AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಟ್ಸಾಪ್ ಖಾಸಗಿತನ ನಿಯಮಾವಳಿಗಳ ಅಪ್​ಡೇಟ್​ಗೆ ದೆಹಲಿ ಹೈಕೋರ್ಟ್​ನಲ್ಲಿ ತಡೆ ಕೋರಿದ ಸರ್ಕಾರ

ವಾಟ್ಸಾಪ್​ನಿಂದ ಖಾಸಗಿತನ ನಿಯಮಾವಳಿಗಳಲ್ಲಿ ಅಪ್​ಡೇಟ್ ಮಾಡುವುದಕ್ಕೆ ತಡೆ ನೀಡಬೇಕು ಎಂದು ಕೇಂದ್ರ ಸರ್ಕಾರವು ದೆಹಲಿ ಹೈಕೋರ್ಟ್​ನಲ್ಲಿ ಕೇಳಿಕೊಂಡಿದೆ. ಈ ಬಗ್ಗೆ ಅಫಿಡವಿಟ್ ಅನ್ನು ಸಲ್ಲಿಸಿದೆ.

ವಾಟ್ಸಾಪ್ ಖಾಸಗಿತನ ನಿಯಮಾವಳಿಗಳ ಅಪ್​ಡೇಟ್​ಗೆ ದೆಹಲಿ ಹೈಕೋರ್ಟ್​ನಲ್ಲಿ ತಡೆ ಕೋರಿದ ಸರ್ಕಾರ
ದೆಹಲಿ ಹೈ ಕೋರ್ಟ್
Srinivas Mata
|

Updated on:Mar 20, 2021 | 4:38 PM

Share

ನವದೆಹಲಿ: ವಾಟ್ಸಾಪ್​​ನಿಂದ ಖಾಸಗಿತನ ನಿಯಮಾವಳಿಗಳ ಅಪ್​ಡೇಟ್ ಮಾಡುವುದಕ್ಕೆ ತಡೆ ನೀಡಬೇಕು. ಅವುಗಳು ಮಾಹಿತಿ ತಂತ್ರಜ್ಞಾನ ನಿಯಮಗಳಿಗೆ ತಕ್ಕಂತೆ ಇಲ್ಲ ಎಂದು ಕೇಂದ್ರ ಸರ್ಕಾರವು ಶುಕ್ರವಾರ ದೆಹಲಿ ಹೈಕೋರ್ಟ್​​ನಲ್ಲಿ ಕೇಳಿಕೊಂಡಿದೆ. ಈ ಬಗ್ಗೆ ಅಫಿಡವಿಟ್ ಸಲ್ಲಿಸಿರುವ ಸರ್ಕಾರ, ಪ್ರಸ್ತಾವಿತ ದತ್ತಾಂಶ ಸುರಕ್ಷತಾ ಮಸೂದೆ, 2019ಕ್ಕೆ ಇನ್ನೂ ಸಂಸತ್​​ನಲ್ಲಿ ಅನುಮೋದನೆ ಪಡೆಯಬೇಕಿದೆ. ಈ ಮಸೂದೆಯು ವಾಟ್ಸಾಪ್​ನಂಥ ಸೇವಾ ಪೂರೈಕೆದಾರರು ಖಾಸಗಿತನ ನಿಯಮವನ್ನು ನೀಡುವ ಸಾಮರ್ಥ್ಯ ಮಿತಿಗೊಳಿಸುತ್ತದೆ. ಅವುಗಳು ಸೂಕ್ತ ಗುಣಮಟ್ಟದ ಭದ್ರತೆ ಹಾಗೂ ದತ್ತಾಂಶ ರಕ್ಷಣಾ ವ್ಯವಸ್ಥೆಯನ್ನು ಹೊಂದಿಲ್ಲ ಎಂದು ತಿಳಿಸಲಾಗಿದೆ.

ವಾಟ್ಸಾಪ್​ನ ಪ್ರಸ್ತಾವಿತ ಖಾಸಗಿತನ ನಿಯಮಗಳ ಬದಲಾವಣೆಗೆ ತಡೆ ಕೋರಿ ಹಾಕಿದ್ದ ಅರ್ಜಿಗೆ ಪ್ರತಿಕ್ರಿಯೆಯಾಗಿ ಕೇಂದ್ರದಿಂದ ಅಫಿಡವಿಟ್ ಸಲ್ಲಿಸಲಾಗಿದೆ. ಬಳಕೆದಾರರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರಿಂದ ಭಾರತದಲ್ಲಿ ವಾಟ್ಸಾಪ್ ಕಂಪೆನಿಯು ಬದಲಾವಣೆಯನ್ನು ಮುಂದೂಡಿತ್ತು. ಅಪ್​ಡೇಟ್​ನಿಂದ ಪ್ಲಾಟ್​ಫಾರ್ಮ್​ನಲ್ಲಿ ಮೂಲಭೂತವಾದ ಬದಲಾವಣೆ ಆಗಲ್ಲ. ಒಂದೋ ವಾಟ್ಸಾಪ್, ಇಲ್ಲ ಫೇಸ್​ಬುಕ್ ಅಥವಾ ಥರ್ಡ್ ಪಾರ್ಟಿ ಯಾರಿಗೆ ಸಂಪರ್ಕಕ್ಕೆ ಅವಕಾಶ ಇದೆಯೋ ಅವುಗಳಿಂದ (ಫೋನ್​ನಲ್ಲಿ ಸ್ಪೈವೇರ್ ಯಾವುದೂ ಇಲ್ಲದ ಪಕ್ಷದಲ್ಲಿ) ಮೊದಲಿಂದ ಕೊನೆ ತನಕ ಎನ್​ಕ್ರಿಪ್ಟ್ ಆಗುತ್ತದೆ. ಆದರೆ ಪಾವತಿ ಅಥವಾ ಖರೀದಿ ಮಾಹಿತಿ (ಉದ್ಯಮಕ್ಕಾಗಿ ವಾಟ್ಸಾಪ್​ನಲ್ಲಿ ಮಾಡಿದ್ದು) ಫೇಸ್​ಬುಕ್​ನೊಂದಿಗೆ ಹಂಚಿಕೆಯಾಗುತ್ತದೆ.

ಆದರೆ, ಈಚೆಗೆ ಕೇಂದ್ರ ಸರ್ಕಾರದಿಂದ ಪರಿಚಯಿಸಿದ ನೀತಿಗಳು ಆನ್​ಲೈನ್ ಬಳಕೆದಾರರ ಖಾಸಗಿತನ ಮತ್ತು ಎನ್​ಕ್ರಿಪ್ಷನ್​ಗೆ ಅಪಾಯ ತಂದೊಡ್ಡುತ್ತದೆ ಎನ್ನಲಾಗಿದೆ. ಸಾಮಾಜಿಕ ಮಾಧ್ಯಮಗಳು, ಡಿಜಿಟಲ್ ಸುದ್ದಿ ಮಾಧ್ಯಮ ಹಾಗೂ ಸ್ಟ್ರೀಮಿಂಗ್ ಸೇವೆಗಳ ಮೇಲೆ ನಿಯಂತ್ರಣ ಹೇರುವ ಸಲುವಾಗಿ ಸರ್ಕಾರ ಹೊಸ ಸಂಹಿತೆಯೊಂದನ್ನು ತಂದಿದೆ. ಉದಾಹರಣೆಗೆ, ವಾಟ್ಸಾಪ್​ನಂಥ ಪ್ಲಾಟ್​ಫಾರ್ಮ್​ಗಳಲ್ಲಿ ಮಾಹಿತಿಯ ಮೊದಲ ಮೂಲ ಎಲ್ಲಿಂದ ಬಂದಿದ್ದು ಎಂದು ವಿಚಾರಣೆ ನಡೆಸುವುದಕ್ಕೆ ಸರ್ಕಾರಕ್ಕೆ ವಾಟ್ಸಾಪ್​ನಿಂದ ಸಹಾಯ ಮಾಡಬೇಕಾಗುತ್ತದೆ.

ವಾಟ್ಸಾಪ್ ಸಂದೇಶವನ್ನು ಮೊದಲಿಂದ ಕೊನೆ ತನಕ ಎನ್​ಕ್ರಿಪ್ಷನ್ ಮುರಿಯದ ಹೊರತು ಸರ್ಕಾರದಿಂದ ಹೇಳುತ್ತಿರುವುದು ಪಾಲನೆ ಮಾಡಲು ಸಾಧ್ಯವೇ ಇಲ್ಲ ಎಂದು ಡೈಲಾಗ್ ತಂತ್ರಜ್ಞಾನ ನಿಯಮಾವಳಿಯ ಥಿಂಕ್ ಟ್ಯಾಂಕ್ ಸ್ಥಾಪಕರಾದ ಕಜೀಂ ರಿಜ್ವಿ ಹೇಳಿದ್ದಾರೆ.

ಇದನ್ನೂ ಓದಿ: WhatsApp Features: ಈ ಐದು ವಾಟ್ಸ್​​ಆ್ಯಪ್​ ಫೀಚರ್​ ಬಗ್ಗೆ ನೀವು ತಿಳಿದಿರಲೇಬೇಕು

Published On - 3:52 pm, Sat, 20 March 21

Follow Us
Srinivas Mata
Srinivas Mata
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ