Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹತ್ವದ ನೂತನ ಸಂಸತ್​ ಭವನ ‘ಸೆಂಟ್ರಲ್ ವಿಸ್ತಾ’ ನಿರ್ಮಾಣಕ್ಕೆ ಸುಪ್ರಿಂ ಕೋರ್ಟ್ ಅಸ್ತು!

ನೂತನ ಸಂಸತ್ ಭವನ ನಿರ್ಮಾಣದ ಸೆಂಟ್ರಲ್ ವಿಸ್ತಾ ಯೋಜನೆಗೆ ಸುಪ್ರೀಂಕೋರ್ಟ್ ಕೆಲವು ಷರತ್ತುಗಳೊಂದಿಗೆ ಹಸಿರು ನಿಶಾನೆ ಸೂಚಿಸಿದೆ.

ಮಹತ್ವದ ನೂತನ ಸಂಸತ್​ ಭವನ ‘ಸೆಂಟ್ರಲ್ ವಿಸ್ತಾ’ ನಿರ್ಮಾಣಕ್ಕೆ ಸುಪ್ರಿಂ ಕೋರ್ಟ್ ಅಸ್ತು!
ಕಲಾವಿದನ ಕಲ್ಪನೆಯಲ್ಲಿ ಹೊಸ ಸಂಸತ್ತಿನ ಹೊರಾಂಗಣ
Follow us
guruganesh bhat
|

Updated on:Jan 05, 2021 | 11:54 AM

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ನೂತನ ಸಂಸತ್ ಭವನ ನಿರ್ಮಾಣದ ಸಲುವಾಗಿ ಸೆಂಟ್ರಲ್ ವಿಸ್ತಾ ಯೋಜನೆಗೆ ಸುಪ್ರೀಂ ಕೋರ್ಟ್ ಕೆಲವು ಷರತ್ತುಗಳೊಂದಿಗೆ ಹಸಿರು ನಿಶಾನೆ ನೀಡಿದೆ.

ಯೋಜನೆ ಜಾರಿ ಸಂಬಂಧ ಕೇಂದ್ರ ಪರಿಸರ ಮಂಡಳಿ ನೀಡಿದ್ದ ಒಪ್ಪಿಗೆಯನ್ನು ಸರ್ವೋಚ್ಛ ನ್ಯಾಯಾಲಯ ಎತ್ತಿ ಹಿಡಿದಿದೆ.  ನ್ಯಾಯಾಧೀಶ ಎಂ.ಎಂ. ಖಾನ್​ವಿಲ್ಕರ್ ನೇತೃತ್ವದ ತ್ರಿಸದಸ್ಯ ಪೀಠ ನೀಡಿರುವ ಈ ಅದೇಶದಿಂದ  ನೂತನ ಸಂಸತ್‌ ಭವನ ನಿರ್ಮಾಣಕ್ಕೆ ಇದ್ದ ಅಡೆ ತಡೆಗಳು ದೂರವಾಗಿವೆ.

ಪಾರಂಪರಿಕ ಸಂರಕ್ಷಣಾ ಸಮಿತಿಯ ಒಪ್ಪಿಗೆ ಪಡೆದು ಸಂಸತ್ ಭವನದ ನಿರ್ಮಾಣ ಕಾಮಗಾರಿ ಆರಂಭಿಸಬಹುದು. ಸೆಂಟ್ರಲ್ ವಿಸ್ತಾ ಯೋಜನೆಗೆ ಪರಿಸರ ಇಲಾಖೆ ಒಪ್ಪಿಗೆ ನೀಡಿದ್ದರಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದೂ ನ್ಯಾಯಪೀಠ ತಿಳಿಸಿದೆ.

ಕೇಂದ್ರೀಯ ಕಾರ್ಯದರ್ಶಿಗಳ ಕಟ್ಟಡ ಸೇರಿ ಹಲವು ಕಟ್ಟಡಗಳನ್ನೊಳಗೊಂಡ ಸೆಂಟ್ರಲ್ ವಿಸ್ತಾ ಯೋಜನೆಯನ್ನು 2019ರ ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರ ಘೋಷಣೆ ಮಾಡಿತ್ತು. 2020ರ ಡಿ. 10ರಂದು ಪ್ರಧಾನಿ ಮೋದಿ ಶಿಲಾನ್ಯಾಸ ಮಾಡಿ, ₹971 ಕೋಟಿ ವೆಚ್ಚದ ಸಂಸತ್ ಕಟ್ಟಡಕ್ಕೆ ಅಡಿಗಲ್ಲು ಹಾಕಿದ್ದರು.

ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಭಾಗ್ಯ ನನ್ನದಾಯಿತಲ್ಲ; ಸುಮಲತಾ ಅಂಬರೀಶ್​ ಹೀಗೆ ಹೇಳಿದ್ದೇಕೆ?

Photo Gallery | ಹೇಗಿತ್ತು ಗೊತ್ತಾ ಹೊಸ ಸಂಸತ್ತು ಶಂಕುಸ್ಥಾಪನಾ ಕಾರ್ಯಕ್ರಮ

Published On - 11:09 am, Tue, 5 January 21

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !