AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬು ಬೆಳೆಗೆ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ: ಎಷ್ಟು ಗೊತ್ತಾ?

ಇತ್ತೀಚೆಗೆ ಮುಂಗಾರು ಬೆಳೆಗಳ ಬೆಂಬಲ ಬೆಲೆ ಹೆಚ್ಚಿಸಿದ್ದ ಕೇಂದ್ರ ಸರ್ಕಾರ ಇದೀಗ ಕಬ್ಬು ಬೆಳೆಗೆ ನೀಡುತ್ತಿದ್ದ ಬೆಂಬಲ ಬೆಲೆಯನ್ನು ಹೆಚ್ಚಿಸಿದೆ.

ಕಬ್ಬು ಬೆಳೆಗೆ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ: ಎಷ್ಟು ಗೊತ್ತಾ?
ಕಬ್ಬು ಬೆಳೆಗೆ ನೀಡುತ್ತಿದ್ದ ಬೆಂಬಲ ಬೆಲೆಯಲ್ಲಿ 10 ರೂ. ಹೆಚ್ಚಿಸಿದ ಕೇಂದ್ರ ಸರ್ಕಾರ
TV9 Web
| Edited By: |

Updated on: Jun 29, 2023 | 7:08 AM

Share

ನವದೆಹಲಿ: ಕಬ್ಬು ಬೆಳೆಗೆ (Sugarcane Crop) ಬೆಂಬಲ ಬೆಲೆ ಹೆಚ್ಚಿಸಿವ ಮೂಲಕ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ಗಿಫ್ಟ್​ ನೀಡಿದೆ. ಪ್ರತಿ ಕ್ವಿಂಟಾಲ್ ಕಬ್ಬಿಗೆ 10 ರೂ. ಹೆಚ್ಚಳ ಮಾಡುವ ಮೂಲಕ 2023-24 ಸಾಲಿನಲ್ಲಿ ಕ್ವಿಂಟಾಲ್​ ಕಬ್ಬಿಗೆ 315 ರೂ. ಬೆಲೆ ನಿಗದಿ ಮಾಡಿದೆ. ಕೇಂದ್ರ ಸಂಪುಟ ಸಭೆಯಲ್ಲಿ ನಡೆದ ಮಹತ್ವದ ನಿರ್ಧಾರ ಇದಾಗಿದೆ. ನ್ಯಾಯಯುತ ಮತ್ತು ಲಾಭದಾಯಕ ಬೆಲೆ ಹೆಚ್ಚಳದಿಂದ ಕಬ್ಬು ಬೆಳೆಗಾರರು ಸಂತಸಗೊಂಡಿದ್ದಾರೆ. 2014-15ನೇ ಸಾಲಿನಲ್ಲಿ ಪ್ರತಿ ಕ್ವಿಂಟಲ್‌ಗೆ 210 ರೂ. ಇದ್ದ ಕಬ್ಬಿನ ಎಫ್‌ಆರ್‌ಪಿ ಕಳೆದ ವರ್ಷ 305 ರೂಪಾಯಿ ಇತ್ತು. ಇದೀಗ 2023-24ನೇ ಸಾಲಿನಲ್ಲಿ ಕ್ವಿಂಟಲ್‌ಗೆ 315 ರೂ.ಗೆ ಏರಿಕೆಯಾಗಿದೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಕೇಂದ್ರ ಸಚಿವ ಅನುರಾಗ್ ಠಾಕೂರ್, ಕಬ್ಬು ಬೆಂಬಲ ಬೆಲೆ 10 ರೂ. ಹೆಚ್ಚಳದಿಂದಾಗಿ ದೇಶದಲ್ಲಿರುವ 5 ಕೋಟಿಗೂ ಅಧಿಕ ಕಬ್ಬು ಬೆಳೆಗಾರರು, ಕೂಲಿ ಕಾರ್ಮಿಕರು ಹಾಗೂ ಸಕ್ಕರೆ ಕಾರ್ಖಾನೆಗಳ 5 ಲಕ್ಷ ಕಾರ್ಮಿಕರಿಗೆ ಅನುಕೂಲವಾಗಲಿದೆ ಎಂದು ಹೇಳಿದರು. 2013-14ನೇ ಸಾಲಿನಲ್ಲಿ ದೇಶಾದ್ಯಂತ 57,104 ಕೋಟಿ ರೂಪಾಯಿ ಮೌಲ್ಯದ ಕಬ್ಬು ಖರೀದಿ ಮಾಡಿದ್ದ ಸಕ್ಕರೆ ಕಾರ್ಖಾನೆಗಳು, 2022-23ನೇ ಸಾಲಿನಲ್ಲಿ 1,11,366 ಕೋಟಿ ರೂ. ಮೌಲ್ಯದ 3,353 ಲಕ್ಷ ಟನ್ ಕಬ್ಬನ್ನು ಖರೀದಿ ಮಾಡಿವೆ ಅಂತಾ ಇದೇ ವೇಳೆ ತಿಳಿಸಿದರು.

ಇದನ್ನೂ ಓದಿ: ಯೂರಿಯಾ ಸಬ್ಸಿಡಿ ಯೋಜನೆಯ ಮುಂದುವರಿಕೆಗೆ CCEA ಅನುಮೋದನೆ

ನರೇಂದ್ರ ಮೋದಿ ಸರ್ಕಾರದ ಆಡಳಿತದಲ್ಲಿ ಕಬ್ಬು ಬೆಳೆಗಾರರಿಗೆ ನೀಡಬೇಕಿರುವ ಹಣವನ್ನು ಸಮಯಕ್ಕೆ ಸರಿಯಾಗಿ ಸಂದಾಯ ಮಾಡಲಾಗುತ್ತಿದೆ. ಕಾರ್ಖಾನೆಗಳು ಯಾವುದೇ ಬಾಕಿ ಉಳಿಸಿಕೊಂಡಿಲ್ಲ ಎಂದು ಹೇಳಿದ ಕೇಂದ್ರ ಸಚಿವರು, ಎಥೆನಾಲ್‌ ಅನ್ನು ಕಚ್ಚಾತೈಲದ ಜೊತೆ ಬೆರೆಸುವ ಯೋಜನೆ ರೈತರಿಗೆ ಪ್ರಯೋಜನ ನೀಡಲಿದೆ. ಈ ಯೋಜನೆಗೆ ಕೇಂದ್ರ ಸರ್ಕಾರ 20,500 ಕೋಟಿ ರೂ. ಅನುದಾನ ನೀಡಿದೆ ಎಂದರು.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ