AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಮ್ಮೆ ಮಾತುಕತೆ ನಡೆಸೋಣ: ಚಳವಳಿ ನಿರತರಿಗೆ ಪತ್ರ ಬರೆದ ಕೃಷಿ ಸಚಿವಾಲಯ

ನಿಮ್ಮ ಹಿತಾಸಕ್ತಿಗಳ ಬಗ್ಗೆ ನೀವು ತಿಳಿಸಿದ ದಿನವೇ ವಿಜ್ಞಾನ ಭವನದಲ್ಲಿ ಚರ್ಚಿಸೋಣ, ದಯವಿಟ್ಟು ನಿಮಗೆ ಒಪ್ಪಿತವಾದ ದಿನಾಂಕವನ್ನು ತಿಳಿಸಿ ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.

ಮತ್ತೊಮ್ಮೆ ಮಾತುಕತೆ ನಡೆಸೋಣ: ಚಳವಳಿ ನಿರತರಿಗೆ ಪತ್ರ ಬರೆದ ಕೃಷಿ ಸಚಿವಾಲಯ
ಪ್ರತಿಭಟನಾ ನಿರತ ರೈತರು (ಪಿಟಿಐ ಚಿತ್ರ)
guruganesh bhat
| Edited By: |

Updated on:Dec 21, 2020 | 6:06 PM

Share

ದೆಹಲಿ: ‘ನೀವು ಸೂಚಿಸಿದ ದಿನವೇ ಮಾತುಕತೆ ನಡೆಸೋಣ’ ಎಂಬ ಉಲ್ಲೇಖಿವಿರುವ ಪತ್ರವನ್ನು ಕೇಂದ್ರ ಕೃಷಿ ಸಚಿವಾಲಯ ದೆಹಲಿ ಚಲೋ ಚಳವಳಿ ನಡೆಸುತ್ತಿರುವ ರೈತ ಮುಖಂಡ ದರ್ಶನ್ ಪಾಲ್ ಅವರಿಗೆ ಸೋಮವಾರ ರವಾನಿಸಿದೆ.

ನಿಮ್ಮ ಹಿತಾಸಕ್ತಿಗಳ ಬಗ್ಗೆ ನೀವು ತಿಳಿಸಿದ ದಿನವೇ ವಿಜ್ಞಾನ ಭವನದಲ್ಲಿ ಚರ್ಚಿಸೋಣ, ದಯವಿಟ್ಟು ನಿಮಗೆ ಒಪ್ಪಿತವಾದ ದಿನಾಂಕವನ್ನು ತಿಳಿಸಿ ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ. ಅಲ್ಲದೇ, ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಒಂದೆರಡು ದಿನಗಳಲ್ಲಿ ಚಳವಳಿ ನಿರತರನ್ನು ಭೇಟಿಯಾಗಿ ಚರ್ಚಿಸಲಿದ್ದಾರೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಎರಡು ದಿನಗಳ ಪಶ್ಚಿಮ ಬಂಗಾಳ ಭೇಟಿಯ ವೇಳೆ ಪತ್ರಕರ್ತರನ್ನುದ್ದೇಶಿಸಿ ಅವರು ಈ ವಿಷಯ ತಿಳಿಸಿದ್ದಾರೆ.

ರೈತರಿಂದ ಉಪವಾಸ ಸತ್ಯಾಗ್ರಹ ಇತ್ತ, ಪಂಜಾಬ್ ರೈತರು ಮತ್ತೊಮ್ಮೆ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಸರದಿ ಪ್ರಕಾರ ಉಪವಾಸ ಸತ್ಯಾಗ್ರಹ ನಡೆಸಲಿದ್ದು, ಇಂದು 11 ರೈತರು ಉಪವಾಸ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ಬೇಡಿಕೆಗಳನ್ನು ಈಡೇರಿಸುವವರೆಗೂ ಉಪವಾಸ ಸತ್ಯಾಗ್ರಹ ಮುಂದುವರೆಯಲಿದೆ ಎಂದು ರೈತ ಒಕ್ಕೂಟಗಳು ತಿಳಿಸಿವೆ.

‘ಕೆಲವು ರೈತ ಸಂಘಟನೆಗಳು ನೂತನ ಕೃಷಿ ಕಾಯ್ದೆಗೆ ಬೆಂಬಲ ಸೂಚಿಸಿವೆ. ಅಂತಹ ಸಂಘಟನೆಗಳ ನಾಯಕರನ್ನು ಭೇಟಿಯಾಗಿ ನೂತನ ಕೃಷಿ ಕಾಯ್ದೆಗಳಿಂದ ಅವರು ಪಡೆಯಲಿರುವ ಲಾಭವಾದರೂ ಏನು, ಕೃಷಿ ಕಾಯ್ದೆಗಳು ಕೃಷಿಕರಿಗೆ ಹೇಗೆ ತಾನೇ ಉಪಯೋಗವಾಗಬಲ್ಲವು ಎಂದು ಅರಿಯುತ್ತೇವೆ’ ಎಂದು ಭಾರತೀಯ ಕಿಸಾನ್ ಯೂನಿಯನ್​ನ ಮಾಧ್ಯಮ ವಕ್ತಾರ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ವಿಶೇಷ ಅಧಿವೇಶನ ಕರೆದ ಕೇರಳ ಡಿಸೆಂಬರ್ 23ರಂದು ನೂತನ ಕೃಷಿ ಕಾಯ್ದೆಗಳ ಕುರಿತು ಚರ್ಚಿಸಲು ವಿಧಾನಸಭೆಯ ವಿಶೇಷ ಅಧಿವೇಶನ ಕರೆಯಲು ಕೇರಳ ಸರ್ಕಾರ ನಿರ್ಧರಿಸಿದೆ. ಕೇರಳ ಸರ್ಕಾರವು ರೈತರ ಹೋರಾಟಕ್ಕೆ ಬೆಂಬಲ ನೀಡಲಿದೆ. ವಿಶೇಷ ಅಧಿವೇಶನ ಕರೆಯುವ ಕುರಿತು ರಾಜ್ಯಪಾಲರಿಗೆ ಶಿಫಾರಸು ಮಾಡಲಾಗಿದೆ ಎಂದು ಕೇರಳ ರಾಜ್ಯ ಸರ್ಕಾರ ತಿಳಿಸಿದೆ.

ಮಹಾರಾಷ್ಟ್ರದ ನಾಸಿಕ್​ನಿಂದ ಸಾವಿರಾರು ರೈತರು ದೆಹಲಿ ಚಲೋ ಕೂಡಿಕೊಳ್ಳಲು ಹೊರಟಿದ್ದಾರೆ. ಮಹಾರಾಷ್ಟ್ರದ 21 ಜಿಲ್ಲೆಗಳ ರೈತರ ಮೆರವಣಿಗೆಯ ನೇತೃತ್ವವನ್ನು ಇಂಡಿಯನ್ ಕಿಸಾನ್ ಸಭಾ ವಹಿಸಿದೆ.

Inside Story ದೆಹಲಿ ಚಲೋ ರೈತ ಚಳವಳಿಯ ಪರ-ವಿರೋಧ ಚರ್ಚೆಯ ತಿರುಳೇನು?

Published On - 5:54 pm, Mon, 21 December 20

ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು