AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಸಿಕೆ ಅಭಿವೃದ್ಧಿಯಾಗ್ತಿದ್ದಂತೆ ಹಂಚಿಕೆ ಬಗ್ಗೆ ಕೇಂದ್ರದ ಪ್ಲ್ಯಾನ್, ಈ ಬಗ್ಗೆ ಅಧಿಕಾರಿಗಳ ಜೊತೆ ಸಭೆ

ದೆಹಲಿ: ಕೊರೊನಾ ನಿರೋಧಕ ಲಸಿಕೆ ಸಂಶೋಧನೆ ವೇಗ ಪಡೆದಿರುವಾಗಲೇ ದೇಶಾದ್ಯಂತ ಲಸಿಕೆ ವಿತರಣೆ ಮಾಡಲು ಕೇಂದ್ರ ಸರಕಾರ ಸಿದ್ಧತೆ ನಡೆಸುತ್ತಿದೆ. ಆದ್ರೆ ಎಷ್ಟೇ ಬೇಗ ಕೊರೊನಾ ಲಸಿಕೆ ಅಭಿವೃದ್ಧಿ ಪಡಿಸಿದ್ರು. ಭಾರತದಂತಹ ದೇಶದಲ್ಲಿ ಕೊರೊನಾ ಲಸಿಕೆ ಹಂಚಿಕೆ ಮಹಾ ಸಾಹಸವೇ ಸರಿ. ಅದಕ್ಕಾಗಿ ಕೇಂದ್ರ ಸರ್ಕಾರ ಮಾಸ್ಟರ್ ಪ್ಲ್ಯಾನ್ ರೆಡಿ ಮಾಡಿಕೊಂಡಿದೆ. ಕೊರೊನಾ ಲಸಿಕೆ ಹಂಚಿಕೆಯೇ ದೇಶಕ್ಕೆ ಮಹಾ ಸವಾಲ್ ಇಡೀ ವಿಶ್ವ ಡೆಡ್ಲಿ ವೈರಸ್ ಕೊರೊನಾದಿಂದ ನರಳುತ್ತಿದೆ. ಕೊರೊನಾ ಲಸಿಕೆಗಾಗಿ ಪ್ರಮುಖ ದೇಶಗಳು ರಾಕೆಟ್ ವೇಗದಲ್ಲಿ […]

ಲಸಿಕೆ ಅಭಿವೃದ್ಧಿಯಾಗ್ತಿದ್ದಂತೆ ಹಂಚಿಕೆ ಬಗ್ಗೆ ಕೇಂದ್ರದ ಪ್ಲ್ಯಾನ್, ಈ ಬಗ್ಗೆ ಅಧಿಕಾರಿಗಳ ಜೊತೆ ಸಭೆ
ಆಯೇಷಾ ಬಾನು
|

Updated on: Oct 18, 2020 | 6:43 AM

Share

ದೆಹಲಿ: ಕೊರೊನಾ ನಿರೋಧಕ ಲಸಿಕೆ ಸಂಶೋಧನೆ ವೇಗ ಪಡೆದಿರುವಾಗಲೇ ದೇಶಾದ್ಯಂತ ಲಸಿಕೆ ವಿತರಣೆ ಮಾಡಲು ಕೇಂದ್ರ ಸರಕಾರ ಸಿದ್ಧತೆ ನಡೆಸುತ್ತಿದೆ. ಆದ್ರೆ ಎಷ್ಟೇ ಬೇಗ ಕೊರೊನಾ ಲಸಿಕೆ ಅಭಿವೃದ್ಧಿ ಪಡಿಸಿದ್ರು. ಭಾರತದಂತಹ ದೇಶದಲ್ಲಿ ಕೊರೊನಾ ಲಸಿಕೆ ಹಂಚಿಕೆ ಮಹಾ ಸಾಹಸವೇ ಸರಿ. ಅದಕ್ಕಾಗಿ ಕೇಂದ್ರ ಸರ್ಕಾರ ಮಾಸ್ಟರ್ ಪ್ಲ್ಯಾನ್ ರೆಡಿ ಮಾಡಿಕೊಂಡಿದೆ.

ಕೊರೊನಾ ಲಸಿಕೆ ಹಂಚಿಕೆಯೇ ದೇಶಕ್ಕೆ ಮಹಾ ಸವಾಲ್ ಇಡೀ ವಿಶ್ವ ಡೆಡ್ಲಿ ವೈರಸ್ ಕೊರೊನಾದಿಂದ ನರಳುತ್ತಿದೆ. ಕೊರೊನಾ ಲಸಿಕೆಗಾಗಿ ಪ್ರಮುಖ ದೇಶಗಳು ರಾಕೆಟ್ ವೇಗದಲ್ಲಿ ಕಾರ್ಯಪ್ರವೃತ್ತವಾಗಿವೆ. ಆದ್ರೆ ಭಾರತದಂತಹ ದೇಶಗಳಿಗೆ ಕೊರೊನಾ ಲಸಿಕೆ ಅಭಿವೃದ್ಧಿ ಎಷ್ಟು ಮುಖ್ಯವೋ, ಹಂಚಿಕೆಯೂ ಕೂಡ ಅಷ್ಟೇ ದೊಡ್ಡ ಸವಾಲು. ಯಾಕಂದ್ರೆ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತದಲ್ಲಿ ಕೊರೊನಾ ಲಸಿಕೆ ಹಂಚಿಕೆ ಮಾಡೋದು ಅಂದ್ರೆ ಸುಲಭದ ಮಾತಲ್ಲ. ಹಾಗಾಗಿ ಕೇಂದ್ರ ಸರ್ಕಾರ ಪ್ಲಾನ್ ರೂಪಿಸುತ್ತಿದೆ. ಕೊರೊನಾ ಲಸಿಕೆ ಅಭಿವೃದ್ಧಿ ಆಗ್ತಿದ್ದಂತೆ ಅದನ್ನ ಯಾವ ರೀತಿ ಹಂಚಬೇಕು ಅನ್ನೋದರ ಬಗ್ಗೆ ಈಗಿನಿಂದಲೇ ಪ್ಲ್ಯಾನ್ ಮಾಡಲಾಗ್ತಿದೆ. ಈ ಸಂಬಂಧ ಚರ್ಚಿಸಲು ಪ್ರಧಾನಿ‌ ಮೋದಿ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದ್ದಾರೆ. ಕೊರೊನಾ ಸೋಂಕಿನ ಪ್ರಸ್ತುತ ಪರಿಸ್ಥಿತಿ, ಲಸಿಕೆ ವಿತರಣೆ ಮತ್ತು ನಿರ್ವಹಣೆ ಕುರಿತ ಪರಿಶೀಲನಾ ಸಭೆಯಲ್ಲಿ ಮಾತನಾಡಿದ್ದಾರೆ.

ಕೊರೊನಾ ನಿರೋಧಕ ಲಸಿಕೆ ಹಂಚಲು ಪ್ಲ್ಯಾನ್: ದೇಶದಲ್ಲಿ ನಡೆಸುವ ಸಾರ್ವತ್ರಿಕ ಚುನಾವಣೆ ಮಾದರಿಯಲ್ಲಿ ಕೊರೊನಾ ಹಂಚಿಕೆಗೆ ಸಿದ್ಧತೆ ನಡೆಸಬೇಕು. ವಿಪತ್ತು ನಿರ್ವಹಣಾ ಸಮಯದಲ್ಲಿ ತಯಾರಿ ನಡೆಸುವ ಮಾದರಿಯಲ್ಲಿಯೇ ಕೊರೊನಾ ಲಸಿಕೆ ಹಂಚಿಕೆಗೂ ಸಿದ್ಧತೆ ನಡೆಸಬೇಕು. ಭಾರತದಲ್ಲಿ ಈಗಾಗಲೇ ಮೂರು ಲಸಿಕೆಗಳು ಅಭಿವೃದ್ಧಿ ಹಂತದಲ್ಲಿವೆ. ಅವುಗಳಲ್ಲಿ ಎರಡು ಲಸಿಕೆಗಳು 2ನೇ ಹಂತದ ಪರೀಕ್ಷೆಯಲ್ಲಿದ್ದರೆ, ಮತ್ತೊಂದು 3ನೇ ಹಂತದ ಪರೀಕ್ಷೆಯಲ್ಲಿದೆ ಎಂದು ಮೋದಿ ಮಾಹಿತಿ ನೀಡಿದ್ದಾರೆ. ಮುಂದಿನ ವರ್ಷ ಜುಲೈ ವೇಳೆಗೆ 40 ರಿಂದ 50 ಕೋಟಿ ಡೋಸ್‌ಗಳಷ್ಟು ಕೊರೊನಾ ನಿರೋಧಕ ಲಸಿಕೆ ಉತ್ಪಾದಿಸಿ 25 ಕೋಟಿ ಜನರಿಗೆ ನೀಡುವ ಗುರಿ ಹೊಂದಲಾಗಿದೆ.

ಕೊರೊನಾ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಆರೋಗ್ಯ ಸೇವೆ ಕಾರ್ಯಕರ್ತರಿಗೆ ಮೊದಲು ಲಸಿಕೆ ನೀಡಲಾಗುವುದು. ಆದ್ಯತೆ ಮೇರೆಗೆ ರಾಜ್ಯಗಳಿಗೆ ಕೊರೊನಾ ನಿರೋಧಕ ಲಸಿಕೆ ಪೂರೈಸಲಾಗುವುದು. ಲಸಿಕೆ ವಿತರಿಸುವ ಜವಾಬ್ದಾರಿಯನ್ನು ನೀತಿ ಆಯೋಗದ ಆರೋಗ್ಯವಿಭಾಗಕ್ಕೆ ವಹಿಸುವುದು. ಲಸಿಕೆ ವಿತರಣೆ ಪ್ರಕ್ರಿಯೆಯಲ್ಲಿ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶ, ಜಿಲ್ಲಾ ಮಟ್ಟದ ಪದಾಧಿಕಾರಿಗಳು, ಸಂಘಟನೆಗಳು, ಸ್ವಯಂಸೇವಕರು, ನಾಗರಿಕರು, ಮತ್ತು ಎಲ್ಲ ಅಗತ್ಯ ಕ್ಷೇತ್ರಗಳ ತಜ್ಞರು ಭಾಗವಹಿಸುವುದು.

ಹೀಗೆ ಕೊರೊನಾ ಲಸಿಕೆ‌ ಹಂಚಿಕೆಗೆ ಪ್ಲಾನ್ ಮಾಡಿಕೊಳ್ಳಲಾಗಿದ್ದು, ಎಲ್ಲವೂ ಅಂದುಕೊಂಡಂತೆ ಆದ್ರೆ ಮುಂದಿನ ವರ್ಷ ಜುಲೈನಿಂದ ಲಸಿಕೆ ಪೂರೈಕೆ ಪ್ರಕ್ರಿಯೆ ಆರಂಭವಾಗಲಿದೆ.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು