AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವ್ಯಾಕ್ಸಿನ್ ಲಸಿಕೆಗೆ ವಿಶ್ವ ಆರೋಗ್ಯ ಸಂಸ್ಥೆಯಿಂದ ಒಪ್ಪಿಗೆ ಸಿಗುವಂತೆ ಕೇಂದ್ರ ಸರ್ಕಾರವೂ ಶ್ರಮಿಸುತ್ತಿದೆ: ವಿದೇಶಾಂಗ ಇಲಾಖೆ

ಭಾರತೀಯ ವಿದೇಶಾಂಗ ಇಲಾಖೆ, ಭಾರತ್ ಬಯೋಟೆಕ್​ನ ಕೊರೊನಾ ಲಸಿಕೆಗೆ ವಿಶ್ವ ಆರೋಗ್ಯ ಸಂಸ್ಥೆಯಿಂದ ಅನುಮೋದನೆ ಸಿಗುವಂತೆ ಸಮೀಪದಿಂದ ಕೆಲಸ ಮಾಡುತ್ತಿದೆ. ಸದ್ಯ, ಲಸಿಕೆಗೆ ಅನುಮೋದನೆ ಸಿಗದೇ ಇರುವ ಕಾರಣ, ವಿದೇಶಕ್ಕೆ ಪ್ರಯಾಣ ಬೆಳೆಸುವ ಹಲವರಿಗೆ ಸಮಸ್ಯೆ ಉಂಟಾಗಿದೆ.

ಕೊವ್ಯಾಕ್ಸಿನ್ ಲಸಿಕೆಗೆ ವಿಶ್ವ ಆರೋಗ್ಯ ಸಂಸ್ಥೆಯಿಂದ ಒಪ್ಪಿಗೆ ಸಿಗುವಂತೆ ಕೇಂದ್ರ ಸರ್ಕಾರವೂ ಶ್ರಮಿಸುತ್ತಿದೆ: ವಿದೇಶಾಂಗ ಇಲಾಖೆ
ಕೊರೊನಾ ಲಸಿಕೆ
TV9 Web
| Updated By: ganapathi bhat|

Updated on: Jun 25, 2021 | 4:18 PM

Share

ದೆಹಲಿ: ಕೊರೊನಾ ವಿರುದ್ಧದ ಕೊವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಪೂರ್ಣ ಪ್ರಮಾಣದ ಒಪ್ಪಿಗೆ ಸಿಗುವ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯ ಜೊತೆಗೆ ಭಾರತ ಸರ್ಕಾರ ಸೂಕ್ತ ಕೆಲಸಗಳನ್ನು ಮಾಡುತ್ತಿದೆ, ಪ್ರಕ್ರಿಯೆಯನ್ನು ಸಮೀಪದಿಂದ ಗಮನಿಸುತ್ತಿದೆ ಎಂದೂ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಗುರುವಾರ ತಿಳಿಸಿದ್ದಾರೆ. ಭಾರತ್ ಬಯೋಟೆಕ್ ನಡೆಸುತ್ತಿರುವ ಯತ್ನಗಳನ್ನು ನಾವು ಸಮೀಪದಿಂದ ಗಮನಿಸುತ್ತಿದ್ದೇವೆ ಎಂದು ಬಾಗ್ಚಿ ಹೇಳಿರುವುದನ್ನು ಎಎನ್​ಐ ವರದಿ ಮಾಡಿದೆ.

ಕೊವ್ಯಾಕ್ಸಿನ್ ಲಸಿಕೆಯ ಉತ್ಪಾದಕ ಕಂಪೆನಿ ಭಾರತ್ ಬಯೋಟೆಕ್, ಯುನೈಟೆಡ್ ನೇಷನ್ಸ್​ನ ವಿಶ್ವ ಆರೋಗ್ಯ ಸಂಸ್ಥೆಯಿಂದ ಲಸಿಕೆಗೆ ಒಪ್ಪಿಗೆ ಸಿಗುವ ಬಗ್ಗೆ ಭರವಸೆ ವ್ಯಕ್ತಪಡಿಸಿತ್ತು. ಜುಲೈನಿಂದ ಸಪ್ಟೆಂಬರ್ ವೇಳೆಯಲ್ಲಿ ಲಸಿಕೆಗೆ ವಿಶ್ವ ಆರೋಗ್ಯ ಸಂಸ್ಥೆಯಿಂದ ಅನುಮೋದನೆ ಸಿಗುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಕೊವ್ಯಾಕ್ಸಿನ್ ಲಸಿಕೆ ತಯಾರಕ ಸಂಸ್ಥೆ, ಅದಕ್ಕೆ ಬೇಕಾದ ಶೇಕಡಾ 90ರಷ್ಟು ಸೂಕ್ತ ದಾಖಲೆಗಳನ್ನು ಈಗಾಗಲೇ ವಿಶ್ವ ಆರೋಗ್ಯ ಸಂಸ್ಥೆಗೆ ನೀಡಲಾಗಿದೆ. ಉಳಿದ ಕೆಲವು ದಾಖಲೆಗಳನ್ನು ಜುಲೈನಲ್ಲಿ ಕಳುಹಿಸಿಕೊಡಲಾಗುವುದು ಎಂದು ಭಾರತ್ ಬಯೋಟೆಕ್ ತಿಳಿಸಿದೆ. ಈ ಬಗ್ಗೆ ಯುನೈಟೆಡ್ ನೇಷನ್ಸ್ ಸಂಸ್ಥೆಯೊಂದಿಗೆ ಭಾರತ್ ಬಯೋಟೆಕ್ ಜುಲೈ 23ರಂದು ಪೂರ್ವ ಸಭೆಯನ್ನು ಕೂಡ ನಡೆಸಿದೆ.

ಭಾರತೀಯ ವಿದೇಶಾಂಗ ಇಲಾಖೆ, ಭಾರತ್ ಬಯೋಟೆಕ್​ನ ಕೊರೊನಾ ಲಸಿಕೆಗೆ ವಿಶ್ವ ಆರೋಗ್ಯ ಸಂಸ್ಥೆಯಿಂದ ಅನುಮೋದನೆ ಸಿಗುವಂತೆ ಸಮೀಪದಿಂದ ಕೆಲಸ ಮಾಡುತ್ತಿದೆ. ಸದ್ಯ, ಲಸಿಕೆಗೆ ಅನುಮೋದನೆ ಸಿಗದೇ ಇರುವ ಕಾರಣ, ವಿದೇಶಕ್ಕೆ ಪ್ರಯಾಣ ಬೆಳೆಸುವ ಹಲವರಿಗೆ ಸಮಸ್ಯೆ ಉಂಟಾಗಿದೆ.

ಭಾರತದಿಂದ ಬಹುದೊಡ್ಡ ಸಂಖ್ಯೆಯ ವಿದ್ಯಾರ್ಥಿಗಳು ಪ್ರತಿ ವರ್ಷ ಕಲಿಕೆಗೆಂದು ವಿದೇಶಕ್ಕೆ ಪ್ರಯಾಣಿಸುತ್ತಾರೆ. ಅದರಲ್ಲಿ ಹಲವು ವಿದ್ಯಾರ್ಥಿಗಳು ಕೊವ್ಯಾಕ್ಸಿನ್ ಲಸಿಕೆ ಪಡೆದುಕೊಂಡಿದ್ದಾರೆ. ಲಸಿಕೆ ಹಾಕಿಸಿಕೊಂಡ ಬಳಿಕ, ಅವರಿಗೆ ತಾವು ಹಾಕಿಸಿದ ಲಸಿಕೆ ವಿದೇಶದಲ್ಲಿ ಒಪ್ಪಿತವಲ್ಲ ಎಂದು ತಿಳಿದುಬಂದಿದೆ. ಹೀಗಾಗಿ ಅವರಿಗೆ ತೊಂದರೆ ಉಂಟಾಗಿದೆ. ಆದಷ್ಟು ಬೇಗ ಈ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಪಶ್ಚಿಮ ಬಂಗಾಳ ಮಮತಾ ಬ್ಯಾನರ್ಜಿ ಪ್ರಧಾನಿ ನರೇಂದ್ರ ಮೋದಿಯನ್ನು ಕೇಳಿಕೊಂಡಿದ್ದಾರೆ.

ಇದನ್ನೂ ಓದಿ: 1.89 ಕೋಟಿ ಡೋಸ್ ಬಳಕೆಯಾಗದ ಕೊವಿಡ್ ಲಸಿಕೆ ರಾಜ್ಯಗಳಲ್ಲಿವೆ: ಕೇಂದ್ರ ಆರೋಗ್ಯ ಇಲಾಖೆ

ಕೊವ್ಯಾಕ್ಸಿನ್ ಲಸಿಕೆ ಬಳಕೆಗೆ ಸಿಕ್ಕಿಲ್ಲ ಪೂರ್ಣ ಪ್ರಮಾಣದ ಒಪ್ಪಿಗೆ; ಇನ್ನೂ ಬಾಕಿ ಇದೆ 3ನೇ ಹಂತದ ಪ್ರಯೋಗ! ಮುಂದೇನು?

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು