸಿಕೊಳ್ಳದಿರುವ ಆಸ್ತಿ ನಗದೀಕರಣದ ಮೂಲಕ ಬಳಕೆ ಮಾಡುತ್ತೇವೆ. ರಾಜ್ಯ ಸರ್ಕಾರಗಳಿಗೆ 12 ಸಾವಿರ ಕೋಟಿ ರೂಪಾಯಿ ಬಡ್ಡಿ ರಹಿತವಾಗಿ ನೀಡಿದ್ದೇವೆ. 50 ವರ್ಷಗಳಿಗೆ ಹಣವನ್ನು ಬಡ್ಡಿ ರಹಿತವಾಗಿ ನೀಡಿದ್ದೇವೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಹೇಳಿಕೆ ನೀಡಿದ್ದಾರೆ.

ಕೇಂದ್ರದ 11 ಇಲಾಖೆಗಳ ಮೂಲಸೌಕರ್ಯ ಯೋಜನೆ ಮಾರಾಟಕ್ಕೆ ನಿರ್ಧಾರ ಮಾಡಲಾಗಿದೆ ಎಂದು ಹೇಳಲಾಗಿತ್ತು. ರಸ್ತೆ, ಹೆದ್ದಾರಿ ಮಾರಾಟದಿಂದ 1.6 ಲಕ್ಷ ಕೋಟಿ ರೂಪಾಯಿ, ರೈಲ್ವೆ ಆಸ್ತಿ ಮಾರಾಟದಿಂದ 1.5 ಲಕ್ಷ ಕೋಟಿ ರೂಪಾಯಿ, ಇಂಧನ ಕ್ಷೇತ್ರದ ಆಸ್ತಿ ಮಾರಾಟದಿಂದ 1 ಲಕ್ಷ ಕೋಟಿ ರೂಪಾಯಿ ಹಾಗೂ ಗ್ಯಾಸ್ ಪೈಪ್ ಲೈನ್ ಮಾರಾಟದಿಂದ 590 ಬಿಲಿಯನ್ ಸಂಗ್ರಹದ ಗುರಿ ಹೊಂದಲಾಗಿದೆ ಎಂದು ಮಾಹಿತಿ ಹೇಳಲಾಗಿತ್ತು.

ಇದನ್ನೂ ಓದಿ: Petrol-Diesel price: ಮನಮೋಹನ್​ ಸಿಂಗ್​ ಸರ್ಕಾರ ತಪ್ಪಿಗೆ ಪೆಟ್ರೋಲ್​ಗೆ ನಾವು ಬೆಲೆ ತೆರುತ್ತಿದ್ದೇವೆ ಎಂದ ನಿರ್ಮಲಾ

ಹಣಕಾಸು ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗುವ ಸಾಮಾನ್ಯ ವಿಮಾ ಮಸೂದೆಗೆ ರಾಜ್ಯಸಭೆ ಅನುಮೋದನೆ

Published On - 5:28 pm, Mon, 23 August 21

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ