AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನ್​​ ಪರಿಸ್ಥಿತಿ ಬಗ್ಗೆ ಚರ್ಚಿಸಲು, ಆ.26ರಂದು ಸರ್ವಪಕ್ಷಗಳ ಸಭೆ ಕರೆದ ಕೇಂದ್ರ ಸರ್ಕಾರ

ಅಫ್ಘಾನ್​ನಲ್ಲಿ ನಡೆಯುತ್ತಿರುವ ಬೆಳವಣಿಗೆ ಬಗ್ಗೆ ಎಲ್ಲ ಪಕ್ಷಗಳ ನಾಯಕರಿಗೂ ಸರಿಯಾಗಿ ವಿವರಣೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಸೂಚನೆ ನೀಡಿದ್ದಾರೆ.

ಅಫ್ಘಾನ್​​ ಪರಿಸ್ಥಿತಿ ಬಗ್ಗೆ ಚರ್ಚಿಸಲು, ಆ.26ರಂದು ಸರ್ವಪಕ್ಷಗಳ ಸಭೆ ಕರೆದ ಕೇಂದ್ರ ಸರ್ಕಾರ
ಸರ್ವಪಕ್ಷಗಳ ಸಭೆ ಕರೆದ ಕೇಂದ್ರ ಸರ್ಕಾರ
TV9 Web
| Edited By: |

Updated on:Aug 23, 2021 | 4:42 PM

Share

ದೆಹಲಿ: ಅಫ್ಘಾನಿಸ್ತಾನದಲ್ಲಿ ಇರುವ ಬಿಕ್ಕಟ್ಟಿನ ಪರಿಸ್ಥಿತಿ, ಅಲ್ಲಿನ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ಕೇಂದ್ರ ಸರ್ಕಾರ ಆಗಸ್ಟ್​ 26ರಂದು ಸರ್ವಪಕ್ಷಗಳ ಸಭೆ ಕರೆದಿದೆ. ಕಳೆದ ವಾರ ತಾಲಿಬಾನ್​ ಉಗ್ರರು ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿದ್ದಾರೆ. ಆಗಿನಿಂದಲೂ ಅಫ್ಘಾನಿಸ್ತಾನದ ಚಿತ್ರಣವೇ ಬದಲಾಗಿದೆ. ಆ ದೇಶದಲ್ಲಿರುವ ಭಾರತೀಯರನ್ನು ಸ್ಥಳಾಂತರ ಮಾಡುವ ಕಾರ್ಯವೂ ಭರದಿಂದ ಸಾಗುತ್ತಿದೆ. ಅಫ್ಘಾನಿಸ್ತಾನ ಅಲ್ಪಸಂಖ್ಯಾತರಾದ ಹಿಂದು ಮತ್ತು ಸಿಖ್​ರಿಗೆ ಆಶ್ರಯ ನೀಡುವುದಾಗಿ ಮತ್ತು ಅಫ್ಘಾನಿಸ್ತಾನದ ಜನರಿಗೆ ನೆರವು ನೀಡಲು ಸಿದ್ಧರಿದ್ದೇವೆಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್​.ಜೈಶಂಕರ್​ ಹೇಳಿದ್ದಾರೆ. ಒಟ್ಟಾರೆ ಅಫ್ಘಾನ್​ ಪರಿಸ್ಥಿತಿ ಬಗ್ಗೆ ಚರ್ಚಿಸಲು ಆಗಸ್ಟ್​ 26ರಂದು ಬೆಳಗ್ಗೆ 11 ಗಂಟೆಗೆ ಸರ್ವಪಕ್ಷಗಳ ಸಭೆ ಕರೆದಿದ್ದಾಗಿ ಕೇಂದ್ರ ಸರ್ಕಾರ ಹೇಳಿದೆ.

ಅಫ್ಘಾನ್​ನಲ್ಲಿ ನಡೆಯುತ್ತಿರುವ ಬೆಳವಣಿಗೆ ಬಗ್ಗೆ ಎಲ್ಲ ಪಕ್ಷಗಳ ನಾಯಕರಿಗೂ ಸರಿಯಾಗಿ ವಿವರಣೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಈ ಸಭೆ ಕರೆಯಲಾಗಿದೆ. ಈ ಬಗ್ಗೆ ಟ್ವೀಟ್​ ಮಾಡಿದ್ದ ಸಚಿವ ಜೈಶಂಕರ್​, ಅಫ್ಘಾನ್​ ಬೆಳವಣಿಗೆ ಬಗ್ಗೆ ಪ್ರತಿಪಕ್ಷಗಳ ನಾಯಕರಿಗೆ ವಿವರಿಸುವಂತೆ ನರೇಂದ್ರ ಮೋದಿಯವರು ಸೂಚಿಸಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿಗಳನ್ನು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್​ ಜೋಶಿ ನೀಡಲಿದ್ದಾರೆ ಎಂದು ತಿಳಿಸಿದ್ದರು.

ಇದನ್ನೂ ಓದಿ: ಅಫ್ಘಾನ್​ ಕ್ರಿಕೆಟರ್​ ಜತೆ ಮದುವೆಗೆ ಸಿದ್ಧವಾಗಿದ್ದ ಬಿಗ್​ ಬಾಸ್​ ಸ್ಪರ್ಧಿ; ತಾಲಿಬಾನ್​ ಭಯದಿಂದ ಸಂಬಂಧಕ್ಕೆ ಎಳ್ಳು-ನೀರು

ಇನ್ನೊಬ್ಬರ ಜತೆ ಸರ್ಕಾರ ರಚಿಸಲು ಆಗದು, ಸ್ವತಂತ್ರ ಸರ್ಕಾರ ರಚಿಸಲು ಅವಕಾಶ ಮಾಡಿಕೊಡಿ: ಕುಮಾರಸ್ವಾಮಿ ಮನವಿ

Published On - 4:01 pm, Mon, 23 August 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್