AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಉನ್ನತ ಮಟ್ಟದ ಸಭೆ; ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಭಾಗಿ

ಸಾರ್ಥಕ್ಯೂ ಬದಲಾಗುತ್ತಿರುವ ಮತ್ತು ಕಾರ್ಯ ವಿಧಾನ ದಾಖಲೆಯನ್ನಾಗಿ ಸಿದ್ಧಪಡಿಸಲಾಗಿದ್ದು ಮತ್ತು ಅದು ವಿಸ್ತೃತವಾಗಿ ಸಲಹಾತ್ಮಕ ಮತ್ತು ಸೂಚಕ ಸ್ವರೂಪವನ್ನು ಹೊಂದಿದೆ.  ಅದನ್ನು ಭಾಗಿದಾರರಿಂದ ಲಭ್ಯವಾಗುವ ಮಾಹಿತಿ/ಪ್ರತಿಕ್ರಿಯೆಗಳನ್ನು ಸ್ವೀಕರಿಸಿ ಕಾಲಕಾಲಕ್ಕೆ ಪರಿಷ್ಕರಿಸಲಾಗುವುದು ಎಂದು ಅವರು ಹೇಳಿದರು.

ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಉನ್ನತ ಮಟ್ಟದ ಸಭೆ; ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಭಾಗಿ
ಸಚಿವ ರಮೇಶ್​ ಪೋಖ್ರಿಯಾಲ್
guruganesh bhat
|

Updated on:Apr 10, 2021 | 3:18 PM

Share

ದೆಹಲಿ: ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಎನ್ಇಪಿ 2020 ಜಾರಿ ಕುರಿತು ಉನ್ನತ ಮಟ್ಟದ ಸಭೆ ನಡೆಯಿತು. ಉನ್ನತ ಶಿಕ್ಷಣ ಕಾರ್ಯದರ್ಶಿ ಅಮಿತ್ ಖರೆ, ಶಾಲಾ ಶಿಕ್ಷಣ ಕಾರ್ಯದರ್ಶಿ ಅನಿತಾ ಕರ್ವಾಲ್ ಮತ್ತು ಸಚಿವಾಲಯದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್, ‘ಶಾಲಾ ಶಿಕ್ಷಣ ವಲಯದಲ್ಲಿ ಪರಿವರ್ತನಾತ್ಮಕ ಸುಧಾರಣೆಗಳನ್ನು ಕೈಗೊಳ್ಳಲು ಈ ಯೋಜನೆಯನ್ನು ಮಾರ್ಗದರ್ಶಕವನ್ನಾಗಿ ಬಳಸಿಕೊಳ್ಳಬೇಕು. ನೂತನ ಶಿಕ್ಷಣ ನೀತಿಯಂತೆ ಈ ಯೋಜನೆ ಕೂಡ ಸಂವಾದಾತ್ಮಕ, ಹೊಂದಿಕೊಳ್ಳುವ ಮತ್ತು ಎಲ್ಲವನ್ನೂ ಒಳಗೊಂಡಿದೆ ಎಂದು ಅವರು ಹೇಳಿದರು.

ಸಾರ್ಥಕ್ಯೂನಲ್ಲಿ ಪ್ರಮುಖವಾಗಿ ಗುರಿಗಳು, ಫಲಿತಾಂಶ ಮತ್ತು ಸಮಯದ ಚೌಕಟ್ಟುಗಳನ್ನು ವ್ಯಾಖ್ಯಾನಿಸಲಾಗಿದ್ದು, ಅಂದರೆ ಅದನ್ನು ಎನ್ಇಪಿಯ ಶಿಫಾರಸ್ಸುಗಳ ಜೊತೆ ಜೋಡಣೆ ಮಾಡಲಾಗಿದ್ದು, 297 ಕಾರ್ಯಗಳೊಂದಿಗೆ, ಜವಾಬ್ದಾರಿಯುತ ಸಂಸ್ಥೆಗಳೂ ಸೇರಿ 304 ಫಲಿತಾಂಶಗಳೊಂದಿಗೆ ಬೆಸೆಯಲಾಗಿದೆ. ಯಾವ ವಿಧದಲ್ಲಿ ಉದ್ದೇಶಿತ ಚಟುವಟಿಕೆಗಳನ್ನು ಕೈಗೊಳ್ಳಬೇಕು ಎಂಬ ಪ್ರಯತ್ನಗಳನ್ನು ಮಾಡಲಾಗಿದೆ. ಅದರಿಂದಾಗಿ ಹೊಸ ವ್ಯವಸ್ಥೆಯನ್ನು ಸೃಷ್ಟಿಸುವ ಬದಲು ಹಾಲಿ ಇರುವ ವ್ಯವಸ್ಥೆಯಲ್ಲೇ ಅವುಗಳನ್ನು ಮುಂದುವರಿಸಿಕೊಂಡು ಹೋಗಬಹುದಾಗಿದೆ. ಹಾಗಾಗಿ ಸಾರ್ಥಕ್ಯೂ ನೀತಿಯ ಉದ್ದೇಶ ಮತ್ತು ಸ್ಫೂರ್ತಿಯ ಬಗ್ಗೆ ನೋಡಿಕೊಳ್ಳಲಿದೆ ಮತ್ತು ಅದನ್ನು ಹಂತ ಹಂತವಾಗಿ ಅನುಷ್ಠಾನಗೊಳಿಸಲು ಯೋಜಿಸಲಾಗಿದೆ. ಸಾರ್ಥಕ್ಯೂ ಬದಲಾಗುತ್ತಿರುವ ಮತ್ತು ಕಾರ್ಯ ವಿಧಾನ ದಾಖಲೆಯನ್ನಾಗಿ ಸಿದ್ಧಪಡಿಸಲಾಗಿದ್ದು ಮತ್ತು ಅದು ವಿಸ್ತೃತವಾಗಿ ಸಲಹಾತ್ಮಕ ಮತ್ತು ಸೂಚಕ ಸ್ವರೂಪವನ್ನು ಹೊಂದಿದೆ.  ಅದನ್ನು ಭಾಗಿದಾರರಿಂದ ಲಭ್ಯವಾಗುವ ಮಾಹಿತಿ/ಪ್ರತಿಕ್ರಿಯೆಗಳನ್ನು ಸ್ವೀಕರಿಸಿ ಕಾಲಕಾಲಕ್ಕೆ ಪರಿಷ್ಕರಿಸಲಾಗುವುದು ಎಂದು ಅವರು ಹೇಳಿದರು.

2020ರ ಜುಲೈ 20ರಂದು ಹೊರಡಿಸಲಾಗಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿ(ಎನ್ಇಪಿ) 2020ಯ ಗುರಿ ಮತ್ತು ಧ್ಯೇಯೋದ್ದೇಶಗಳಿಗೆ ಅನುಗುಣವಾಗಿ ಮತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈ ಕಾರ್ಯದಲ್ಲಿ ನೆರವು ನೀಡಲು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಗುಣಮಟ್ಟದ ಶಿಕ್ಷಣದ ಮೂಲಕ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಸಮಗ್ರ ಪ್ರಗತಿ(ಸಾರ್ಥಕ್ಯೂ) ಶಾಲಾ ಶಿಕ್ಷಣ ಸಲಹಾತ್ಮಕ ಅನುಷ್ಠಾನ ಯೋಜನೆಯನ್ನು ಅಭಿವೃದ್ಧಿಪಡಿಸಿದೆ. ಈ ಅನುಷ್ಠಾನ ಯೋಜನೆಯನ್ನು ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಬಿಡುಗಡೆ ಮಾಡಿದರು. ಭಾರತದ ಸ್ವಾತಂತ್ರ್ಯೋತ್ಸವದ 75 ವರ್ಷಗಳ ಅಮೃತ ಮಹೋತ್ಸವ ಆಚರಣೆಯ ಭಾಗವಾಗಿ ಇದನ್ನು ಸಿದ್ಧಪಡಿಸಲಾಗಿದೆ.

ಈ ಯೋಜನೆಯನ್ನು ಶಿಕ್ಷಣ ಸಮವರ್ತಿ ಪಟ್ಟಿಯಲ್ಲಿರುವ ಸ್ವರೂಪವನ್ನು ಮತ್ತು ಒಕ್ಕೂಟ ವ್ಯವಸ್ಥೆಯ ಆಶಯಗಳನ್ನು ಗಮನದಲ್ಲಿರಿಸಿಕೊಂಡು ರೂಪಿಸಲಾಗಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈ ಯೋಜನೆಯನ್ನು ಸ್ಥಳೀಯ ಪರಿಸ್ಥಿತಿಗೆ ತಕ್ಕಂತೆ ಬದಲಾಯಿಸಿಕೊಂಡು ಮತ್ತು ತಮ್ಮ ಅಗತ್ಯಗಳಿಗೆ ಅನುಗುಣವಾಗಿ ಮಾರ್ಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈ ಯೋಜನೆಯ ಅನುಷ್ಠಾನ, ಮುಂದಿನ 10 ವರ್ಷಗಳವರೆಗೆ ಎನ್ಇಪಿ ಜಾರಿಯ ಮಾರ್ಗಸೂಚಿಯನ್ನು ಹಾಕಿಕೊಡುತ್ತದೆ ಮತ್ತು ಯೋಜನೆಯ ಸುಗಮ ಮತ್ತು ಪರಿಣಾಮಕಾರಿ ಅನುಷ್ಠಾನಕ್ಕೆ ಇದು ಅತ್ಯಂತ ಮಹತ್ವದ್ದಾಗಿದೆ.

ಸಾರ್ಥಕ್ಯೂ ಅನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು, ಸ್ವಾಯತ್ತ ಸಂಸ್ಥೆಗಳ ಜೊತೆ ವ್ಯಾಪಕ ಮತ್ತು ವಿಸ್ತೃತ ಸಮಾಲೋಚನೆ ಪ್ರಕ್ರಿಯೆ ಬಳಿಕ ಅಭಿವೃದ್ಧಿಪಡಿಸಲಾಗಿದ್ದು, ಅದಕ್ಕೆ ಎಲ್ಲ ಭಾಗೀದಾರರಿಂದ ಸಲಹೆಗಳನ್ನು ಸ್ವೀಕರಿಸಲಾಗಿತ್ತು. ಅವರುಗಳಿಂದ ಸುಮಾರು 7177 ಸಲಹೆ ಅಥವಾ ಮಾಹಿತಿಗಳನ್ನು ಸ್ವೀಕರಿಸಲಾಗಿತ್ತು. ಎನ್ಇಪಿ 2020 ನಾನಾ ಶಿಫಾರಸ್ಸುಗಳ ಕುರಿತು ಚರ್ಚಿಸಲು ಮತ್ತು ಅವುಗಳ ಅನುಷ್ಠಾನ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ವಿಶೇಷವಾಗಿ ಶಿಕ್ಷಕರ ಉತ್ಸವ “ಶಿಕ್ಷಕ ಪರ್ವ”ವನ್ನು 2020ರ ಸೆಪ್ಟೆಂಬರ್ 8 ರಿಂದ 25ರ ವರೆಗೆ ಆಯೋಜಿಸಲಾಗಿತ್ತು. ಅದರಲ್ಲಿ ಸುಮಾರು 15 ಲಕ್ಷ ಸಲಹೆಗಳನ್ನು ಸ್ವೀಕರಿಸಲಾಗಿತ್ತು.

ಇದನ್ನೂ ಓದಿ: ಕೊವಿಡ್ ಲಸಿಕೆ ಕೊರತೆ: ಮಹಾರಾಷ್ಟ್ರಕ್ಕೆ 17 ಲಕ್ಷ ಡೋಸ್ ಕಳುಹಿಸಲು ಕೇಂದ್ರ ಸರ್ಕಾರ ನಿರ್ಧಾರ

India Coronavirus Update: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1,30,60,542 ಕೊರೊನಾ ಸೋಂಕಿತರು ಪತ್ತೆ; 780 ಜನರು ಸಾವು

(Central Minister Ramesh Pokhriyal attend National Education Policy meeting in Delhi)

Published On - 12:05 pm, Fri, 9 April 21

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು