AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವ್ಯಾಕ್ಸಿನ್ ಲಸಿಕೆಗೆ ವಿಶ್ವ ಆರೋಗ್ಯ ಸಂಸ್ಥೆಯಿಂದ ಒಪ್ಪಿಗೆ ಸಿಗುವಂತೆ ಕೇಂದ್ರ ಸರ್ಕಾರವೂ ಶ್ರಮಿಸುತ್ತಿದೆ: ವಿದೇಶಾಂಗ ಇಲಾಖೆ

ಭಾರತೀಯ ವಿದೇಶಾಂಗ ಇಲಾಖೆ, ಭಾರತ್ ಬಯೋಟೆಕ್​ನ ಕೊರೊನಾ ಲಸಿಕೆಗೆ ವಿಶ್ವ ಆರೋಗ್ಯ ಸಂಸ್ಥೆಯಿಂದ ಅನುಮೋದನೆ ಸಿಗುವಂತೆ ಸಮೀಪದಿಂದ ಕೆಲಸ ಮಾಡುತ್ತಿದೆ. ಸದ್ಯ, ಲಸಿಕೆಗೆ ಅನುಮೋದನೆ ಸಿಗದೇ ಇರುವ ಕಾರಣ, ವಿದೇಶಕ್ಕೆ ಪ್ರಯಾಣ ಬೆಳೆಸುವ ಹಲವರಿಗೆ ಸಮಸ್ಯೆ ಉಂಟಾಗಿದೆ.

ಕೊವ್ಯಾಕ್ಸಿನ್ ಲಸಿಕೆಗೆ ವಿಶ್ವ ಆರೋಗ್ಯ ಸಂಸ್ಥೆಯಿಂದ ಒಪ್ಪಿಗೆ ಸಿಗುವಂತೆ ಕೇಂದ್ರ ಸರ್ಕಾರವೂ ಶ್ರಮಿಸುತ್ತಿದೆ: ವಿದೇಶಾಂಗ ಇಲಾಖೆ
ಕೊರೊನಾ ಲಸಿಕೆ
TV9 Web
| Edited By: |

Updated on: Jun 25, 2021 | 4:18 PM

Share

ದೆಹಲಿ: ಕೊರೊನಾ ವಿರುದ್ಧದ ಕೊವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಪೂರ್ಣ ಪ್ರಮಾಣದ ಒಪ್ಪಿಗೆ ಸಿಗುವ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯ ಜೊತೆಗೆ ಭಾರತ ಸರ್ಕಾರ ಸೂಕ್ತ ಕೆಲಸಗಳನ್ನು ಮಾಡುತ್ತಿದೆ, ಪ್ರಕ್ರಿಯೆಯನ್ನು ಸಮೀಪದಿಂದ ಗಮನಿಸುತ್ತಿದೆ ಎಂದೂ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಗುರುವಾರ ತಿಳಿಸಿದ್ದಾರೆ. ಭಾರತ್ ಬಯೋಟೆಕ್ ನಡೆಸುತ್ತಿರುವ ಯತ್ನಗಳನ್ನು ನಾವು ಸಮೀಪದಿಂದ ಗಮನಿಸುತ್ತಿದ್ದೇವೆ ಎಂದು ಬಾಗ್ಚಿ ಹೇಳಿರುವುದನ್ನು ಎಎನ್​ಐ ವರದಿ ಮಾಡಿದೆ.

ಕೊವ್ಯಾಕ್ಸಿನ್ ಲಸಿಕೆಯ ಉತ್ಪಾದಕ ಕಂಪೆನಿ ಭಾರತ್ ಬಯೋಟೆಕ್, ಯುನೈಟೆಡ್ ನೇಷನ್ಸ್​ನ ವಿಶ್ವ ಆರೋಗ್ಯ ಸಂಸ್ಥೆಯಿಂದ ಲಸಿಕೆಗೆ ಒಪ್ಪಿಗೆ ಸಿಗುವ ಬಗ್ಗೆ ಭರವಸೆ ವ್ಯಕ್ತಪಡಿಸಿತ್ತು. ಜುಲೈನಿಂದ ಸಪ್ಟೆಂಬರ್ ವೇಳೆಯಲ್ಲಿ ಲಸಿಕೆಗೆ ವಿಶ್ವ ಆರೋಗ್ಯ ಸಂಸ್ಥೆಯಿಂದ ಅನುಮೋದನೆ ಸಿಗುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಕೊವ್ಯಾಕ್ಸಿನ್ ಲಸಿಕೆ ತಯಾರಕ ಸಂಸ್ಥೆ, ಅದಕ್ಕೆ ಬೇಕಾದ ಶೇಕಡಾ 90ರಷ್ಟು ಸೂಕ್ತ ದಾಖಲೆಗಳನ್ನು ಈಗಾಗಲೇ ವಿಶ್ವ ಆರೋಗ್ಯ ಸಂಸ್ಥೆಗೆ ನೀಡಲಾಗಿದೆ. ಉಳಿದ ಕೆಲವು ದಾಖಲೆಗಳನ್ನು ಜುಲೈನಲ್ಲಿ ಕಳುಹಿಸಿಕೊಡಲಾಗುವುದು ಎಂದು ಭಾರತ್ ಬಯೋಟೆಕ್ ತಿಳಿಸಿದೆ. ಈ ಬಗ್ಗೆ ಯುನೈಟೆಡ್ ನೇಷನ್ಸ್ ಸಂಸ್ಥೆಯೊಂದಿಗೆ ಭಾರತ್ ಬಯೋಟೆಕ್ ಜುಲೈ 23ರಂದು ಪೂರ್ವ ಸಭೆಯನ್ನು ಕೂಡ ನಡೆಸಿದೆ.

ಭಾರತೀಯ ವಿದೇಶಾಂಗ ಇಲಾಖೆ, ಭಾರತ್ ಬಯೋಟೆಕ್​ನ ಕೊರೊನಾ ಲಸಿಕೆಗೆ ವಿಶ್ವ ಆರೋಗ್ಯ ಸಂಸ್ಥೆಯಿಂದ ಅನುಮೋದನೆ ಸಿಗುವಂತೆ ಸಮೀಪದಿಂದ ಕೆಲಸ ಮಾಡುತ್ತಿದೆ. ಸದ್ಯ, ಲಸಿಕೆಗೆ ಅನುಮೋದನೆ ಸಿಗದೇ ಇರುವ ಕಾರಣ, ವಿದೇಶಕ್ಕೆ ಪ್ರಯಾಣ ಬೆಳೆಸುವ ಹಲವರಿಗೆ ಸಮಸ್ಯೆ ಉಂಟಾಗಿದೆ.

ಭಾರತದಿಂದ ಬಹುದೊಡ್ಡ ಸಂಖ್ಯೆಯ ವಿದ್ಯಾರ್ಥಿಗಳು ಪ್ರತಿ ವರ್ಷ ಕಲಿಕೆಗೆಂದು ವಿದೇಶಕ್ಕೆ ಪ್ರಯಾಣಿಸುತ್ತಾರೆ. ಅದರಲ್ಲಿ ಹಲವು ವಿದ್ಯಾರ್ಥಿಗಳು ಕೊವ್ಯಾಕ್ಸಿನ್ ಲಸಿಕೆ ಪಡೆದುಕೊಂಡಿದ್ದಾರೆ. ಲಸಿಕೆ ಹಾಕಿಸಿಕೊಂಡ ಬಳಿಕ, ಅವರಿಗೆ ತಾವು ಹಾಕಿಸಿದ ಲಸಿಕೆ ವಿದೇಶದಲ್ಲಿ ಒಪ್ಪಿತವಲ್ಲ ಎಂದು ತಿಳಿದುಬಂದಿದೆ. ಹೀಗಾಗಿ ಅವರಿಗೆ ತೊಂದರೆ ಉಂಟಾಗಿದೆ. ಆದಷ್ಟು ಬೇಗ ಈ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಪಶ್ಚಿಮ ಬಂಗಾಳ ಮಮತಾ ಬ್ಯಾನರ್ಜಿ ಪ್ರಧಾನಿ ನರೇಂದ್ರ ಮೋದಿಯನ್ನು ಕೇಳಿಕೊಂಡಿದ್ದಾರೆ.

ಇದನ್ನೂ ಓದಿ: 1.89 ಕೋಟಿ ಡೋಸ್ ಬಳಕೆಯಾಗದ ಕೊವಿಡ್ ಲಸಿಕೆ ರಾಜ್ಯಗಳಲ್ಲಿವೆ: ಕೇಂದ್ರ ಆರೋಗ್ಯ ಇಲಾಖೆ

ಕೊವ್ಯಾಕ್ಸಿನ್ ಲಸಿಕೆ ಬಳಕೆಗೆ ಸಿಕ್ಕಿಲ್ಲ ಪೂರ್ಣ ಪ್ರಮಾಣದ ಒಪ್ಪಿಗೆ; ಇನ್ನೂ ಬಾಕಿ ಇದೆ 3ನೇ ಹಂತದ ಪ್ರಯೋಗ! ಮುಂದೇನು?

ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ