AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನ್​​ ಪರಿಸ್ಥಿತಿ ಬಗ್ಗೆ ಚರ್ಚಿಸಲು, ಆ.26ರಂದು ಸರ್ವಪಕ್ಷಗಳ ಸಭೆ ಕರೆದ ಕೇಂದ್ರ ಸರ್ಕಾರ

ಅಫ್ಘಾನ್​ನಲ್ಲಿ ನಡೆಯುತ್ತಿರುವ ಬೆಳವಣಿಗೆ ಬಗ್ಗೆ ಎಲ್ಲ ಪಕ್ಷಗಳ ನಾಯಕರಿಗೂ ಸರಿಯಾಗಿ ವಿವರಣೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಸೂಚನೆ ನೀಡಿದ್ದಾರೆ.

ಅಫ್ಘಾನ್​​ ಪರಿಸ್ಥಿತಿ ಬಗ್ಗೆ ಚರ್ಚಿಸಲು, ಆ.26ರಂದು ಸರ್ವಪಕ್ಷಗಳ ಸಭೆ ಕರೆದ ಕೇಂದ್ರ ಸರ್ಕಾರ
ಸರ್ವಪಕ್ಷಗಳ ಸಭೆ ಕರೆದ ಕೇಂದ್ರ ಸರ್ಕಾರ
TV9 Web
| Updated By: Lakshmi Hegde|

Updated on:Aug 23, 2021 | 4:42 PM

Share

ದೆಹಲಿ: ಅಫ್ಘಾನಿಸ್ತಾನದಲ್ಲಿ ಇರುವ ಬಿಕ್ಕಟ್ಟಿನ ಪರಿಸ್ಥಿತಿ, ಅಲ್ಲಿನ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ಕೇಂದ್ರ ಸರ್ಕಾರ ಆಗಸ್ಟ್​ 26ರಂದು ಸರ್ವಪಕ್ಷಗಳ ಸಭೆ ಕರೆದಿದೆ. ಕಳೆದ ವಾರ ತಾಲಿಬಾನ್​ ಉಗ್ರರು ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿದ್ದಾರೆ. ಆಗಿನಿಂದಲೂ ಅಫ್ಘಾನಿಸ್ತಾನದ ಚಿತ್ರಣವೇ ಬದಲಾಗಿದೆ. ಆ ದೇಶದಲ್ಲಿರುವ ಭಾರತೀಯರನ್ನು ಸ್ಥಳಾಂತರ ಮಾಡುವ ಕಾರ್ಯವೂ ಭರದಿಂದ ಸಾಗುತ್ತಿದೆ. ಅಫ್ಘಾನಿಸ್ತಾನ ಅಲ್ಪಸಂಖ್ಯಾತರಾದ ಹಿಂದು ಮತ್ತು ಸಿಖ್​ರಿಗೆ ಆಶ್ರಯ ನೀಡುವುದಾಗಿ ಮತ್ತು ಅಫ್ಘಾನಿಸ್ತಾನದ ಜನರಿಗೆ ನೆರವು ನೀಡಲು ಸಿದ್ಧರಿದ್ದೇವೆಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್​.ಜೈಶಂಕರ್​ ಹೇಳಿದ್ದಾರೆ. ಒಟ್ಟಾರೆ ಅಫ್ಘಾನ್​ ಪರಿಸ್ಥಿತಿ ಬಗ್ಗೆ ಚರ್ಚಿಸಲು ಆಗಸ್ಟ್​ 26ರಂದು ಬೆಳಗ್ಗೆ 11 ಗಂಟೆಗೆ ಸರ್ವಪಕ್ಷಗಳ ಸಭೆ ಕರೆದಿದ್ದಾಗಿ ಕೇಂದ್ರ ಸರ್ಕಾರ ಹೇಳಿದೆ.

ಅಫ್ಘಾನ್​ನಲ್ಲಿ ನಡೆಯುತ್ತಿರುವ ಬೆಳವಣಿಗೆ ಬಗ್ಗೆ ಎಲ್ಲ ಪಕ್ಷಗಳ ನಾಯಕರಿಗೂ ಸರಿಯಾಗಿ ವಿವರಣೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಈ ಸಭೆ ಕರೆಯಲಾಗಿದೆ. ಈ ಬಗ್ಗೆ ಟ್ವೀಟ್​ ಮಾಡಿದ್ದ ಸಚಿವ ಜೈಶಂಕರ್​, ಅಫ್ಘಾನ್​ ಬೆಳವಣಿಗೆ ಬಗ್ಗೆ ಪ್ರತಿಪಕ್ಷಗಳ ನಾಯಕರಿಗೆ ವಿವರಿಸುವಂತೆ ನರೇಂದ್ರ ಮೋದಿಯವರು ಸೂಚಿಸಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿಗಳನ್ನು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್​ ಜೋಶಿ ನೀಡಲಿದ್ದಾರೆ ಎಂದು ತಿಳಿಸಿದ್ದರು.

ಇದನ್ನೂ ಓದಿ: ಅಫ್ಘಾನ್​ ಕ್ರಿಕೆಟರ್​ ಜತೆ ಮದುವೆಗೆ ಸಿದ್ಧವಾಗಿದ್ದ ಬಿಗ್​ ಬಾಸ್​ ಸ್ಪರ್ಧಿ; ತಾಲಿಬಾನ್​ ಭಯದಿಂದ ಸಂಬಂಧಕ್ಕೆ ಎಳ್ಳು-ನೀರು

ಇನ್ನೊಬ್ಬರ ಜತೆ ಸರ್ಕಾರ ರಚಿಸಲು ಆಗದು, ಸ್ವತಂತ್ರ ಸರ್ಕಾರ ರಚಿಸಲು ಅವಕಾಶ ಮಾಡಿಕೊಡಿ: ಕುಮಾರಸ್ವಾಮಿ ಮನವಿ

Published On - 4:01 pm, Mon, 23 August 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ