AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬು ಬೆಳೆಗೆ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ: ಎಷ್ಟು ಗೊತ್ತಾ?

ಇತ್ತೀಚೆಗೆ ಮುಂಗಾರು ಬೆಳೆಗಳ ಬೆಂಬಲ ಬೆಲೆ ಹೆಚ್ಚಿಸಿದ್ದ ಕೇಂದ್ರ ಸರ್ಕಾರ ಇದೀಗ ಕಬ್ಬು ಬೆಳೆಗೆ ನೀಡುತ್ತಿದ್ದ ಬೆಂಬಲ ಬೆಲೆಯನ್ನು ಹೆಚ್ಚಿಸಿದೆ.

ಕಬ್ಬು ಬೆಳೆಗೆ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ: ಎಷ್ಟು ಗೊತ್ತಾ?
ಕಬ್ಬು ಬೆಳೆಗೆ ನೀಡುತ್ತಿದ್ದ ಬೆಂಬಲ ಬೆಲೆಯಲ್ಲಿ 10 ರೂ. ಹೆಚ್ಚಿಸಿದ ಕೇಂದ್ರ ಸರ್ಕಾರ
TV9 Web
| Edited By: |

Updated on: Jun 29, 2023 | 7:08 AM

Share

ನವದೆಹಲಿ: ಕಬ್ಬು ಬೆಳೆಗೆ (Sugarcane Crop) ಬೆಂಬಲ ಬೆಲೆ ಹೆಚ್ಚಿಸಿವ ಮೂಲಕ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ಗಿಫ್ಟ್​ ನೀಡಿದೆ. ಪ್ರತಿ ಕ್ವಿಂಟಾಲ್ ಕಬ್ಬಿಗೆ 10 ರೂ. ಹೆಚ್ಚಳ ಮಾಡುವ ಮೂಲಕ 2023-24 ಸಾಲಿನಲ್ಲಿ ಕ್ವಿಂಟಾಲ್​ ಕಬ್ಬಿಗೆ 315 ರೂ. ಬೆಲೆ ನಿಗದಿ ಮಾಡಿದೆ. ಕೇಂದ್ರ ಸಂಪುಟ ಸಭೆಯಲ್ಲಿ ನಡೆದ ಮಹತ್ವದ ನಿರ್ಧಾರ ಇದಾಗಿದೆ. ನ್ಯಾಯಯುತ ಮತ್ತು ಲಾಭದಾಯಕ ಬೆಲೆ ಹೆಚ್ಚಳದಿಂದ ಕಬ್ಬು ಬೆಳೆಗಾರರು ಸಂತಸಗೊಂಡಿದ್ದಾರೆ. 2014-15ನೇ ಸಾಲಿನಲ್ಲಿ ಪ್ರತಿ ಕ್ವಿಂಟಲ್‌ಗೆ 210 ರೂ. ಇದ್ದ ಕಬ್ಬಿನ ಎಫ್‌ಆರ್‌ಪಿ ಕಳೆದ ವರ್ಷ 305 ರೂಪಾಯಿ ಇತ್ತು. ಇದೀಗ 2023-24ನೇ ಸಾಲಿನಲ್ಲಿ ಕ್ವಿಂಟಲ್‌ಗೆ 315 ರೂ.ಗೆ ಏರಿಕೆಯಾಗಿದೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಕೇಂದ್ರ ಸಚಿವ ಅನುರಾಗ್ ಠಾಕೂರ್, ಕಬ್ಬು ಬೆಂಬಲ ಬೆಲೆ 10 ರೂ. ಹೆಚ್ಚಳದಿಂದಾಗಿ ದೇಶದಲ್ಲಿರುವ 5 ಕೋಟಿಗೂ ಅಧಿಕ ಕಬ್ಬು ಬೆಳೆಗಾರರು, ಕೂಲಿ ಕಾರ್ಮಿಕರು ಹಾಗೂ ಸಕ್ಕರೆ ಕಾರ್ಖಾನೆಗಳ 5 ಲಕ್ಷ ಕಾರ್ಮಿಕರಿಗೆ ಅನುಕೂಲವಾಗಲಿದೆ ಎಂದು ಹೇಳಿದರು. 2013-14ನೇ ಸಾಲಿನಲ್ಲಿ ದೇಶಾದ್ಯಂತ 57,104 ಕೋಟಿ ರೂಪಾಯಿ ಮೌಲ್ಯದ ಕಬ್ಬು ಖರೀದಿ ಮಾಡಿದ್ದ ಸಕ್ಕರೆ ಕಾರ್ಖಾನೆಗಳು, 2022-23ನೇ ಸಾಲಿನಲ್ಲಿ 1,11,366 ಕೋಟಿ ರೂ. ಮೌಲ್ಯದ 3,353 ಲಕ್ಷ ಟನ್ ಕಬ್ಬನ್ನು ಖರೀದಿ ಮಾಡಿವೆ ಅಂತಾ ಇದೇ ವೇಳೆ ತಿಳಿಸಿದರು.

ಇದನ್ನೂ ಓದಿ: ಯೂರಿಯಾ ಸಬ್ಸಿಡಿ ಯೋಜನೆಯ ಮುಂದುವರಿಕೆಗೆ CCEA ಅನುಮೋದನೆ

ನರೇಂದ್ರ ಮೋದಿ ಸರ್ಕಾರದ ಆಡಳಿತದಲ್ಲಿ ಕಬ್ಬು ಬೆಳೆಗಾರರಿಗೆ ನೀಡಬೇಕಿರುವ ಹಣವನ್ನು ಸಮಯಕ್ಕೆ ಸರಿಯಾಗಿ ಸಂದಾಯ ಮಾಡಲಾಗುತ್ತಿದೆ. ಕಾರ್ಖಾನೆಗಳು ಯಾವುದೇ ಬಾಕಿ ಉಳಿಸಿಕೊಂಡಿಲ್ಲ ಎಂದು ಹೇಳಿದ ಕೇಂದ್ರ ಸಚಿವರು, ಎಥೆನಾಲ್‌ ಅನ್ನು ಕಚ್ಚಾತೈಲದ ಜೊತೆ ಬೆರೆಸುವ ಯೋಜನೆ ರೈತರಿಗೆ ಪ್ರಯೋಜನ ನೀಡಲಿದೆ. ಈ ಯೋಜನೆಗೆ ಕೇಂದ್ರ ಸರ್ಕಾರ 20,500 ಕೋಟಿ ರೂ. ಅನುದಾನ ನೀಡಿದೆ ಎಂದರು.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್