Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆಯನ್ನು ರಾಜ್ಯಗಳಿಗೆ ಉಚಿತವಾಗಿಯೇ ವಿತರಿಸುತ್ತಿದ್ದೇವೆ, ನಾವು ಸಂಸ್ಥೆಗಳಿಗೆ ಪಾವತಿಸುವ ಮೊತ್ತವೂ ಹೆಚ್ಚಳವಾಗಿಲ್ಲ: ಕೇಂದ್ರ ಸ್ಪಷ್ಟನೆ

ಭಾರತದಲ್ಲಿ ಲಭ್ಯವಿರುವ ಎರಡು ಕೊರೊನಾ ಲಸಿಕೆಗಳನ್ನೂ ಸರ್ಕಾರ ಪ್ರತಿ ಡೋಸ್​ಗೆ ₹150ರಂತೆ ಪಾವತಿಸಿ ಖರೀದಿಸುತ್ತಿದೆ. ಇದರಲ್ಲಿ ಯಾವುದೇ ಹೆಚ್ಚಳವಾಗಿಲ್ಲ. ನಾವು ಸಂಸ್ಥೆಯಿಂದ ಖರೀದಿ ಮಾಡಿದ ಲಸಿಕೆಯನ್ನು ರಾಜ್ಯ ಸರ್ಕಾರಗಳಿಗೆ ಸಂಪೂರ್ಣ ಉಚಿತವಾಗಿ ವಿವರಿಸುತ್ತಿದ್ಧೇವೆ.

ಕೊರೊನಾ ಲಸಿಕೆಯನ್ನು ರಾಜ್ಯಗಳಿಗೆ ಉಚಿತವಾಗಿಯೇ ವಿತರಿಸುತ್ತಿದ್ದೇವೆ, ನಾವು ಸಂಸ್ಥೆಗಳಿಗೆ ಪಾವತಿಸುವ ಮೊತ್ತವೂ ಹೆಚ್ಚಳವಾಗಿಲ್ಲ: ಕೇಂದ್ರ ಸ್ಪಷ್ಟನೆ
ಕೋವಿಶೀಲ್ಡ್ ಲಸಿಕೆ
Follow us
Skanda
|

Updated on: Apr 24, 2021 | 11:59 AM

ದೆಹಲಿ: ದೇಶದಲ್ಲಿ ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು, ಹಲವು ರಾಜ್ಯಗಳಲ್ಲಿ ವೈದ್ಯಕೀಯ ಸೌಲಭ್ಯಗಳ ಅಭಾವ ಉಂಟಾಗಿದೆ. ಏತನ್ಮಧ್ಯೆ ಕೊರೊನಾ ಲಸಿಕೆಯ ಕೊರತೆಯೂ ತಲೆದೋರಿರುವುದು ಚಿಂತೆಗೆ ಕಾರಣವಾಗಿದೆ. ಇಂತಹ ಸಂದರ್ಭದಲ್ಲೇ ಕೊರೊನಾ ಲಸಿಕೆ ಬೆಲೆಯನ್ನು ಸಂಸ್ಥೆಗಳು ಹೆಚ್ಚಿಸಿವೆ ಎನ್ನುವ ಮಾತುಗಳು ಕೇಳಿಬಂದಿತ್ತು. ಈ ಹಿಂದೆ ಸರ್ಕಾರ ಒಂದು ಡೋಸ್ ಕೊರೊನಾ ಲಸಿಕೆಗೆ ₹150 ನೀಡುತ್ತಿದ್ದು ಅದನ್ನು ₹400ಕ್ಕೆ ಏರಿಸಲಾಗುತ್ತಿದೆ ಎನ್ನಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಧ್ವನಿ ಎತ್ತಿದ್ದ ಕಾಂಗ್ರೆಸ್​ ಪಕ್ಷದ ಹಿರಿಯ ನಾಯಕ ಜೈರಾಮ್ ರಮೇಶ್, ಭಾರತದಲ್ಲಿ ಒಂದು ಡೋಸ್ ಕೊರೊನಾ ಲಸಿಕೆಗೆ ಸರ್ಕಾರ ₹400 ನೀಡಬೇಕಾಗಿ ಬಂದಿದೆ. ಇದು ಉಳಿದೆಲ್ಲಾ ದೇಶಗಳ ಸರ್ಕಾರ ಪಾವತಿಸುತ್ತಿರುವುದಕ್ಕಿಂತಲೂ ಅಧಿಕವಾಗಿದೆ ಎಂದು ಟ್ವೀಟ್ ಮಾಡಿದ್ದರು. ಆದರೆ, ಇದೀಗ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇದಕ್ಕೆ ಸ್ಪಷ್ಟನೆ ನೀಡಿದೆ.

ಭಾರತದಲ್ಲಿ ಲಭ್ಯವಿರುವ ಎರಡು ಕೊರೊನಾ ಲಸಿಕೆಗಳನ್ನೂ ಸರ್ಕಾರ ಪ್ರತಿ ಡೋಸ್​ಗೆ ₹150ರಂತೆ ಪಾವತಿಸಿ ಖರೀದಿಸುತ್ತಿದೆ. ಇದರಲ್ಲಿ ಯಾವುದೇ ಹೆಚ್ಚಳವಾಗಿಲ್ಲ. ನಾವು ಸಂಸ್ಥೆಯಿಂದ ಖರೀದಿ ಮಾಡಿದ ಲಸಿಕೆಯನ್ನು ರಾಜ್ಯ ಸರ್ಕಾರಗಳಿಗೆ ಸಂಪೂರ್ಣ ಉಚಿತವಾಗಿ ವಿವರಿಸುತ್ತಿದ್ಧೇವೆ. ಇನ್ನು ಮುಂದೆಯೂ ಉಚಿತವಾಗಿಯೇ ವಿತರಿಸಲಾಗುವುದು. ಈ ವಿಚಾರದಲ್ಲಿ ಗೊಂದಲ ಬೇಡ ಎಂದು ಸ್ಪಷ್ಟೀಕರಿಸಿದೆ.

ಈ ನಡುವೆ, ಕೊರೊನಾ ಲಸಿಕೆಯನ್ನು ಖಾಸಗಿ ಆಸ್ಪತ್ರೆಗಳಲ್ಲಿ ಕೊಳ್ಳುವುದಾದರೆ ₹600 ನೀಡಬೇಕು ಎಂದು ಸ್ವತಃ ಸೆರಮ್​ ಸಂಸ್ಥೆಯ ಮುಖ್ಯಸ್ಥರೇ ಹೇಳಿದ್ದು, ಆ ಕುರಿತಾಗಿ ಯಾವುದೇ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.

ಇದನ್ನೂ ಓದಿ: 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ; ಆನ್‌ಲೈನ್‌ ನೋಂದಣಿಗೆ ಅವಕಾಶ, ಇಲ್ಲಿದೆ ವಿವರ 

ಮೇ 1 ರ ನಂತರ ಕೊವಿಶೀಲ್ಡ್​ ದರ ಬದಲು, ಕೇಂದ್ರಕ್ಕೆ ರೂ 150, ರಾಜ್ಯಗಳಿಗೆ ರೂ 400, ಖಾಸಗಿ ಆಸ್ಪತ್ರೆಗಳಿಗೆ ರೂ 600 ಕ್ಕೆ ಲಸಿಕೆ ಮಾರಾಟ

ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು