AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

124 ಸಿಖ್ ರೆಜಿಮೆಂಟ್​ನಲ್ಲಿ ಕ್ಯಾಪ್ಟನ್ ಆಗಿ ಪದೋನ್ನತಿ ಹೊಂದಿದ ಕೇಂದ್ರ ಸಚಿವ ಅನುರಾಗ್ ಠಾಕೂರ್

ಕ್ಯಾಪ್ಟನ್ ಆಗಿ ಹುದ್ದೆ ಅಲಂಕರಿಸಿರುವ ಸಂಸದ ಅನುರಾಗ್ ಠಾಕೂರ್, ಸಂಸತ್​ ಸದಸ್ಯನಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದೇನೆ. ಅಲ್ಲದೆ ಸೇನೆ ಬಯಸಿದ ಯಾವುದೇ ಕ್ಷಣ ಸೇವೆ ಸಲ್ಲಿಸಲೂ ಸಿದ್ಧ ಎಂದು ತಿಳಿಸಿದ್ದಾರೆ.

124 ಸಿಖ್ ರೆಜಿಮೆಂಟ್​ನಲ್ಲಿ ಕ್ಯಾಪ್ಟನ್ ಆಗಿ ಪದೋನ್ನತಿ ಹೊಂದಿದ ಕೇಂದ್ರ ಸಚಿವ ಅನುರಾಗ್ ಠಾಕೂರ್
ಕ್ಯಾಪ್ಟನ್ ಆಗಿ ಪದೋನ್ನತಿ ಹೊಂದಿರುವ ಸಂಸದ ಅನುರಾಗ್ ಠಾಕೂರ್ (ಚಿತ್ರಕೃಪೆ: ಟ್ವಿಟರ್)
guruganesh bhat
| Edited By: |

Updated on: Mar 11, 2021 | 1:11 PM

Share

ದೆಹಲಿ: ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ನೂತನ ಅಭಿದಾನಕ್ಕೆ ಪಾತ್ರರಾಗಿದ್ದಾರೆ. ಸಚಿವ ಮತ್ತು ಸಂಸದರಾಗಿದ್ದಾಗಲೇ ಭೂಸೇನೆಯಲ್ಲಿ ಗೌರವ ಕ್ಯಾಪ್ಟನ್ ಆಗಿ ಪದೋನ್ನತಿ ಹೊಂದಿದ್ದಾರೆ. ಹಿಮಾಚಲ ಪ್ರದೇಶದ ಹಮಿರ್ಪುರ್ ಕ್ಷೇತ್ರದ ಸಂಸದ ಅನುರಾಗ್ ಠಾಕೂರ್ ಅವರು ಇದೀಗ 124 ಸಿಖ್ ರೆಜಿಮೆಂಟ್​ನಲ್ಲಿ ಕ್ಯಾಪ್ಟನ್ ಗೌರವಕ್ಕೆ ಪಾತ್ರವಾಗಿದ್ದಾರೆ. 2016ರ ಜೂನ್​ನಿಂದಲೇ ಗೌರವ  ಲೆಫ್ಟಿನೆಂಟ್ ಹುದ್ದೆ ನಿರ್ವಹಿಸುತ್ತಿದ್ದ ಅವರು ಇದೀಗ ಪದೋನ್ನತಿ ಹೊಂದಿದ್ದಾರೆ.

ಈ ಕುರಿತು ಹರ್ಷ ವ್ಯಕ್ತಪಡಿಸಿರುವ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ‘ಲೆಫ್ಟಿನೆಂಟ್ ಪದವಿಯಿಂದ ಕ್ಯಾಪ್ಟನ್ ಹುದ್ದೆಗೆ ಪದೋನ್ನತಿ ಹೊಂದುತ್ತಿರುವುದು ಖುಷಿಯ ಸಂಗತಿ. ಮಾತೃಭೂಮಿಗೆ ಸೇವೆ ಸಲ್ಲಿಸಲು ಸೈನ್ಯದಲ್ಲಿ ಇನ್ನೂ ಹೆಚ್ಚಿನ ಅವಕಾಶ ದೊರೆತಿರುವುದು ಅತ್ಯಂತ ಹೆಮ್ಮೆಯ ಸಂಗತಿ. ದೇಶದ ಕುರಿತು ನನ್ನ ಅಭಿಮಾನ ಮತ್ತು ಸೇವಾ ಮನೋಭಾವವನ್ನು ಇನ್ನೂ ಹೆಚ್ಚಿಸಿಕೊಳ್ಳುತ್ತೇನೆ’ ಎಂದು ತಿಳಿಸಿದ್ದಾರೆ.

ದೇವಭೂಮಿ ಹಿಮಾಚಲ ಪ್ರದೇಶದಲ್ಲಿ ಬಹು ಹಿಂದಿನಿಂದಲೂ ಸೇನೆಗೆ ಸೇರಿ ಸೇವೆ ಸಲ್ಲಿಸುವ ಪದ್ಧತಿಯಿದೆ. ನಮ್ಮ ಹಿರಿಯರು ಅನುಸರಿಸಿಕೊಂಡು ಬಂದಿರುವ ಈ ಪದ್ಧತಿಯನ್ನು ನಾನು ಮುಂದುವರೆಸಿಕೊಂಡು ಹೋಗಬಯಸುತ್ತೇನೆ. ಈ ಅವಕಾಶ ನನಗೆ ದೊರೆತಿರುವುದು ಸಹಜವಾಗಿ ಸಂತಸ ತಂದಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ ಕ್ಯಾಪ್ಟನ್ ಆಗಿ ಹುದ್ದೆ ಅಲಂಕರಿಸಿರುವ ಸಂಸದ ಅನುರಾಗ್ ಠಾಕೂರ್, ಸಂಸತ್​ ಸದಸ್ಯನಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದೇನೆ. ಅಲ್ಲದೆ ಸೇನೆ ಬಯಸಿದಾಗ ಯಾವುದೇ ಕ್ಷಣ ಸೇವೆ ಸಲ್ಲಿಸಲೂ ಸಿದ್ಧ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Explainer | Arjun Mark 1A Tank: ಭೂಸೇನೆಗೆ ಅರ್ಜುನ್​ ಟ್ಯಾಂಕ್ ಸೇರ್ಪಡೆ: ಏನು ವೈಶಿಷ್ಟ್ಯ? ಏಕೆ ಮುಖ್ಯ?

Parliament: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಬಜೆಟ್​ನಿಂದ ಬಡವರ ಬದುಕು ಸುಧಾರಣೆ: ಅನುರಾಗ್ ಠಾಕೂರ್

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ