AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸರ್ಕಾರ ಕೃಷಿ ಕ್ಷೇತ್ರಕ್ಕೆ ₹1 ಲಕ್ಷ ಕೋಟಿ ಇಟ್ಟಿದೆ, ತೆಂಗು ವಿದೇಶಕ್ಕೆ ರಫ್ತು ಮಾಡಲು ಅವಕಾಶ ನೀಡಿದೆ-ಸಚಿವೆ ಶೋಭಾ ಕರಂದ್ಲಾಜೆ

ಈ ಹಿಂದೆ ವಿದೇಶಗಳಿಗೆ ತೆಂಗು ರಫ್ತಿಗೆ ಅವಕಾಶ ಇರಲಿಲ್ಲ. ಕೇಂದ್ರ ಸರ್ಕಾರ ಕೃಷಿ ಕ್ಷೇತ್ರಕ್ಕೆ ₹1 ಲಕ್ಷ ಕೋಟಿ ಇಟ್ಟಿದೆ. ಒಂದೊಂದು ಸ್ಥಳೀಯ ಸಂಸ್ಥೆಗೆ 25 ಯೋಜನೆಗೆ ಅವಕಾಶ ನೀಡಿದೆ. ಕಳೆದ ಬಾರಿ ರಾಜ್ಯದಲ್ಲಿ ನೆರೆ ಬಂದಾಗ NDRFನಿಂದ 685 ಕೋಟಿ ರೂಪಾಯಿ ಬಿಡುಗಡೆ ಆಗಿದೆ. -ಸಚಿವೆ ಶೋಭಾ ಕರಂದ್ಲಾಜೆ

ಕೇಂದ್ರ ಸರ್ಕಾರ ಕೃಷಿ ಕ್ಷೇತ್ರಕ್ಕೆ ₹1 ಲಕ್ಷ ಕೋಟಿ ಇಟ್ಟಿದೆ, ತೆಂಗು ವಿದೇಶಕ್ಕೆ ರಫ್ತು ಮಾಡಲು ಅವಕಾಶ ನೀಡಿದೆ-ಸಚಿವೆ ಶೋಭಾ ಕರಂದ್ಲಾಜೆ
ಶೋಭಾ ಕರಂದ್ಲಾಜೆ
TV9 Web
| Edited By: ಆಯೇಷಾ ಬಾನು|

Updated on: Aug 11, 2021 | 1:29 PM

Share

ದೆಹಲಿ: ತೆಂಗು ಅಭಿವೃದ್ಧಿ ಸಂಸ್ಥೆಗೆ ಚೇರ್ಮನ್ ಆಗಿ ಖಾಸಗಿ ವ್ಯಕ್ತಿ ನೇಮಕ, ತೆಂಗು ವಿದೇಶಕ್ಕೆ ರಫ್ತು ಮಾಡಲು ಕೇಂದ್ರದಿಂದ ಅವಕಾಶ ನೀಡುವುದಾಗಿ ದೆಹಲಿಯಲ್ಲಿ ಕೇಂದ್ರದ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಈ ಹಿಂದೆ ವಿದೇಶಗಳಿಗೆ ತೆಂಗು ರಫ್ತಿಗೆ ಅವಕಾಶ ಇರಲಿಲ್ಲ. ಕೇಂದ್ರ ಸರ್ಕಾರ ಕೃಷಿ ಕ್ಷೇತ್ರಕ್ಕೆ ₹1 ಲಕ್ಷ ಕೋಟಿ ಇಟ್ಟಿದೆ. ಒಂದೊಂದು ಸ್ಥಳೀಯ ಸಂಸ್ಥೆಗೆ 25 ಯೋಜನೆಗೆ ಅವಕಾಶ ನೀಡಿದೆ. ಕಳೆದ ಬಾರಿ ರಾಜ್ಯದಲ್ಲಿ ನೆರೆ ಬಂದಾಗ NDRFನಿಂದ 685 ಕೋಟಿ ರೂಪಾಯಿ ಬಿಡುಗಡೆ ಆಗಿದೆ. ಯಂತ್ರಗಳ MRP ಬಹಿರಂಗ ಪಡಿಸುವ ಬಗ್ಗೆ ಕೇಂದ್ರ ತೀರ್ಮಾನ ಮಾಡಿದೆ. ಕೃಷಿ ಸಿಂಚಾಯಿ ಯೋಜನೆ ಬಗ್ಗೆ ಪ್ರಧಾನಿ ಮೋದಿ ಸಂಕಲ್ಪ ಮಾಡಿದ್ದಾರೆ.

2021-22ನೇ ಸಾಲಿನ ಬಜೆಟ್‌ನಲ್ಲಿ ಕೃಷಿ ಸಿಂಚಾಯಿ ಯೋಜನೆಗೆ 4 ಸಾವಿರ ಕೋಟಿ ಇಟ್ಟಿದ್ದಾರೆ. ಇದರಲ್ಲಿ ಕರ್ನಾಟಕಕ್ಕೆ 500 ಕೋಟಿ ರೂಪಾಯಿ ಮೀಸಲಿಟ್ಟಿದ್ದಾರೆ. 300 ಕೋಟಿ ರೂ. ಈಗಾಗಲೇ ಬಿಡುಗಡೆ ಮಾಡಲಾಗಿದೆ. ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ದೇಶದಲ್ಲಿ 112 ಲಕ್ಷ ಹೆಕ್ಟರ್ ಭೂಮಿಯಲ್ಲಿ 2026 ಕ್ಕೆ ಸಿಂಚಾಯಿ ಯೋಜನೆ ಅನುಷ್ಟಾನ ಮಾಡಲು ತೀರ್ಮಾನ ಮಾಡಲಾಗಿದೆ. ನೀರು ಕಡಿಮೆ ಇರುವ ಪ್ರದೇಶಗಳೇ ಇದರ ಯೋಜನೆ. ಸಿರಿಧಾನ್ಯ ಅತಿಹೆಚ್ಚು ಬೆಳೆಯೋ ರಾಜ್ಯ ಕರ್ನಾಟಕ. ಸಿರಿಧಾನ್ಯವನ್ನ ಬೇರೆಬೇರೆ ದೇಶಕ್ಕೆ ರಫ್ತು ಮಾಡಲು ಉತ್ತೇಜನ ಮಾಡಲಾಗುತ್ತೆ. 2023 ಕ್ಕೆ ಇಂಟರ್ನಾಷನಲ್ ಡೇ ಆಫ್ ಮಿಲೆಟ್ಸ್ ಎಂಬ ಕಾರ್ಯಕ್ರಮ ಮಾಡಲಾಗುತ್ತೆ. ಇದಕ್ಕೆ ಯುನೈಟೆಡ್ ರಾಷ್ಟ್ರಗಳು ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಬ್ಲಾಕ್‌ಮೇಲ್‌ ತಂತ್ರ ಮಾಡುವುದಿಲ್ಲ, ನೇರವಾಗಿ ಕೇಳುತ್ತೇನೆ: ಸಚಿವ ಆನಂದ್ ಸಿಂಗ್

Follow Us
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ