AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಹ ಪೀಡಿತ 14 ರಾಜ್ಯಗಳಿಗೆ ₹ 5,858 ಕೋಟಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

ಕೇರಳಕ್ಕೆ ₹ 145.60 ಕೋಟಿ, ಮಣಿಪುರಕ್ಕೆ ₹ 50 ಕೋಟಿ, ಮಿಜೋರಾಂಗೆ ₹ 21.60 ಕೋಟಿ, ನಾಗಾಲ್ಯಾಂಡ್‌ಗೆ ₹ 19.20 ಕೋಟಿ, ಸಿಕ್ಕಿಂಗೆ ₹ 23.60 ಕೋಟಿ, ತೆಲಂಗಾಣಕ್ಕೆ ₹ 416.80 ಕೋಟಿ, ತ್ರಿಪುರಾಕ್ಕೆ ₹ 25 ಕೋಟಿ, ಪಶ್ಚಿಮ ಬಂಗಾಳಕ್ಕೆ ₹ 468 ಎಂದು ಎಂಎಚ್‌ಎ ಹೇಳಿಕೆ ತಿಳಿಸಿದೆ. ಈ ವರ್ಷ ನೈಋತ್ಯ ಮಾನ್ಸೂನ್ ಸಮಯದಲ್ಲಿ ಈ ರಾಜ್ಯಗಳು ಅತಿ ಹೆಚ್ಚು ಮಳೆ, ಪ್ರವಾಹ ಮತ್ತು ಭೂಕುಸಿತದಿಂದ ಪ್ರಭಾವಿತವಾಗಿವೆ ಎಂದು ಸಚಿವಾಲಯ ಹೇಳಿದೆ.

ಪ್ರವಾಹ ಪೀಡಿತ 14 ರಾಜ್ಯಗಳಿಗೆ ₹ 5,858 ಕೋಟಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ
ಬಿಹಾರದಲ್ಲಿನ ಪ್ರವಾಹ
ರಶ್ಮಿ ಕಲ್ಲಕಟ್ಟ
|

Updated on: Oct 01, 2024 | 9:01 PM

Share

ದೆಹಲಿ ಅಕ್ಟೋಬರ್ 01 : ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ (ಎಸ್‌ಡಿಆರ್‌ಎಫ್) ಕೇಂದ್ರ ಸರ್ಕಾರದ ಪಾಲು ಮತ್ತು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿಯಿಂದ (ಎನ್‌ಡಿಆರ್‌ಎಫ್) ಮುಂಗಡವಾಗಿ 14 ಪ್ರವಾಹ ಪೀಡಿತ ರಾಜ್ಯಗಳಿಗೆ ಕೇಂದ್ರ ಸರ್ಕಾರ ಮಂಗಳವಾರ ₹ 5,858.60 ಕೋಟಿ ಬಿಡುಗಡೆ ಮಾಡಿದೆ. ಗೃಹ ಸಚಿವಾಲಯ (MHA) ಹೊರಡಿಸಿದ ಹೇಳಿಕೆಯ ಪ್ರಕಾರ, ಮಹಾರಾಷ್ಟ್ರಕ್ಕೆ ₹ 1,492 ಕೋಟಿ, ಆಂಧ್ರಪ್ರದೇಶಕ್ಕೆ ₹ 1,036 ಕೋಟಿ, ಅಸ್ಸಾಂಗೆ ₹ 716 ಕೋಟಿ, ಬಿಹಾರಕ್ಕೆ ₹ 655.60 ಕೋಟಿ, ಗುಜರಾತ್‌ಗೆ ₹ 600 ಕೋಟಿ ಮತ್ತು ಹಿಮಾಚಲ ಪ್ರದೇಶಕ್ಕೆ ₹ 189.20 ಕೋಟಿ ನೀಡಲಾಗಿದೆ.

ಕೇರಳಕ್ಕೆ ₹ 145.60 ಕೋಟಿ, ಮಣಿಪುರಕ್ಕೆ ₹ 50 ಕೋಟಿ, ಮಿಜೋರಾಂಗೆ ₹ 21.60 ಕೋಟಿ, ನಾಗಾಲ್ಯಾಂಡ್‌ಗೆ ₹ 19.20 ಕೋಟಿ, ಸಿಕ್ಕಿಂಗೆ ₹ 23.60 ಕೋಟಿ, ತೆಲಂಗಾಣಕ್ಕೆ ₹ 416.80 ಕೋಟಿ, ತ್ರಿಪುರಾಕ್ಕೆ ₹ 25 ಕೋಟಿ, ಪಶ್ಚಿಮ ಬಂಗಾಳಕ್ಕೆ ₹ 468 ಎಂದು ಎಂಎಚ್‌ಎ ಹೇಳಿಕೆ ತಿಳಿಸಿದೆ.

ಈ ವರ್ಷ ನೈಋತ್ಯ ಮಾನ್ಸೂನ್ ಸಮಯದಲ್ಲಿ ಈ ರಾಜ್ಯಗಳು ಅತಿ ಹೆಚ್ಚು ಮಳೆ, ಪ್ರವಾಹ ಮತ್ತು ಭೂಕುಸಿತದಿಂದ ಪ್ರಭಾವಿತವಾಗಿವೆ ಎಂದು ಸಚಿವಾಲಯ ಹೇಳಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಮತ್ತು ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ, ಮೋದಿ ಸರ್ಕಾರವು ಜನರು ಎದುರಿಸುತ್ತಿರುವ ಸಂಕಷ್ಟಗಳನ್ನು ತಗ್ಗಿಸುವಲ್ಲಿ ಪ್ರಕೃತಿ ವಿಕೋಪದಿಂದ ಪೀಡಿತ ರಾಜ್ಯಗಳೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಿಂತಿದೆ ಎಂದು ಸಚಿವಾಲಯ ಹೇಳಿದೆ.

ಪ್ರವಾಹ ಪೀಡಿತ ರಾಜ್ಯಗಳಿಗೆ ಅಂತರ ಸಚಿವಾಲಯದ ಕೇಂದ್ರ ತಂಡಗಳನ್ನು ಕಳುಹಿಸಲಾಗಿದೆ: MHA

ಸರ್ಕಾರದ ಹೇಳಿಕೆಯ ಪ್ರಕಾರ, ಅಂತರ-ಸಚಿವಾಲಯದ ಕೇಂದ್ರ ತಂಡಗಳನ್ನು (IMCT) ಮಿಜೋರಾಂ, ಅಸ್ಸಾಂ, ಕೇರಳ, ನಾಗಾಲ್ಯಾಂಡ್, ತ್ರಿಪುರಾ, ಗುಜರಾತ್, ಆಂಧ್ರಪ್ರದೇಶ, ತೆಲಂಗಾಣ ಮತ್ತು ಮಣಿಪುರಕ್ಕೆ ಹಾನಿಯ ಸ್ಥಳದಲ್ಲೇ ಮೌಲ್ಯಮಾಪನ ಮಾಡಲು ಕಳುಹಿಸಲಾಗಿದೆ.

ಇತ್ತೀಚೆಗೆ ಪ್ರವಾಹದಿಂದ ಹಾನಿಗೊಳಗಾದ ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ಹಾನಿಯ ಸ್ಥಳದಲ್ಲೇ ಮೌಲ್ಯಮಾಪನ ಮಾಡಲು IMCT ಗಳನ್ನು ಕಳುಹಿಸಲಾಗುವುದು ಎಂದು ಸರ್ಕಾರ ಹೇಳಿದೆ.

IMCTಗಳ ಮೌಲ್ಯಮಾಪನ ವರದಿಗಳನ್ನು ಸ್ವೀಕರಿಸಿದ ನಂತರ, ವಿಪತ್ತು ಪೀಡಿತ ರಾಜ್ಯಗಳಿಗೆ NDRF ನಿಂದ ಹೆಚ್ಚುವರಿ ಹಣಕಾಸಿನ ನೆರವನ್ನು ಅನುಮೋದಿಸಲಾಗುತ್ತದೆ ಎಂದು ಗೃಹ ಸಚಿವಾಲಯ ಹೇಳಿದೆ.

ಇದನ್ನೂ ಓದಿ: ಹರ್ಯಾಣ ಚುನಾವಣೆ ಗೆಲ್ಲಲು ಬಿಜೆಪಿ ರಾಮ್ ರಹೀಮ್, ಕೇಜ್ರಿವಾಲ್​​ನ್ನು ಬಿಡುಗಡೆ ಮಾಡಿದೆ: ರಾಬರ್ಟ್ ವಾದ್ರಾ

ಈ ವರ್ಷ ಈಗಾಗಲೇ 21 ರಾಜ್ಯಗಳಿಗೆ ₹14,958 ಕೋಟಿಗೂ ಹೆಚ್ಚು ಹಣ ಬಿಡುಗಡೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಇದು ಎಸ್‌ಡಿಆರ್‌ಎಫ್‌ನಿಂದ 21 ರಾಜ್ಯಗಳಿಗೆ ₹9,044.80 ಕೋಟಿ, ಎನ್‌ಡಿಆರ್‌ಎಫ್‌ನಿಂದ 15 ರಾಜ್ಯಗಳಿಗೆ ₹4,528.66 ಕೋಟಿ ಮತ್ತು ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ (ಎಸ್‌ಡಿಎಂಎಫ್) 11 ರಾಜ್ಯಗಳಿಗೆ ₹1385.45 ಕೋಟಿ ಆಗಿದೆ.

ಪ್ರವಾಹ ಪೀಡಿತ ಎಲ್ಲಾ ರಾಜ್ಯಗಳಿಗೆ ಅಗತ್ಯವಿರುವ ಎನ್‌ಡಿಆರ್‌ಎಫ್ ತಂಡಗಳು, ಸೇನಾ ತಂಡಗಳು ಮತ್ತು ವಾಯುಪಡೆಯ ಬೆಂಬಲ ಸೇರಿದಂತೆ ಎಲ್ಲಾ ಲಾಜಿಸ್ಟಿಕ್ ನೆರವನ್ನು ಸಹ ಒದಗಿಸಿದೆ ಎಂದು ಕೇಂದ್ರ ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?