AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನುಮನ ಜನ್ಮಸ್ಥಳ ವಿವಾದ: ವಿಷಯ ಗಮನಕ್ಕೆ ಬಂದಿದೆ ಎಂದ ಕೇಂದ್ರ ಸರ್ಕಾರ

ಮುಂದೆ ಆಗಬಹುದಾದ ಸಮಸ್ಯೆಗಳನ್ನು ನಿರ್ವಹಿಸುವ ದೃಷ್ಟಿಯಿಂದ ಆದಷ್ಟು ಬೇಗ ಹನುಮಂತನ ನಿಜವಾದ ಜನ್ಮಸ್ಥಳ ಘೋಷಿಸಲು ಕ್ರಮ ಕೈಗೊಳ್ಳಬೇಕು ಎಂದು ಸಂಗಣ್ಣ ಕರಡಿ ಪತ್ರದ ಮೂಲಕ ಪ್ರಶ್ನೆ ಮಾಡಿದ್ದರು. 

ಹನುಮನ ಜನ್ಮಸ್ಥಳ ವಿವಾದ: ವಿಷಯ ಗಮನಕ್ಕೆ ಬಂದಿದೆ ಎಂದ ಕೇಂದ್ರ ಸರ್ಕಾರ
ಅಂಜನಾದ್ರಿ
TV9 Web
| Edited By: |

Updated on: Aug 04, 2021 | 11:19 PM

Share

ದೆಹಲಿ: ಹನುಮನ ಜನ್ಮಸ್ಥಾನ ಯಾವುದು ಎಂಬ ಬಗ್ಗೆ ಇತ್ತೀಚೆಗೆ ಕರ್ನಾಟಕ ಮತ್ತು ಆಂಧ್ರಪ್ರದೇಶದ ನಡುವೆ ವಾದ- ವಿವಾದ ಏರ್ಪಟ್ಟಿತ್ತು. ಆಂಧ್ರದ ಟಿಟಿಡಿ ಹಾಗೂ ಕರ್ನಾಟಕದ ನಡುವೆ ಈ ವಿಚಾರದಲ್ಲಿ ಭಿನ್ನಾಭಿಪ್ರಾಯ ಜೋರಾಗಿ ಕೇಳಿಬಂದಿತ್ತು. ಆಂಧ್ರದ ತಿರುಪತಿಯ ಏಳು ಬೆಟ್ಟಗಳ ಪೈಕಿ ಒಂದರಲ್ಲಿ ಹನುಮಂತ ಜನಿಸಿದ್ದಾನೆ ಎಂದು ಟಟಿಡಿ ಹಾಗೂ ಹನುಮ ಕರ್ನಾಟಕ ಕೊಪ್ಪಳದ ಅಂಜನಾದ್ರಿಯಲ್ಲಿ ಜನಿಸಿದ್ದಾನೆ ಎಂದು ಕರ್ನಾಟಕದ ಕೆಲ ಇತಿಹಾಸಕಾರರು, ಪಂಡಿತರು, ರಾಜಕಾರಣಿಗಳು ಹೇಳುತ್ತಾ ಬಂದಿದ್ದಾರೆ. ಈ ಕುರಿತಾಗಿ ಕೊಪ್ಪಳ ಸಂಸದ ಸಂಗಣ್ಣ ಕರಡಿ ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡಿದ್ದರು. ಮಧ್ಯಸ್ಥಿಕೆ ವಹಿಸುವಂತೆ ಕೇಳಿಕೊಂಡಿದ್ದರು. ಅದಕ್ಕೆ ಇಂದು (ಆಗಸ್ಟ್ 4) ಕೇಂದ್ರ ಸರ್ಕಾರ ಉತ್ತರಿಸಿದೆ.

ಇತ್ತೀಚೆಗೆ ಆಂಧ್ರಪ್ರದೇಶ ಮೂಲದ ಟಿಟಿಡಿ ಬೋರ್ಡ್ ಮತ್ತು ಕರ್ನಾಟಕ ರಾಜ್ಯದ ನಡುವೆ ಹನುಮಂತನ ಜನ್ಮಸ್ಥಳದ ಬಗ್ಗೆ ಭಾರೀ ಚರ್ಚೆ ಉಂಟಾಗಿತ್ತು. ಆ ಕುರಿತು ವಾದ-ವಿವಾದವು ಮಾಧ್ಯಮಗಳಲ್ಲಿಯೂ ಪ್ರಸಾರ, ಪ್ರಕಟ ಆಗಿತ್ತು. ಟಿಟಿಡಿ ಹೇಳುವಂತೆ ಹನುಮಂತನು ತಿರುಪತಿಯಲ್ಲಿ ಇರುವ ಏಳರಲ್ಲಿ ಒಂದು ಬೆಟ್ಟದಲ್ಲಿ ಜನಿಸಿದ್ದಾನೆ. ಮತ್ತು ಅದರ ಬಗ್ಗೆ ವರದಿ ಸಲ್ಲಿಸುವ ಹಂತದಲ್ಲಿ ಟಿಟಿಡಿ ಇದೆ. ಇತ್ತ ಕರ್ನಾಟಕ, ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಎಂಬಲ್ಲಿ ಹನುಮಂತ ಜನಿಸಿದ್ದಾನೆ ಎಂದು ದಾಖಲೆಗಳನ್ನು ನೀಡಿದೆ.

ಈ ವಿಚಾರವು ಕೇಂದ್ರ ಸರ್ಕಾರದ ಗಮನಕ್ಕೆ ಬಂದಿದೆಯೇ? ಬಂದಿದ್ದರೆ, ಈ ಬಗೆಗಿನ ನಿಜವನ್ನು ತನಿಖೆ ಮಾಡಲು ಸರ್ಕಾರ ಕೈಗೊಂಡಿದೆಯೇ? ಇಲ್ಲವಾದರೆ, ಈ ವಿಚಾರವನ್ನು ತನಿಖೆ ಮಾಡಲು ಮತ್ತು ಹನುಮಂತನ ಜನ್ಮಸ್ಥಳದ ಬಗ್ಗೆ ವಿವರವಾದ ವರದಿ ಸಲ್ಲಿಸಲು ಕ್ರಮ ಕೈಗೊಳ್ಳಬೇಕು.

ನೆರೆಯ ಎರಡು ರಾಜ್ಯಗಳಾದ ಕರ್ನಾಟಕ ಮತ್ತು ಆಂಧ್ರಪ್ರದೇಶದ ನಡುವೆ ಭಿನ್ನಾಭಿಪ್ರಾಯ ಶಮನಗೊಳಿಸುವ ಉದ್ದೇಶದಿಂದ, ಮುಂದೆ ಆಗಬಹುದಾದ ಸಮಸ್ಯೆಗಳನ್ನು ನಿರ್ವಹಿಸುವ ದೃಷ್ಟಿಯಿಂದ ಆದಷ್ಟು ಬೇಗ ಹನುಮಂತನ ನಿಜವಾದ ಜನ್ಮಸ್ಥಳ ಘೋಷಿಸಲು ಕ್ರಮ ಕೈಗೊಳ್ಳಬೇಕು ಎಂದು ಸಂಗಣ್ಣ ಕರಡಿ ಪತ್ರದ ಮೂಲಕ ಪ್ರಶ್ನೆ ಮಾಡಿದ್ದರು.

ಈ ವಿಷಯವು ಮಾಧ್ಯಮಗಳ ಮೂಲಕ ಸರ್ಕಾರದ ಗಮನಕ್ಕೆ ಬಂದಿದೆ. ಆದರೆ ಯಾವುದೇ ಪ್ರಸ್ತಾವ ಸರ್ಕಾರದ ಪರಿಗಣನೆಯಲ್ಲಿ ಇಲ್ಲ ಎಂದು ಇದಕ್ಕೆ ಸರ್ಕಾರ ಉತ್ತರಿಸಿದೆ.

ಇದನ್ನೂ ಓದಿ: ಅಯೋಧ್ಯೆ ರಾಮಮಂದಿರಕ್ಕೂ ಮುನ್ನ ಹನುಮನ ಜನ್ಮಸ್ಥಾನ ಅಂಜನಾದ್ರಿ ಅಭಿವೃದ್ಧಿಗೆ 5 ಸಾವಿರ ಕೋಟಿ ರೂ. ಕೊಡಿ: ಮಧುಗಿರಿ ಮೋದಿ ಆಗ್ರಹ

ಅಂಜನಾದ್ರಿ ಪರ್ವತವೇ ಹನುಮನ ಜನ್ಮಸ್ಥಳ; ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಪ್ರತಿಪಾದನೆ

(Central Govt reply to Sanganna Karadi letter on Hanuman Birthplace Issue between Karnataka Andhra)

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ