AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo | ರೈತರ ಬಿಗಿಪಟ್ಟಿಗೆ ಮಣಿಯಿತೇ ಕೇಂದ್ರ ಸರ್ಕಾರ?

ಸತತ ಎಂಟು ದಿನಗಳಿಂದ ನಡೆಯುತ್ತಿರುವ ರೈತ ಪ್ರತಿಭಟನೆ, ಎತ್ತು ಏರಿಗೆಳೆದರೆ ಕೋಣ ನೀರಿಗೆಳೆಯಿತು ಎಂಬಂತಾಗಿತ್ತು. ಸರ್ಕಾರ ಮತ್ತು ರೈತ ನಾಯಕರ ನಡುವೆ ಬೃಹತ್ ಅಂತರ ಸೃಷ್ಟಿಯಾಗಿತ್ತು.

Delhi Chalo | ರೈತರ ಬಿಗಿಪಟ್ಟಿಗೆ ಮಣಿಯಿತೇ ಕೇಂದ್ರ ಸರ್ಕಾರ?
ದೆಹಲಿ ಚಲೋದ ನಡುವೆ ತನ್ನ ಓದಿನಲ್ಲಿ ನಿರತಳಾದ ಬಾಲಕಿ
guruganesh bhat
|

Updated on:Dec 04, 2020 | 7:09 PM

Share

ದೆಹಲಿ: ರೈತರು ಆಕ್ಷೇಪಿಸುತ್ತಿರುವ Farmers Produce Trade and Commerce ಕಾಯ್ದೆಯಲ್ಲಿ ಮೂರು ಪ್ರಮುಖ ತಿದ್ದುಪಡಿಗಳಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡುವ ಸಾಧ್ಯತೆ ಇದೆ ಎಂಬ ಸುಳಿವು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರ ಹೇಳಿಕೆಯಿಂದ ವ್ಯಕ್ತವಾಗಿದೆ.

ಡಿಸೆಂಬರ್ 5 ರಂದು ರೈತರ ಜೊತೆಗೆ ನಡೆಯಲಿರುವ ಇನ್ನೊಂದು ಹಂತದ ಸಭೆಯಲ್ಲಿ ಈ ಕುರಿತು ಮಾತುಕತೆ ನಡೆಯಲಿದೆ. ಸರ್ಕಾರ ರೈತರ ಸಲಹೆಗಳನ್ನು ಕಾಯ್ದೆಯಲ್ಲಿ ಅಳವಡಿಸಲು ಅಥವಾ ಮೂರು ತಿದ್ದುಪಡಿಗೆ ಒಪ್ಪುವ ಸಾಧ್ಯತೆಯಿದೆ. ಸತತ ಎಂಟು ದಿನಗಳಿಂದ ನಡೆಯುತ್ತಿರುವ ರೈತ ಪ್ರತಿಭಟನೆ, ಎತ್ತು ಏರಿಗೆಳೆದರೆ ಕೋಣ ನೀರಿಗೆಳೆಯಿತು ಎಂಬಂತಾಗಿತ್ತು. ಸರ್ಕಾರ ಮತ್ತು ರೈತ ನಾಯಕರ ನಡುವೆ ಬೃಹತ್ ಅಂತರ ಸೃಷ್ಟಿಯಾಗಿತ್ತು. ಕೊನೆಗೂ, ಕೇಂದ್ರ ಸರ್ಕಾರ ತನ್ನ ಬಿಗಿಪಟ್ಟು ಸಡಿಲಿಸುವ ಸಾಧ್ಯತೆ ಕಂಡುಬಂದಿದೆ.

ರೈತರ ವಿರೋಧ ಏಕೆ? ಪಾನ್​ ಕಾರ್ಡ್ ಹೊಂದಿರುವ ಯಾರು ಬೇಕಾದರೂ ಕೃಷಿ ಉತ್ಪನ್ನ ಖರೀದಿಸಲು ನೂತನ ಕಾಯ್ದೆಗಳು ಅವಕಾಶ ನೀಡಲಿವೆ. ಇದರ ಕುರಿತು ರೈತರು ಪ್ರಬಲ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಎಪಿಎಂಸಿ ಹೊರಗೆ ಖಾಸಗಿ ಕೃಷಿ ಮಂಡಿಗಳನ್ನು ತೆರೆಯಲು ಅನುಮತಿ ನೀಡಲಿವೆ. ಇದರಿಂದ ಸಹಕಾರಿ ಕೃಷಿ ಮಾರುಕಟ್ಟೆಗೆ ಪೆಟ್ಟು ಬೀಳಲಿದೆ ಎಂಬುದು ಪಂಜಾಬ್ ರೈತರ ವಾದವಾಗಿದೆ.

ಇದನ್ನು ಕೇಂದ್ರ ಸರ್ಕಾರ ನಿರಾಕರಿಸುತ್ತಲೇ ಬಂದಿದೆ. ಮುಂದಿನ ಮಾತುಕತೆಯಲ್ಲಿ ಎಪಿಎಂಸಿಯ ಹೊರಗಿನ ವ್ಯಾಪಾರಿಗಳ ನೋಂದಣಿ ಮಾಡಬೇಕು ಎಂಬ ರೈತರ ಆಗ್ರಹವನ್ನೂ ಪರಿಶೀಲಿಸಲು ಕೃಷಿ ಸಚಿವರು ಒಪ್ಪಿಗೆ ನೀಡಿದ್ದಾರೆ.

ನಿನ್ನೆ ಸುಮಾರು ಏಳು ತಾಸಿಗೂ ಹೆಚ್ಚು ನಡೆದ ಮಾತುಕತೆಯಲ್ಲಿ 35 ರೈತ ಒಕ್ಕೂಟಗಳ 40 ನಾಯಕರು ಭಾಗವಹಿಸಿದ್ದರು.

ದೆಹಲಿ ಚಲೋ ಆರ್ಥಿಕತೆಗಷ್ಟೇ ಅಲ್ಲ.. ಮುಂದೆ ದೇಶದ ಭದ್ರತೆಗೇ ಧಕ್ಕೆ ತರಲಿದೆ: ಅಮರೀಂದರ್ ಎಚ್ಚರಿಕೆ

Published On - 11:16 am, Fri, 4 December 20

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ