AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

124 ಸಿಖ್ ರೆಜಿಮೆಂಟ್​ನಲ್ಲಿ ಕ್ಯಾಪ್ಟನ್ ಆಗಿ ಪದೋನ್ನತಿ ಹೊಂದಿದ ಕೇಂದ್ರ ಸಚಿವ ಅನುರಾಗ್ ಠಾಕೂರ್

ಕ್ಯಾಪ್ಟನ್ ಆಗಿ ಹುದ್ದೆ ಅಲಂಕರಿಸಿರುವ ಸಂಸದ ಅನುರಾಗ್ ಠಾಕೂರ್, ಸಂಸತ್​ ಸದಸ್ಯನಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದೇನೆ. ಅಲ್ಲದೆ ಸೇನೆ ಬಯಸಿದ ಯಾವುದೇ ಕ್ಷಣ ಸೇವೆ ಸಲ್ಲಿಸಲೂ ಸಿದ್ಧ ಎಂದು ತಿಳಿಸಿದ್ದಾರೆ.

124 ಸಿಖ್ ರೆಜಿಮೆಂಟ್​ನಲ್ಲಿ ಕ್ಯಾಪ್ಟನ್ ಆಗಿ ಪದೋನ್ನತಿ ಹೊಂದಿದ ಕೇಂದ್ರ ಸಚಿವ ಅನುರಾಗ್ ಠಾಕೂರ್
ಕ್ಯಾಪ್ಟನ್ ಆಗಿ ಪದೋನ್ನತಿ ಹೊಂದಿರುವ ಸಂಸದ ಅನುರಾಗ್ ಠಾಕೂರ್ (ಚಿತ್ರಕೃಪೆ: ಟ್ವಿಟರ್)
guruganesh bhat
| Updated By: ರಶ್ಮಿ ಕಲ್ಲಕಟ್ಟ|

Updated on: Mar 11, 2021 | 1:11 PM

Share

ದೆಹಲಿ: ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ನೂತನ ಅಭಿದಾನಕ್ಕೆ ಪಾತ್ರರಾಗಿದ್ದಾರೆ. ಸಚಿವ ಮತ್ತು ಸಂಸದರಾಗಿದ್ದಾಗಲೇ ಭೂಸೇನೆಯಲ್ಲಿ ಗೌರವ ಕ್ಯಾಪ್ಟನ್ ಆಗಿ ಪದೋನ್ನತಿ ಹೊಂದಿದ್ದಾರೆ. ಹಿಮಾಚಲ ಪ್ರದೇಶದ ಹಮಿರ್ಪುರ್ ಕ್ಷೇತ್ರದ ಸಂಸದ ಅನುರಾಗ್ ಠಾಕೂರ್ ಅವರು ಇದೀಗ 124 ಸಿಖ್ ರೆಜಿಮೆಂಟ್​ನಲ್ಲಿ ಕ್ಯಾಪ್ಟನ್ ಗೌರವಕ್ಕೆ ಪಾತ್ರವಾಗಿದ್ದಾರೆ. 2016ರ ಜೂನ್​ನಿಂದಲೇ ಗೌರವ  ಲೆಫ್ಟಿನೆಂಟ್ ಹುದ್ದೆ ನಿರ್ವಹಿಸುತ್ತಿದ್ದ ಅವರು ಇದೀಗ ಪದೋನ್ನತಿ ಹೊಂದಿದ್ದಾರೆ.

ಈ ಕುರಿತು ಹರ್ಷ ವ್ಯಕ್ತಪಡಿಸಿರುವ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ‘ಲೆಫ್ಟಿನೆಂಟ್ ಪದವಿಯಿಂದ ಕ್ಯಾಪ್ಟನ್ ಹುದ್ದೆಗೆ ಪದೋನ್ನತಿ ಹೊಂದುತ್ತಿರುವುದು ಖುಷಿಯ ಸಂಗತಿ. ಮಾತೃಭೂಮಿಗೆ ಸೇವೆ ಸಲ್ಲಿಸಲು ಸೈನ್ಯದಲ್ಲಿ ಇನ್ನೂ ಹೆಚ್ಚಿನ ಅವಕಾಶ ದೊರೆತಿರುವುದು ಅತ್ಯಂತ ಹೆಮ್ಮೆಯ ಸಂಗತಿ. ದೇಶದ ಕುರಿತು ನನ್ನ ಅಭಿಮಾನ ಮತ್ತು ಸೇವಾ ಮನೋಭಾವವನ್ನು ಇನ್ನೂ ಹೆಚ್ಚಿಸಿಕೊಳ್ಳುತ್ತೇನೆ’ ಎಂದು ತಿಳಿಸಿದ್ದಾರೆ.

ದೇವಭೂಮಿ ಹಿಮಾಚಲ ಪ್ರದೇಶದಲ್ಲಿ ಬಹು ಹಿಂದಿನಿಂದಲೂ ಸೇನೆಗೆ ಸೇರಿ ಸೇವೆ ಸಲ್ಲಿಸುವ ಪದ್ಧತಿಯಿದೆ. ನಮ್ಮ ಹಿರಿಯರು ಅನುಸರಿಸಿಕೊಂಡು ಬಂದಿರುವ ಈ ಪದ್ಧತಿಯನ್ನು ನಾನು ಮುಂದುವರೆಸಿಕೊಂಡು ಹೋಗಬಯಸುತ್ತೇನೆ. ಈ ಅವಕಾಶ ನನಗೆ ದೊರೆತಿರುವುದು ಸಹಜವಾಗಿ ಸಂತಸ ತಂದಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ ಕ್ಯಾಪ್ಟನ್ ಆಗಿ ಹುದ್ದೆ ಅಲಂಕರಿಸಿರುವ ಸಂಸದ ಅನುರಾಗ್ ಠಾಕೂರ್, ಸಂಸತ್​ ಸದಸ್ಯನಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದೇನೆ. ಅಲ್ಲದೆ ಸೇನೆ ಬಯಸಿದಾಗ ಯಾವುದೇ ಕ್ಷಣ ಸೇವೆ ಸಲ್ಲಿಸಲೂ ಸಿದ್ಧ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Explainer | Arjun Mark 1A Tank: ಭೂಸೇನೆಗೆ ಅರ್ಜುನ್​ ಟ್ಯಾಂಕ್ ಸೇರ್ಪಡೆ: ಏನು ವೈಶಿಷ್ಟ್ಯ? ಏಕೆ ಮುಖ್ಯ?

Parliament: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಬಜೆಟ್​ನಿಂದ ಬಡವರ ಬದುಕು ಸುಧಾರಣೆ: ಅನುರಾಗ್ ಠಾಕೂರ್

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!