AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನ್​​ ಪರಿಸ್ಥಿತಿ ಬಗ್ಗೆ ಚರ್ಚಿಸಲು, ಆ.26ರಂದು ಸರ್ವಪಕ್ಷಗಳ ಸಭೆ ಕರೆದ ಕೇಂದ್ರ ಸರ್ಕಾರ

ಅಫ್ಘಾನ್​ನಲ್ಲಿ ನಡೆಯುತ್ತಿರುವ ಬೆಳವಣಿಗೆ ಬಗ್ಗೆ ಎಲ್ಲ ಪಕ್ಷಗಳ ನಾಯಕರಿಗೂ ಸರಿಯಾಗಿ ವಿವರಣೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಸೂಚನೆ ನೀಡಿದ್ದಾರೆ.

ಅಫ್ಘಾನ್​​ ಪರಿಸ್ಥಿತಿ ಬಗ್ಗೆ ಚರ್ಚಿಸಲು, ಆ.26ರಂದು ಸರ್ವಪಕ್ಷಗಳ ಸಭೆ ಕರೆದ ಕೇಂದ್ರ ಸರ್ಕಾರ
ಸರ್ವಪಕ್ಷಗಳ ಸಭೆ ಕರೆದ ಕೇಂದ್ರ ಸರ್ಕಾರ
TV9 Web
| Edited By: |

Updated on:Aug 23, 2021 | 4:42 PM

Share

ದೆಹಲಿ: ಅಫ್ಘಾನಿಸ್ತಾನದಲ್ಲಿ ಇರುವ ಬಿಕ್ಕಟ್ಟಿನ ಪರಿಸ್ಥಿತಿ, ಅಲ್ಲಿನ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ಕೇಂದ್ರ ಸರ್ಕಾರ ಆಗಸ್ಟ್​ 26ರಂದು ಸರ್ವಪಕ್ಷಗಳ ಸಭೆ ಕರೆದಿದೆ. ಕಳೆದ ವಾರ ತಾಲಿಬಾನ್​ ಉಗ್ರರು ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿದ್ದಾರೆ. ಆಗಿನಿಂದಲೂ ಅಫ್ಘಾನಿಸ್ತಾನದ ಚಿತ್ರಣವೇ ಬದಲಾಗಿದೆ. ಆ ದೇಶದಲ್ಲಿರುವ ಭಾರತೀಯರನ್ನು ಸ್ಥಳಾಂತರ ಮಾಡುವ ಕಾರ್ಯವೂ ಭರದಿಂದ ಸಾಗುತ್ತಿದೆ. ಅಫ್ಘಾನಿಸ್ತಾನ ಅಲ್ಪಸಂಖ್ಯಾತರಾದ ಹಿಂದು ಮತ್ತು ಸಿಖ್​ರಿಗೆ ಆಶ್ರಯ ನೀಡುವುದಾಗಿ ಮತ್ತು ಅಫ್ಘಾನಿಸ್ತಾನದ ಜನರಿಗೆ ನೆರವು ನೀಡಲು ಸಿದ್ಧರಿದ್ದೇವೆಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್​.ಜೈಶಂಕರ್​ ಹೇಳಿದ್ದಾರೆ. ಒಟ್ಟಾರೆ ಅಫ್ಘಾನ್​ ಪರಿಸ್ಥಿತಿ ಬಗ್ಗೆ ಚರ್ಚಿಸಲು ಆಗಸ್ಟ್​ 26ರಂದು ಬೆಳಗ್ಗೆ 11 ಗಂಟೆಗೆ ಸರ್ವಪಕ್ಷಗಳ ಸಭೆ ಕರೆದಿದ್ದಾಗಿ ಕೇಂದ್ರ ಸರ್ಕಾರ ಹೇಳಿದೆ.

ಅಫ್ಘಾನ್​ನಲ್ಲಿ ನಡೆಯುತ್ತಿರುವ ಬೆಳವಣಿಗೆ ಬಗ್ಗೆ ಎಲ್ಲ ಪಕ್ಷಗಳ ನಾಯಕರಿಗೂ ಸರಿಯಾಗಿ ವಿವರಣೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಈ ಸಭೆ ಕರೆಯಲಾಗಿದೆ. ಈ ಬಗ್ಗೆ ಟ್ವೀಟ್​ ಮಾಡಿದ್ದ ಸಚಿವ ಜೈಶಂಕರ್​, ಅಫ್ಘಾನ್​ ಬೆಳವಣಿಗೆ ಬಗ್ಗೆ ಪ್ರತಿಪಕ್ಷಗಳ ನಾಯಕರಿಗೆ ವಿವರಿಸುವಂತೆ ನರೇಂದ್ರ ಮೋದಿಯವರು ಸೂಚಿಸಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿಗಳನ್ನು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್​ ಜೋಶಿ ನೀಡಲಿದ್ದಾರೆ ಎಂದು ತಿಳಿಸಿದ್ದರು.

ಇದನ್ನೂ ಓದಿ: ಅಫ್ಘಾನ್​ ಕ್ರಿಕೆಟರ್​ ಜತೆ ಮದುವೆಗೆ ಸಿದ್ಧವಾಗಿದ್ದ ಬಿಗ್​ ಬಾಸ್​ ಸ್ಪರ್ಧಿ; ತಾಲಿಬಾನ್​ ಭಯದಿಂದ ಸಂಬಂಧಕ್ಕೆ ಎಳ್ಳು-ನೀರು

ಇನ್ನೊಬ್ಬರ ಜತೆ ಸರ್ಕಾರ ರಚಿಸಲು ಆಗದು, ಸ್ವತಂತ್ರ ಸರ್ಕಾರ ರಚಿಸಲು ಅವಕಾಶ ಮಾಡಿಕೊಡಿ: ಕುಮಾರಸ್ವಾಮಿ ಮನವಿ

Published On - 4:01 pm, Mon, 23 August 21

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ