AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನುಮನ ಜನ್ಮಸ್ಥಳ ವಿವಾದ: ವಿಷಯ ಗಮನಕ್ಕೆ ಬಂದಿದೆ ಎಂದ ಕೇಂದ್ರ ಸರ್ಕಾರ

ಮುಂದೆ ಆಗಬಹುದಾದ ಸಮಸ್ಯೆಗಳನ್ನು ನಿರ್ವಹಿಸುವ ದೃಷ್ಟಿಯಿಂದ ಆದಷ್ಟು ಬೇಗ ಹನುಮಂತನ ನಿಜವಾದ ಜನ್ಮಸ್ಥಳ ಘೋಷಿಸಲು ಕ್ರಮ ಕೈಗೊಳ್ಳಬೇಕು ಎಂದು ಸಂಗಣ್ಣ ಕರಡಿ ಪತ್ರದ ಮೂಲಕ ಪ್ರಶ್ನೆ ಮಾಡಿದ್ದರು. 

ಹನುಮನ ಜನ್ಮಸ್ಥಳ ವಿವಾದ: ವಿಷಯ ಗಮನಕ್ಕೆ ಬಂದಿದೆ ಎಂದ ಕೇಂದ್ರ ಸರ್ಕಾರ
ಅಂಜನಾದ್ರಿ
Follow us
TV9 Web
| Updated By: ganapathi bhat

Updated on: Aug 04, 2021 | 11:19 PM

ದೆಹಲಿ: ಹನುಮನ ಜನ್ಮಸ್ಥಾನ ಯಾವುದು ಎಂಬ ಬಗ್ಗೆ ಇತ್ತೀಚೆಗೆ ಕರ್ನಾಟಕ ಮತ್ತು ಆಂಧ್ರಪ್ರದೇಶದ ನಡುವೆ ವಾದ- ವಿವಾದ ಏರ್ಪಟ್ಟಿತ್ತು. ಆಂಧ್ರದ ಟಿಟಿಡಿ ಹಾಗೂ ಕರ್ನಾಟಕದ ನಡುವೆ ಈ ವಿಚಾರದಲ್ಲಿ ಭಿನ್ನಾಭಿಪ್ರಾಯ ಜೋರಾಗಿ ಕೇಳಿಬಂದಿತ್ತು. ಆಂಧ್ರದ ತಿರುಪತಿಯ ಏಳು ಬೆಟ್ಟಗಳ ಪೈಕಿ ಒಂದರಲ್ಲಿ ಹನುಮಂತ ಜನಿಸಿದ್ದಾನೆ ಎಂದು ಟಟಿಡಿ ಹಾಗೂ ಹನುಮ ಕರ್ನಾಟಕ ಕೊಪ್ಪಳದ ಅಂಜನಾದ್ರಿಯಲ್ಲಿ ಜನಿಸಿದ್ದಾನೆ ಎಂದು ಕರ್ನಾಟಕದ ಕೆಲ ಇತಿಹಾಸಕಾರರು, ಪಂಡಿತರು, ರಾಜಕಾರಣಿಗಳು ಹೇಳುತ್ತಾ ಬಂದಿದ್ದಾರೆ. ಈ ಕುರಿತಾಗಿ ಕೊಪ್ಪಳ ಸಂಸದ ಸಂಗಣ್ಣ ಕರಡಿ ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡಿದ್ದರು. ಮಧ್ಯಸ್ಥಿಕೆ ವಹಿಸುವಂತೆ ಕೇಳಿಕೊಂಡಿದ್ದರು. ಅದಕ್ಕೆ ಇಂದು (ಆಗಸ್ಟ್ 4) ಕೇಂದ್ರ ಸರ್ಕಾರ ಉತ್ತರಿಸಿದೆ.

ಇತ್ತೀಚೆಗೆ ಆಂಧ್ರಪ್ರದೇಶ ಮೂಲದ ಟಿಟಿಡಿ ಬೋರ್ಡ್ ಮತ್ತು ಕರ್ನಾಟಕ ರಾಜ್ಯದ ನಡುವೆ ಹನುಮಂತನ ಜನ್ಮಸ್ಥಳದ ಬಗ್ಗೆ ಭಾರೀ ಚರ್ಚೆ ಉಂಟಾಗಿತ್ತು. ಆ ಕುರಿತು ವಾದ-ವಿವಾದವು ಮಾಧ್ಯಮಗಳಲ್ಲಿಯೂ ಪ್ರಸಾರ, ಪ್ರಕಟ ಆಗಿತ್ತು. ಟಿಟಿಡಿ ಹೇಳುವಂತೆ ಹನುಮಂತನು ತಿರುಪತಿಯಲ್ಲಿ ಇರುವ ಏಳರಲ್ಲಿ ಒಂದು ಬೆಟ್ಟದಲ್ಲಿ ಜನಿಸಿದ್ದಾನೆ. ಮತ್ತು ಅದರ ಬಗ್ಗೆ ವರದಿ ಸಲ್ಲಿಸುವ ಹಂತದಲ್ಲಿ ಟಿಟಿಡಿ ಇದೆ. ಇತ್ತ ಕರ್ನಾಟಕ, ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಎಂಬಲ್ಲಿ ಹನುಮಂತ ಜನಿಸಿದ್ದಾನೆ ಎಂದು ದಾಖಲೆಗಳನ್ನು ನೀಡಿದೆ.

ಈ ವಿಚಾರವು ಕೇಂದ್ರ ಸರ್ಕಾರದ ಗಮನಕ್ಕೆ ಬಂದಿದೆಯೇ? ಬಂದಿದ್ದರೆ, ಈ ಬಗೆಗಿನ ನಿಜವನ್ನು ತನಿಖೆ ಮಾಡಲು ಸರ್ಕಾರ ಕೈಗೊಂಡಿದೆಯೇ? ಇಲ್ಲವಾದರೆ, ಈ ವಿಚಾರವನ್ನು ತನಿಖೆ ಮಾಡಲು ಮತ್ತು ಹನುಮಂತನ ಜನ್ಮಸ್ಥಳದ ಬಗ್ಗೆ ವಿವರವಾದ ವರದಿ ಸಲ್ಲಿಸಲು ಕ್ರಮ ಕೈಗೊಳ್ಳಬೇಕು.

ನೆರೆಯ ಎರಡು ರಾಜ್ಯಗಳಾದ ಕರ್ನಾಟಕ ಮತ್ತು ಆಂಧ್ರಪ್ರದೇಶದ ನಡುವೆ ಭಿನ್ನಾಭಿಪ್ರಾಯ ಶಮನಗೊಳಿಸುವ ಉದ್ದೇಶದಿಂದ, ಮುಂದೆ ಆಗಬಹುದಾದ ಸಮಸ್ಯೆಗಳನ್ನು ನಿರ್ವಹಿಸುವ ದೃಷ್ಟಿಯಿಂದ ಆದಷ್ಟು ಬೇಗ ಹನುಮಂತನ ನಿಜವಾದ ಜನ್ಮಸ್ಥಳ ಘೋಷಿಸಲು ಕ್ರಮ ಕೈಗೊಳ್ಳಬೇಕು ಎಂದು ಸಂಗಣ್ಣ ಕರಡಿ ಪತ್ರದ ಮೂಲಕ ಪ್ರಶ್ನೆ ಮಾಡಿದ್ದರು.

ಈ ವಿಷಯವು ಮಾಧ್ಯಮಗಳ ಮೂಲಕ ಸರ್ಕಾರದ ಗಮನಕ್ಕೆ ಬಂದಿದೆ. ಆದರೆ ಯಾವುದೇ ಪ್ರಸ್ತಾವ ಸರ್ಕಾರದ ಪರಿಗಣನೆಯಲ್ಲಿ ಇಲ್ಲ ಎಂದು ಇದಕ್ಕೆ ಸರ್ಕಾರ ಉತ್ತರಿಸಿದೆ.

ಇದನ್ನೂ ಓದಿ: ಅಯೋಧ್ಯೆ ರಾಮಮಂದಿರಕ್ಕೂ ಮುನ್ನ ಹನುಮನ ಜನ್ಮಸ್ಥಾನ ಅಂಜನಾದ್ರಿ ಅಭಿವೃದ್ಧಿಗೆ 5 ಸಾವಿರ ಕೋಟಿ ರೂ. ಕೊಡಿ: ಮಧುಗಿರಿ ಮೋದಿ ಆಗ್ರಹ

ಅಂಜನಾದ್ರಿ ಪರ್ವತವೇ ಹನುಮನ ಜನ್ಮಸ್ಥಳ; ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಪ್ರತಿಪಾದನೆ

(Central Govt reply to Sanganna Karadi letter on Hanuman Birthplace Issue between Karnataka Andhra)

ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪರಮೇಶ್ವರ್ ಹೇಳಿದ್ದೇನು ನೋಡಿ
ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪರಮೇಶ್ವರ್ ಹೇಳಿದ್ದೇನು ನೋಡಿ
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!